ಚಿಕ್ಕಮಗಳೂರಿನಲ್ಲಿ ವಿಕಲಚೇತನರಿಗೆ ಕೃತಕ ಕೈ-ಕಾಲು ವಿತರಣೆ
ಚಿಕ್ಕಮಗಳೂರು, ಅಕ್ಟೋಬರ್, 27: ಜಿಲ್ಲೆಯಲ್ಲಿ ಈವರೆಗೆ ಹಂತಹಂತವಾಗಿ ಒಟ್ಟು 5 ಕೋಟಿ ರೂಪಾಯಿ ಮೊತ್ತದ ಪರಿಕರಗಳನ್ನು ವಿಶೇಷ ಚೇತನರಿಗೆ ವಿತರಿಸಲಾಗಿದೆ. ಈಗಾಗಲೇ 50 ಜನ ವಿಶೇಷ ಚೇತನರಿಗೆ ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ಪರಿಕರಗಳನ್ನು ವಿತರಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಕಲಚೇತನರ, ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ವಾರ್ತಾ ಇಲಾಖೆ ಹಾಗೂ ಅಲಿಂಕೊ ಸಂಸ್ಥೆ ಬೆಂಗಳೂರು ಇವುಗಳ ಸಂಯುಕ್ತಾಶ್ರಯದಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ವಿಕಲಚೇತನರ ಕೃತಕ ಕೈ-ಕಾಲು ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಹಂತಹಂತವಾಗಿ ವಿಕಲಚೇತನರಿಗೆ ಪರಿಕರ ವಿತರಿಸಲಾಗಿದೆ. ಜಿಲ್ಲೆಯಲ್ಲಿ ವಿಶೇಷ ಚೇತನರು ಹಾಗೂ ಹಿರಿಯ ನಾಗರೀಕರಿಗೆ ವಿಶೇಷ ಸವಲತ್ತುಗಳನ್ನು ತಲುಪಿಸುವ ಉದ್ದೇಶದಿಂದ ಸಾಕಷ್ಟು ಯೋಜನೆಗಳನ್ನು ರೂಪುಗೊಳಿಸಲಾಗಿದೆ. ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮಾದರಿ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದ್ದು, ಅದರ ಪ್ರಯೋಜನಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ವಿಕಲಚೇತನರಿಗೆ ಕೃತಕ ಕೈ-ಕಾಲು ವಿತರಣೆ
ಜಿಲ್ಲೆಯಲ್ಲಿ 15,584 ವಿಶೇಷ ಚೇತನರನ್ನು ಗುರುತಿಸಲಾಗಿದ್ದು, ಸುಮಾರು 13,354 ಜನರಿಗೆ ಯುಡಿಐಡಿ ಕಾರ್ಡ್ ವಿತರಣೆ ಮಾಡಲಾಗಿದೆ. ರಾಜ್ಯದಲ್ಲಿ ಅತಿ ಹೆಚ್ಚು ಕಾರ್ಡ್ ವಿತರಿಸಿದ 2ನೇ ಜಿಲ್ಲೆಯಾಗಿದೆ. ಚಿಕ್ಕಮಗಳೂರಿನಲ್ಲಿ 623 ಪರಿಕರಗಳನ್ನು ವಿತರಿಸಲಾಗಿದ್ದು, 355 ಜನರಿಗೆ ಕೃತಕ ಅಂಗಾಂಗಗಳನ್ನು ಜೋಡಣೆ ಮಾಡಲಾಗಿದೆ. ಭಾರತ ಹಾಗೂ ಕರ್ನಾಟಕ ಸರ್ಕಾರದಿಂದ ವಿಶೇಷ ಚೇತನರಿಗೆ ಮಾಸಿಕ 1,400 ಗೌರವಧನ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಒಂದು ಕೋಟಿ ರೂಪಾಯಿ ವೆಚ್ಚದ ವಿಕಲಚೇತನರ ಭವನವನ್ನು ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. 50 ಲಕ್ಷ ರೂಪಾಯಿ ಮೌಲ್ಯದ ಸಂಪನ್ಮೂಲವನ್ನು ಈಗಾಗಲೇ ಕ್ರೋಢೀಕರಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಾಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಪಿ.ವೆಂಕಟೇಶ್, ತಾಲೂಕಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ತಾರಾನಾಥ್, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ.ಆನಂದ್, ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಾ ನಾಯ್ಕ್, ಅಲಿಂಕೊ ಸಂಸ್ಥೆಯ ಪ್ರಾಸ್ಥೆಟಿಸ್ಟ್ ಮತ್ತು ಆರ್ಥೋಟಿಸ್ಟ್ ನಿತೀಶ್ ಕುಮಾರ್, ವಿಕಲಚೇತನರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸೋಮಶೇಖರ್ ಹಾಗೂ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಚರಣ್ರಾಜ್.ಎನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications