ಹಣ ದುರುಪಯೋಗ ಆರೋಪ; ಬಿಲ್ಡಿಂಗ್ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನ
ಚಿಕ್ಕಮಗಳೂರು, ಡಿಸೆಂಬರ್ 21: ವ್ಯವಸಾಯೋತ್ಪನ್ನ ಸಹಕಾರ ಮಾರಾಟ ಸಮಿತಿಯಲ್ಲಿ ಮೂವತ್ತು ಲಕ್ಷ ರೂ. ಹಣ ದುರುಪಯೋಗ ಆರೋಪ ಕೇಳಿ ಬಂದ ಹಿನ್ನೆಲೆ ಸಹಕಾರ ಮಾರಾಟ ಸಮಿತಿಯ ಮಾಜಿ ಅಧ್ಯಕ್ಷ ಬಿಲ್ಡಿಂಗ್ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಮೂಡಿಗೆರೆ ತಾಲೂಕಿನ ಮಗ್ಗಲಮಕ್ಕಿ ಲಕ್ಷ್ಮಣ ಗೌಡ ಎಂದು ಗುರುತಿಸಲಾಗಿದೆ. ಮೂಡಿಗೆರೆ ತಾಲೂಕಿನ ಮಗ್ಗಲಮಕ್ಕಿ ಗ್ರಾಮದ ವ್ಯವಸಾಯೋತ್ಪನ್ನ ಸಹಕಾರ ಮಾರಾಟ ಸಮಿತಿ ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಮೇಲೆ ಮೂವತ್ತು ಲಕ್ಷ ಹಣ ದುರುಪಯೋಗದ ಆರೋಪ ಕೇಳಿ ಬಂದಿತ್ತು.
ಹಣ ದುರುಪಯೋಗ ಆರೋಪ ಕೇಳಿ ಬಂದ ಹಿನ್ನೆಲೆ ಸೋಮವಾರ ಎಪಿಎಂಸಿಯ ರೈತ ಭವನದಲ್ಲಿ ನಡೆಯುತ್ತಿದ್ದ ಸಹಕಾರ ಸಮಿತಿಯ ಸಭೆಯಲ್ಲಿ ಲಕ್ಷ್ಮಣ ಗೌಡರಿಗೆ ಮಾತನಾಡಲು ಅವಕಾಶ ಕೊಟ್ಟಿಲ್ಲ. ಇದರಿಂದ ಮನನೊಂದು ಆಕ್ರೋಶಗೊಂಡ ಲಕ್ಷ್ಮಣ ಗೌಡ, ನಾನು ಹಣ ದುರುಪಯೋಗ ಮಾಡಿಕೊಂಡಿಲ್ಲ, ನೀವೆಲ್ಲಾ ನನ್ನ ಮೇಲೆ ಆರೋಪ ಮಾಡುತ್ತಿದ್ದೀರಾ, ನಾನು ಸಾಯುತ್ತೇನೆ ಎಂದು ಏಕಾಏಕಿ ರೈತ ಭವನದ ಕಟ್ಟಡ ಏರಿದ್ದಾರೆ.

ಈ ವೇಳೆ ಕಟ್ಟಡ ಏರಿದ್ದ ಲಕ್ಷ್ಮಣ ಗೌಡರನ್ನು ಕೆಳಗಿಳಿಸಲು ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ. ಸ್ಥಳಕ್ಕೆ ಆಗಮಿಸಿದ ಮೂಡಿಗೆರೆ ಪೊಲೀಸರು ಕೂಡ ಬಿಲ್ಡಿಂಗ್ ಏರಿದ್ದ ಲಕ್ಷ್ಮಣ ಅವರನ್ನ ಕೆಳಗಿಳಿಸಲು ಹರಸಾಹಸಪಟ್ಟರು. ಬಳಿಕ ಸುಮಾರು ಒಂದು ಗಂಟೆಯ ಬಳಿಕ ಕಟ್ಟಡ ಏರಿದ್ದ ವ್ಯಕ್ತಿಯ ಗಮನವನ್ನು ಬೇರೆಡೆ ಸೆಳೆದು, ಹಿಂದೆಯಿಂದ ಇಬ್ಬರು ಯುವಕರು ಹೋಗಿ ವ್ಯಕ್ತಿಯನ್ನು ಹಿಡಿದು ಲಾಕ್ ಮಾಡಿ ರಕ್ಷಿಸಿದ್ದಾರೆ.
ನಂತರ ಸಭೆಯಲ್ಲಿ ಭಾಗಿಯಾದ ಲಕ್ಷ್ಮಣಗೌಡ ನನ್ನನ್ನು ಎಲ್ಲರೂ ಸೇರಿ ಸಾಯಿಸುವುದಕ್ಕೆ ಹೊರಟಿದ್ದೀರಾ ಎಂದು ಸದಸ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತಿನ ಚಕಮಕಿ, ನೂಕಾಟ-ತಳ್ಳಾಟ ಕೂಡ ನಡೆಯಿತು. ಸ್ಥಳೀಯರು ಹಾಗೂ ಸಭೆಯಲ್ಲಿ ನೆರೆದಿದ್ದ ಸದಸ್ಯರು ನೀವು ಹಿರಿಯರು, ಬುದ್ಧಿ ಹೇಳಬೇಕಾದವರು. ನೀವೇ ಹೀಗೆ ಮಾಡಿದ್ದು ಸರಿಯಲ್ಲ ಎಂದು ಲಕ್ಷ್ಮಣ ಗೌಡರನ್ನು ತರಾಟೆಗೆ ತೆಗೆದುಕೊಂಡರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications