ವೈ.ಎಸ್.ವಿ ದತ್ತಾಗೆ ಚುನಾವಣಾ ವೆಚ್ಚಕ್ಕಾಗಿ 101 ರೂಪಾಯಿ ನೀಡಿದ ಅಭಿಮಾನಿ
ಕಡೂರು ತಾಲೂಕಿನ ಮಾಜಿ ಶಾಸಕ ವೈ.ಎಸ್.ವಿ ದತ್ತಾ ಅವರಿಗೆ ಚುನಾವಣೆ ಖರ್ಚಿಗಾಗಿ ಅಭಿಮಾನಿಯೊಬ್ಬ 101 ರೂಪಾಯಿ ಹಣ ನೀಡಿ ಶುಭಕೋರಿದ್ದಾರೆ.
ಚಿಕ್ಕಮಗಳೂರು, ಮಾರ್ಚ್, 14: ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಮಾಜಿ ಶಾಸಕ ವೈಎಸ್ವಿ ದತ್ತಾ ಅವರಿಗೆ ಚುನಾವಣೆ ಖರ್ಚಿಗಾಗಿ ಅಭಿಮಾನಿಯೊಬ್ಬ 101 ರೂಪಾಯಿ ಹಣ ನೀಡಿ ಶುಭಕೋರಿದ್ದಾರೆ. ವೈಎಸ್ವಿ ದತ್ತಾ ಅವರು ಕಳೆದ ಎರಡು ತಿಂಗಳ ಹಿಂದೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದು, ಇದೀಗ ಕಡೂರಿನ ಕಾಂಗ್ರೆಸ್ ಅಭ್ಯರ್ಥಿ ಎಂದೇ ಬಿಂಬಿತವಾಗಿದ್ದಾರೆ. ಹಾಗಾಗಿ, ಕಡೂರು ತಾಲೂಕಿನ ಗಿರಿಯಾಪುರ ಮೂಲದ ವ್ಯಕ್ತಿಯೊಬ್ಬರು 101 ರೂಪಾಯಿ ದಾನ ನೀಡಿ ಚುನಾವಣೆಗೆ ಶುಭಕೋರಿದ್ದಾರೆ.
ವೈ.ಎಸ್.ವಿ ದತ್ತಾಗೆ ಹಣ ನೀಡಿದ ಅಭಿಮಾನಿ
ಕ್ಷೇತ್ರ ಹಾಗೂ ಮತದಾರರ ಮೇಲೆ ನಿಮಗೆ ಇದ್ದ ಪ್ರೀತಿ, ಕಾಳಜಿ, ಅಭಿಮಾನ ಹಾಗೂ ನೀವು ಮಾಡಿದ ಅಭಿವೃದ್ಧಿ ನೆನಪಿನಲ್ಲಿ ಉಳಿಯುವಂತಹದ್ದಾಗಿದೆ. ಆಳ್ವಾಸ್ ನುಡಿಸಿರಿಯಲ್ಲಿ ಅಖಂಡ ಕರ್ನಾಟಕದ ವಿಷಯವಾಗಿ ನೀವು ಬಿತ್ತರಿಸಿದ ನಾಡಿನ ಅಖಂಡತೆಯ ವಿಚಾರಗಳು ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿವೆ. ನಿಮಗಿರುವ ಮಳೆ ನೀರು ಶೇಖರಣೆ ಹಾಗೂ ಪ್ರಕೃತಿ ಉಳಿಸುವ ಪರಿಕಲ್ಪನೆ ಜನರನ್ನು ಆಕರ್ಷಿಸಿದೆ ಎಂದರು.

101 ರೂಪಾಯಿ ಹಣ ನೀಡಿ ಶುಭಹಾರೈಕೆ
ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡುವ ನಿಮ್ಮ ವ್ಯಕ್ತಿತ್ವದ ಜೊತೆ ಜರಿದ್ದಾರೆ. ನಿಮಗೆ ಜನಸಾಮಾನ್ಯರ ಸಮಸ್ಯೆಯನ್ನು ಬಗೆಹರಿಸುವ ಹೊಸ ಜವಾಬ್ದಾರಿ ಇದೆ. ಅದನ್ನು ನಿರ್ವಹಿಸುತ್ತೀರಾ ಎಂದು ನಂಬಿದ್ದೇವೆ. ನಾನು ಆರ್ಥಿಕವಾಗಿ ಶಕ್ತಿವಂತನಲ್ಲ. ಹಾಗಾಗಿ, ನಿಮಗೆ ಚಿಕ್ಕ ಕಾಣಿಕೆ ನೀಡಿದ್ದೇನೆ. ನಮ್ಮ ಮನೆಯವರ ಎಲ್ಲಾ ಮತಗಳು ನಿಮಗೆ ಹಾಕಿಸುತ್ತೇನೆ. ಸಮಾನ ಮನಸ್ಕರಾದ ಜೊತೆ ಮಾತನಾಡಿ ತಮ್ಮ ಕೈ ಬಲಗೊಳ್ಳಲು ಸಹಕರಿಸುತ್ತೇವೆ ಎಂದು ಪತ್ರ ಬರೆದು, 101 ರೂಪಾಯಿ ಹಣ ನೀಡಿ ಶುಭಹಾರೈಸಿದ್ದಾರೆ.
ಕಾಫಿನಾಡಿನಲ್ಲಿ ರಂಗೇರಿದ ಚುನಾವಣಾ ಕಣ
ಕಾಫಿನಾಡಿನಲ್ಲಿ ವಿಧಾನಸಭೆ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಆಡಳಿತ ಪಕ್ಷದ ಟಿಕೆಟ್ ಆಕಾಂಕ್ಷಿಗಳು ವಿವಿಧ ಕ್ಷೇತ್ರಗಳ ಅಲ್ಲಲ್ಲಿ ಸೀರೆ ಹಂಚುವ ಮೂಲಕ ಮತದಾರನ್ನು ತಮ್ಮತ್ತ ಸೆಳೆದುಕೊಳ್ಳುವ ತಂತ್ರಗಾರಿಕೆಯನ್ನು ಮಾಡುತ್ತಿದ್ದಾರೆ.

ಹಾಗೆಯೇ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ನಾನೇನು ಕಮ್ಮಿ ಇಲ್ಲ ಎಂಬಂತೆ ತಮ್ಮ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಮತದಾರರಿಗೆ ಕುಕ್ಕರ್ ಹಂಚಿಕೆ ಮಾಡಲು ಮುಂದಾಗಿದ್ದಾರೆ. ಕುಕ್ಕರ್ ಹಂಚಿಕೆ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications