Get Updates
Get notified of breaking news, exclusive insights, and must-see stories!

ಚಿಕ್ಕಮಗಳೂರಿನಲ್ಲಿ ವಿಕಲಚೇತನರಿಗೆ ಕೃತಕ ಕೈ-ಕಾಲು ವಿತರಣೆ

ಚಿಕ್ಕಮಗಳೂರು, ಅಕ್ಟೋಬರ್‌, 27: ಜಿಲ್ಲೆಯಲ್ಲಿ ಈವರೆಗೆ ಹಂತಹಂತವಾಗಿ ಒಟ್ಟು 5 ಕೋಟಿ ರೂಪಾಯಿ ಮೊತ್ತದ ಪರಿಕರಗಳನ್ನು ವಿಶೇಷ ಚೇತನರಿಗೆ ವಿತರಿಸಲಾಗಿದೆ. ಈಗಾಗಲೇ 50 ಜನ ವಿಶೇಷ ಚೇತನರಿಗೆ ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ಪರಿಕರಗಳನ್ನು ವಿತರಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಕಲಚೇತನರ, ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ವಾರ್ತಾ ಇಲಾಖೆ ಹಾಗೂ ಅಲಿಂಕೊ ಸಂಸ್ಥೆ ಬೆಂಗಳೂರು ಇವುಗಳ ಸಂಯುಕ್ತಾಶ್ರಯದಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ವಿಕಲಚೇತನರ ಕೃತಕ ಕೈ-ಕಾಲು ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಹಂತಹಂತವಾಗಿ ವಿಕಲಚೇತನರಿಗೆ ಪರಿಕರ ವಿತರಿಸಲಾಗಿದೆ. ಜಿಲ್ಲೆಯಲ್ಲಿ ವಿಶೇಷ ಚೇತನರು ಹಾಗೂ ಹಿರಿಯ ನಾಗರೀಕರಿಗೆ ವಿಶೇಷ ಸವಲತ್ತುಗಳನ್ನು ತಲುಪಿಸುವ ಉದ್ದೇಶದಿಂದ ಸಾಕಷ್ಟು ಯೋಜನೆಗಳನ್ನು ರೂಪುಗೊಳಿಸಲಾಗಿದೆ. ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮಾದರಿ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದ್ದು, ಅದರ ಪ್ರಯೋಜನಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

Artificial hand, limbs distribute to disabled in Chikkamagaluru

ವಿಕಲಚೇತನರಿಗೆ ಕೃತಕ ಕೈ-ಕಾಲು ವಿತರಣೆ
ಜಿಲ್ಲೆಯಲ್ಲಿ 15,584 ವಿಶೇಷ ಚೇತನರನ್ನು ಗುರುತಿಸಲಾಗಿದ್ದು, ಸುಮಾರು 13,354 ಜನರಿಗೆ ಯುಡಿಐಡಿ ಕಾರ್ಡ್ ವಿತರಣೆ ಮಾಡಲಾಗಿದೆ. ರಾಜ್ಯದಲ್ಲಿ ಅತಿ ಹೆಚ್ಚು ಕಾರ್ಡ್ ವಿತರಿಸಿದ 2ನೇ ಜಿಲ್ಲೆಯಾಗಿದೆ. ಚಿಕ್ಕಮಗಳೂರಿನಲ್ಲಿ 623 ಪರಿಕರಗಳನ್ನು ವಿತರಿಸಲಾಗಿದ್ದು, 355 ಜನರಿಗೆ ಕೃತಕ ಅಂಗಾಂಗಗಳನ್ನು ಜೋಡಣೆ ಮಾಡಲಾಗಿದೆ. ಭಾರತ ಹಾಗೂ ಕರ್ನಾಟಕ ಸರ್ಕಾರದಿಂದ ವಿಶೇಷ ಚೇತನರಿಗೆ ಮಾಸಿಕ 1,400 ಗೌರವಧನ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಒಂದು ಕೋಟಿ ರೂಪಾಯಿ ವೆಚ್ಚದ ವಿಕಲಚೇತನರ ಭವನವನ್ನು ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. 50 ಲಕ್ಷ ರೂಪಾಯಿ ಮೌಲ್ಯದ ಸಂಪನ್ಮೂಲವನ್ನು ಈಗಾಗಲೇ ಕ್ರೋಢೀಕರಿಸಲಾಗಿದೆ ಎಂದು ತಿಳಿಸಿದರು.

Artificial hand, limbs distribute to disabled in Chikkamagaluru

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಾಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಪಿ.ವೆಂಕಟೇಶ್, ತಾಲೂಕಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ತಾರಾನಾಥ್, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ.ಆನಂದ್, ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಾ ನಾಯ್ಕ್, ಅಲಿಂಕೊ ಸಂಸ್ಥೆಯ ಪ್ರಾಸ್ಥೆಟಿಸ್ಟ್ ಮತ್ತು ಆರ್ಥೋಟಿಸ್ಟ್ ನಿತೀಶ್ ಕುಮಾರ್, ವಿಕಲಚೇತನರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸೋಮಶೇಖರ್ ಹಾಗೂ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಚರಣ್‌ರಾಜ್.ಎನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+