ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರಿನಲ್ಲಿ ಆನೆ ಅನುಮಾನಾಸ್ಪದ ಸಾವು

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಜುಲೈ 13: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಕುಂದೂರು ಸಮೀಪ ಆನೆಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ.

 ಕಾಡಿನಿಂದ ನಾಡಿಗೆ ಬಂದು ಜಾರಿ ಬಿದ್ದ ಕಾಡಾನೆ ಕಾಡಿನಿಂದ ನಾಡಿಗೆ ಬಂದು ಜಾರಿ ಬಿದ್ದ ಕಾಡಾನೆ

ಕುಂದೂರು ಎಸ್ಟೇಟ್ ಚಂದ್ರೇಗೌಡ ಎಂಬುವರ ಕಾಫಿ ತೋಟದಲ್ಲಿ ಗಂಡಾನೆಯೊಂದು ಸಾವನ್ನಪ್ಪಿದ್ದು, ಎಂಟು ವರ್ಷವಿರಬಹುದೆಂದು ಅಂದಾಜಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಕಾಡಿನಿಂದ ಎಸ್ಟೇಟ್, ಜಮೀನುಗಳಿಗೆ ಲಗ್ಗೆ ಇಡುವ ಕಾಡಾನೆಗಳು ಬೆಳೆಗಳನ್ನು ನಾಶಪಡಿಸುತ್ತಿವೆ. ಆಗೊಮ್ಮೆ ಈಗೊಮ್ಮೆ ಗ್ರಾಮಸ್ಥರ ಕಣ್ಣಿಗೆ ಬೀಳುತ್ತಲೂ ಇವೆ. ದಾಳಿ ನಡೆಸಿರುವ ಉದಾಹರಣೆಗಳೂ ಸಿಗುತ್ತಿವೆ.

An elephant has been found dead near Kundur in Mudigere

ಈ ಆನೆಯೂ ಕಾಫಿ ತೋಟಕ್ಕೆ ಲಗ್ಗೆ ಇಟ್ಟಿದ್ದು, ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

English summary
An elephant has been found dead near Kundur in Mudigere Taluk of Chikkamagaluru. It is suspected that elephant died by electric wire.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X