ಚಿಕ್ಕಮಗಳೂರು: ರಾತ್ರೋರಾತ್ರಿ ಪ್ರತ್ಯಕ್ಷವಾದ ಅಂಬೇಡ್ಕರ್ ಪ್ರತಿಮೆ ತೆರವು
ಚಿಕ್ಕಮಗಳೂರು, ಡಿಸೆಂಬರ್ 5: ಗೋಮಾಳ ಜಮೀನು ಮಂಜೂರು ಮಾಡುವಂತೆ ಒತ್ತಾಯಿಸಿ ಜಿಲ್ಲೆಯ ಅರಿಶಿನಗುಪ್ಪೆ ಗ್ರಾಮದ ಅರಣ್ಯ ಜಾಗದಲ್ಲಿ ರಾತ್ರೋರಾತ್ರಿ ಪ್ರತಿಷ್ಠಾಪನೆ ಮಾಡಲಾಗಿದ್ದ ಅಂಬೇಡ್ಕರ್ ಪ್ರತಿಮೆಯನ್ನು ಪೊಲೀಸರು ಗುರುವಾರ ಸಂಜೆ ತೆರವುಗೊಳಿಸಿದರು.
ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆಯಿತು. ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು. ಪೊಲೀಸರು ಪ್ರತಿಮೆಯನ್ನು ತೆರವುಗೊಳಿಸಲು ಮುಂದಾದಾಗ ಮಹಿಳೆಯರು ಪ್ರತಿಮೆಯನ್ನು ತಬ್ಬಿಗೊಂಡು, ಅದನ್ನು ಅಲ್ಲಿಂದ ಕದಲಿಸಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ನಾಲ್ಕು ದಿನಗಳನ ಹಿಂದೆ ರಾತ್ರಿ ಬೆಳಗಾಗುವುದರಲ್ಲಿ ಅರಣ್ಯದಲ್ಲಿ ಅಂಬೇಡ್ಕರ್ ಪ್ರತಿಮೆ ಅರಣ್ಯದಲ್ಲಿ ಪ್ರತಿಷ್ಠಾಪನೆ ಮಾಡಿ ಗ್ರಾಮಸ್ಥರು ಜಮೀನಿಗಾಗಿ ಹೋರಾಟ ಆರಂಭಿಸಿದ್ದರು. ಅದನ್ನು ತೆರವುಗೊಳಿಸುವಂತೆ ಜಿಲ್ಲಾಡಳಿತ ಸೂಚಿಸಿದ್ದರೂ, ಉಪ ಚುನಾವಣೆ ಇದ್ದಿದ್ದರಿಂದ ಅದನ್ನು ಅಲ್ಲಿಂದ ತೆಗೆಯುವ ಸಾಹಸಕ್ಕೆ ಪೊಲೀಸರು ಮುಂದಾಗಿರಲಿಲ್ಲ. ಗುರುವಾರ ಉಪ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಅಧಿಕಾರಿಗಳು ಅಂಬೇಡ್ಕರ್ ಪ್ರತಿಮೆ ತೆರವುಗೊಳಿಸಿದರು.

ಚಿಕ್ಕಮಗಳೂರಿನ ಅರಿಶಿನಗುಪ್ಪೆ ಗ್ರಾಮದಲ್ಲಿ ಗೋಮಾಳದ ಜಾಗಕ್ಕಾಗಿ ರಾತ್ರೋರಾತ್ರಿ ಗುಡಿಸಲು ನಿರ್ಮಿಸಿ ಅಂಬೇಡ್ಕರ್ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು. ಗ್ರಾಮದ ಸರ್ವೆ ನಂ 52ರಲ್ಲಿ ಗುಡಿಸಲು ನಿರ್ಮಿಸಿ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲಾಗಿದ್ದು, ಅದನ್ನು ತೆರವುಗೊಳಿಸಲು ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಅಂಬೇಡ್ಕರ್ ಪ್ರತಿಮೆ ನೋಡಿ ವಾಪಸ್ಸಾಗಿದ್ದರು. ಈ ಜಾಗ ಅರಣ್ಯ ಇಲಾಖೆಗೆ ಸೇರಿದ್ದಾಗಿದ್ದು, ತಮಗೂ ಗೋಮಾಳ ನೀಡಬೇಕು ಎಂದು ಗ್ರಾಮಸ್ಥರು ಅಂಬೇಡ್ಕರ್ ಪ್ರತಿಮೆ ಮುಂದಿಟ್ಟುಕೊಂಡು ಪ್ರತಿಭಟನೆಗೆ ಇಳಿದಿದ್ದರು.
ಚಿಕ್ಕಮಗಳೂರು ತಹಶಿಲ್ದಾರ್ ನಂದ್ ಕುಮಾರ್ ನೇತೃತ್ವದಲ್ಲಿ ಕಾಡಿನಿಂದ ತೆರವುಗೊಳಿಸಿದ ಪ್ರತಿಮೆಯನ್ನು ಚಿಕ್ಕಮಗಳೂರು ನಗರದ ಅಲ್ಪ ಸಂಖ್ಯಾತರ ಮಹಿಳಾ ವಸತಿನಿಲಯದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಅಂಬೇಡ್ಕರ್ ಪ್ರತಿಮೆ ದುರುಪಯೋಗ ಪಡಿಸಿಕೊಂಡ ಕಾರಣ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂತೋಷ್ ವಿರುದ್ಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿಕೊಳ್ಳಲಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications