ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರ ಬರೆದಿಟ್ಟ ಪ್ರಕರಣಕ್ಕೆ ಹೊಸ ತಿರುವು
ಚಿಕ್ಕಮಗಳೂರು, ಡಿಸೆಂಬರ್ 21: ಶ್ರೀಗಂಧ ಬೆಳೆದ ಬೆಳೆಗಾರನ ಜಮೀನಿನಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುತ್ತಿದ್ದು, ಶ್ರೀಗಂಧ ಬೆಳೆದ ರೈತನಿಗೆ ಸಕಾಲದಲ್ಲಿ ಸಮರ್ಪಕ ಪರಿಹಾರ ನೀಡಿಲ್ಲವೆಂಬ ಕಾರಣಕ್ಕೆ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರ ಬರೆದಿಟ್ಟ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಮನಸ್ಸಿಗೆ ಬೇಸತ್ತು ಹೀಗೆ ಮಾಡಿದೆ ಎಂದು ಉಲ್ಟಾ ಹೊಡೆದಿರುವ ಘಟನೆ ಸೋಮವಾರ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಸಮೀಪದ ಹಳಿಯೂರು ಗ್ರಾಮದ 22 ರೈತರು ತಮ್ಮ ಜಮೀನಿನಲ್ಲಿ ಶ್ರೀಗಂಧ ಬೆಳೆದಿದ್ದಾರೆ. ಅದರಲ್ಲಿ ವಿಶುಕುಮಾರ್ ತಮ್ಮ ಜಮೀನಿನಲ್ಲಿ ಶ್ರೀಗಂಧ ಬೆಳೆದಿದ್ದರು. ತರೀಕೆರೆ ಬೈಪಾಸ್ ರಾಷ್ಟ್ರೀಯ ಹೆದ್ದಾರಿ ನಿರ್ಮಿಸಲು ಮುಂದಾಗಿರುವುದರಿಂದ ಕಳೆದ 8 ರಿಂದ 10 ವರ್ಷಗಳಿಂದ ಬೆಳೆದಿದ್ದ ಶ್ರೀಗಂಧ ಮರಗಳು ನಾಶವಾಗಲಿವೆ ಎಂದು ವಿಡಿಯೋದಲ್ಲಿ ತಮ್ಮ ಅಳಲು ತೋಡಿಕೊಂಡಿದ್ದರು.

ಶ್ರೀಗಂಧ ಬೆಳೆದ ರೈತರಿಗೆ ಸಮರ್ಪಕ ಪರಿಹಾರ ನೀಡುವಂತೆ ಹೈಕೋರ್ಟ್ ಎನ್ಎಚ್ಎಐಗೆ ಆದೇಶ ನೀಡಿದ್ದು, ಸಮರ್ಪಕ ಪರಿಹಾರ ನೀಡಿಲ್ಲ. ಈ ಸಂಬಂಧ ಪ್ರತಿಭಟನೆಯನ್ನು ನಡೆಸಿದ್ದರು. ಒಂದು ಮರಕ್ಕೆ 30 ವರ್ಷ ಜೀವಿತಾವಧಿಯ ಲೆಕ್ಕಚಾರದಲ್ಲಿ 2 ಲಕ್ಷ 44 ಸಾವಿರ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶ ನೀಡಿದೆ. ಆದರೆ, ಎನ್ಎಚ್ಎಐ ಸಮರ್ಪಕ ಪರಿಹಾರದ ಹಣವನ್ನು ಸಕಾಲಕ್ಕೆ ನೀಡುತ್ತಿಲ್ಲ ಎಂದು ಆರೋಪಿಸಿದ್ದರು.
ಎನ್ಎಚ್ಎಐ ತುಮಕೂರು ಕಚೇರಿ ಎದುರು ಆತ್ಮಹತ್ಯೆಗೆ ಶರಣಾಗುವುದಾಗಿ ವಿಡಿಯೋ ಮತ್ತು ಡೆತ್ನೋಟ್ನಲ್ಲಿ ತಿಳಿಸಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸದ್ಯ ಅಧಿಕಾರಿಗಳು ವಿಶುಕುಮಾರ್ ಮನವೊಲಿಸಿದ್ದು, ತೋಟಕ್ಕೆ ಹೋದಾಗ ಬೇಜಾರು ಆಗಿ ಈ ರೀತಿ ಮಾಡಿದೆ. ಮುಂದೆ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇನೆಂದು ಮತ್ತೊಂದು ವಿಡಿಯೋ ಮಾಡಿ ತಿಳಿಸಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications