ಅರಸೀಕೆರೆ: ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಸಾರಿಗೆ (KSRTC) ಬಸ್
ಹಾಸನ, ಅಕ್ಟೋಬರ್, 16: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ (KSRTC) ಬಸ್ ಮನೆಗೆ ನುಗ್ಗಿದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಆಗುಂದ ಗ್ರಾಮದಲ್ಲಿ ನಡೆದಿದೆ.
ಅರಸೀಕೆರೆಯಿಂದ ಹುಳಿಯಾರಕ್ಕೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಆಗುಂದ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ್ದು, ಈ ವೇಳೆ ನಾಲ್ಕೈದು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೆ ಅರಸೀಕೆರೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಇನ್ನು ಭಾರೀ ಅನಾಹುತ ತಪ್ಪಿದೆ. ಸದ್ಯ ಅರಸೀಕೆಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನುವ ಮಾಹಿತಿ ಎಂದು ತಿಳಿದುಬಂದಿದೆ.

ಪ್ರಯಾಣಿಕರ ನೆರವಿಗೆ ಧಾವಿಸಿದ ಶಾಸಕಿ
ಇನ್ನು ಓವರ್ ಲೋಡ್ನಿಂದ ಸರ್ಕಾರಿ ಬಸ್ಮ ಪರ್ಚ್ ಕಟ್ ಆಗಿ ಸರ್ಕಾರಿ ಬಸ್ ರಸ್ತೆ ಮಧ್ಯೆ ನಿಂತು ಪ್ರಯಾಣಿಕರು ಪರದಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಜಾವಳಿ ಬಳಿ ಬುಧವಾರ (ಸೆಪ್ಟೆಂಬರ್ 21) ನಡೆದಿತ್ತು. ಈ ವೇಳೆ ಸ್ಥಳಕ್ಕೆ ಆಗಮಿಸಿದ್ದ ಶಾಸಕಿ ನಯನಾ ಮೋಟಮ್ಮ ಪ್ರಯಾಣಿಕರಿಗೆ ಬೇರೆ ಬಸ್ ಕಲ್ಪಿಸುವ ಕೆಲಸವನ್ನು ಮಾಡಿದ್ದರು.
ಬೆಂಗಳೂರಿನಿಂದ ಹೊರನಾಡಿಗೆ ಹೋಗುತ್ತಿದ್ದ 60 ಸೀಟ್ ಸರ್ಕಾರಿ ಬಸ್ನಲ್ಲಿ 110ಕ್ಕೂ ಹೆಚ್ಚು ಜನ ಇದ್ದರು. ಅದರಲ್ಲಿ, ಧಾರ್ಮಿಕ ಕ್ಷೇತ್ರದ ಪ್ರವಾಸಕ್ಕೆ ಬಂದಿದ್ದ ಮಹಿಳೆಯರೇ ಹೆಚ್ಚಾಗಿದ್ದರು. ಬಸ್ ಘಾಟಿ ರಸ್ತೆಯ ತಿರುವಿನಲ್ಲಿ ಓವರ್ ಲೋಡ್ನಿಂದ ಸಂಚರಿಸಲಾಗದೆ ಪರ್ಚ್ (ಬ್ಲೇಡ್) ಕಟ್ ಆಗಿ ಅಲ್ಲೇ ನಿಂತಿತ್ತು. ಇದರಿಂದ ಹತ್ತಾರು ಮಹಿಳೆಯರು ಇಳಿ ಸಂಜೆಯಲ್ಲಿ ರಸ್ತೆ ಮಧ್ಯೆಯೇ ಕಾಲ ಕಳೆದ ಘಟನೆ ಬುಧವಾರ (ಸೆಪ್ಟೆಂಬರ್ 21) ನಡೆದಿತ್ತು.
ಕೊಟ್ಟಿಗೆಹಾರದಿಂದ ಹೊರನಾಡಿಗೆ ಬಸ್ಗಳ ಸಂಖ್ಯೆ ತೀರಾ ಕಡಿಮೆ. ಬೆರಳೆಣಿಕೆಯಷ್ಟು ಬಸ್ಗಳಷ್ಟೇ ಇವೆ. ಬೇರೆ-ಬೇರೆ ಭಾಗದಿಂದ ಬಂದು ಕೊಟ್ಟಿಗೆಹಾರದಲ್ಲಿ ಕಾಯುತ್ತಿದ್ದ ಜನ ಬಸ್ ಬರುತ್ತಿದ್ದಂತೆ ತುಂಬಿಕೊಂಡಿದ್ದರು. ಕೊಟ್ಟಿಗೆಹಾರದಿಂದ ಸಾಕಷ್ಟು ಮಹಿಳೆಯರು ಬಸ್ ಹತ್ತಿದ ಪರಿಣಾಮ ಕೊಟ್ಟಿಗೆಹಾರದಿಂದ 12 ಕಿ.ಮೀ. ದೂರ ಹೋಗುತ್ತಿದ್ದಂತೆ ಬಸ್ನ ಪರ್ಚ್ ಕಟ್ ಆಗಿ ಅಲ್ಲೆ ನಿಂತಿತ್ತು. ಪರಿಣಾಮ ಬೇರೆ ಬಸ್ಸಿಲ್ಲದೆ ಜನ ರಸ್ತೆ ಬದಿ ಕೂತು ಕಾಯುತ್ತಿದ್ದರು.
ಅದೇ ಮಾರ್ಗದಲ್ಲಿ ಬಂದ ಶಾಸಕಿ ನಯನಾ ಮೋಟಮ್ಮ ರಸ್ತೆ ಬದಿ ಕೂತಿದ್ದ ಮಹಿಳೆಯರ ಕಷ್ಟ ಕೇಳಿ ಕೂಡಲೇ ಕೆ.ಎಸ್.ಆರ್.ಟಿ.ಸಿ. ಡಿಸಿಗೆ ಫೋನ್ ಮಾಡಿ ಕೂಡಲೇ ಬೇರೆ ಬಸ್ ಕಳಿಸುವಂತೆ ಸೂಚನೆ ನೀಡಿದ್ದರು. ಒಂದು ವೇಳೆ ಬಸ್ ಬರದಿದ್ದರೆ ನನಗೆ ಫೋನ್ ಮಾಡಿ ಎಂದು ನಂಬರ್ ಕೊಟ್ಟು ಹೋಗಿದ್ದರು.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications