ಮತಿಘಟ್ಟ ಬಳಿ ಕಾರು ಮತ್ತು ಟಿಟಿ ವಾಹನದ ನಡುವೆ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಮಗು ಸೇರಿ ಇಬ್ಬರು ಸಾವು
ಕಡೂರು, ಮೇ, 11: ಕಾರು ಹಾಗೂ ಟಿಟಿ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಮತಿಘಟ್ಟ ಗ್ರಾಮದ ಕ್ರಾಸ್ನಲ್ಲಿ ನಡೆದಿದೆ.
ಬೆಂಗಳೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಕಾರಿನಲ್ಲಿದ್ದ ಗಿರಿಧರ್ (46), ಮೂರು ವರ್ಷದ ಬಾಲಕ ಮಯಾಂಕ್ ಮೃತ ದುರ್ದೈವಿಗಳಾಗಿದ್ದಾರೆ.

ಸಂಬಂಧಿಕರ ಮದುವೆ ನಿಮಿತ್ತ ಹೊನ್ನಾವರದಿಂದ ಗಿರಿಧರ್ ಕುಟುಂಬದವರು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕೇರಳದಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬರುತ್ತಿದ್ದ ಟಿ.ಟಿ.ವಾಹನ ಮತ್ತು ಕಾರು ಡಿಕ್ಕಿಯಾಗಿವೆ. ಡಿಕ್ಕಿಯಾದ ರಭಸಕ್ಕೆ ಟಿಟಿ ವಾಹನ ಪಲ್ಟಿಯಾಗಿದ್ದು, ಮತ್ತೊಂದೆಡೆ ಕಾರಿನಲ್ಲಿದ್ದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹಾಗೆಯೆ ಟಿ.ಟಿ ವಾಹನದಲ್ಲಿದ್ದ ಕೇರಳ ಮೂಲದ 7 ಪ್ರವಾಸಿಗರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಕೂಡಲೇ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಜಿಲ್ಲೆಯ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತದಲ್ಲಿ ಕರ್ತವ್ಯನಿರತ ಪಿಎಸ್ಐ ಸಾವು
ಇಂತಹ ಅಪಘಾತಗಳು ಇದೇ ಮೊದಲೇನಲ್ಲ, ತುಂಬಾ ಕಡೆ ನಡೆದಿವೆ. ಕಾರು ಬ್ರಿಡ್ಜ್ಗೆ ಗುದ್ದಿದ್ದ ಪರಿಣಾಮ ಕರ್ತವ್ಯನಿರತ ಪಿಎಸ್ಐ ಸಾವನ್ನಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರ ಬಳಿ ಗ್ರಾಮದ ಬಳಿ ಇತ್ತೀಚೆಗಷ್ಟೇ ನಡೆದಿತ್ತು.
ಮೂಲತಃ ನವಲಗುಂದ ತಾಲೂಕಿನ ಕುಮಾರಗೊಪ್ಪ ಗ್ರಾಮದ ನಿವಾಸಿಯಾದ ಇವರು ನಿಯಂತ್ರಣ ತಪ್ಪಿದ ಕಾರಣ ಕಾರು ಬ್ರಿಡ್ಜ್ಗೆ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಪಿಎಸ್ಐ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ನವಲಗುಂದ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications