ಚಿಕ್ಕಮಗಳೂರು; ವಕೀಲನ ಮೇಲೆ ಹಲ್ಲೆ, 6 ಪೊಲೀಸ್ ಸಿಬ್ಬಂದಿ ಅಮಾನತು
ಚಿಕ್ಕಮಗಳೂರು, ಡಿಸೆಂಬರ್ 01; ವಕೀಲನ ಮೇಲೆ ಪೊಲೀಸರು ಹಲ್ಲೆ ನಡೆಸಿದ ಸಂಬಂಧ ಚಿಕ್ಕಮಗಳೂರು ಪೊಲೀಸರು ಮತ್ತು ವಕೀಲರ ನಡುವೆ ತಡರಾತ್ರಿ ಹೈಡ್ರಾಮ ನಡೆದಿದೆ. ಹೆಲ್ಮೆಟ್ ಹಾಕದ ಕಾರಣ ಲಾಯರ್ ಮೇಲೆ ಪೊಲೀಸರು ಹಲ್ಲೆ ಮಾಡಿದ್ದು, ಠಾಣೆಯ ಮುಂದೆ ವಕೀಲರು ಪ್ರತಿಭಟನೆ ಮಾಡಿದರು. ಅಂತಿಮವಾಗಿ 6 ಪೊಲೀಸ್ ಸಿಬ್ಬಂದಿ ಅಮಾನತು ಮಾಡಲಾಗಿದೆ.
ಹೆಲ್ಮೆಟ್ ಹಾಕದ ಕಾರಣಕ್ಕೆ ವಕೀಲ ಪ್ರೀತಮ್ ಮೇಲೆ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ವಕೀಲ ಪ್ರೀತಮ್ ದಂಡ ಕಟ್ಟುತ್ತೇನೆ ಎಂದು ಹೇಳಿದರೂ ಸಹ ಪೊಲೀಸರು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಠಾಣೆಗೆ ಕರೆದೊಯ್ದ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಪೊಲೀಸರು ಹಲ್ಲೆ ಮಾಡಿದ್ದರಿಂದ ಪ್ರೀತಮ್ ಎದೆ, ಬೆನ್ನು, ಕೈಯಲ್ಲಿ ರಕ್ತದ ಕಲೆಯಾಗಿದೆ. ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ಪ್ರೀತಮ್ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸರ್ಕಾರಿ ಆಸ್ಪತ್ರೆ ಬಳಿ ಮತ್ತು ಠಾಣೆಯ ಮುಂದೆ ನೂರಾರು ವಕೀಲರು ಪ್ರತಿಭಟನೆ ಮಾಡಿದರು. ಹಲ್ಲೆ ಮಾಡಿದ ಸಿಬ್ಭಂದಿ ಬಂಧಿಸಬೇಕು ಎಂದು ಒತ್ತಾಯಿಸಿದರು.
ತಡರಾತ್ರಿ 2 ಗಂಟೆಗೆ ಪ್ರತಿಭಟನೆ; ವಕೀಲ ಪ್ರೀತಮ್ ಮೇಲೆ ಹಲ್ಲೆ ಮಾಡಿದ ಪೊಲೀಸ್ ಸಿಬ್ಬಂದಿ ಬಂಧಿಸಿಲ್ಲ ಎಂದು ಆರೋಪಿಸಿ ತಡರಾತ್ರಿ 2 ಗಂಟೆಗೆ ಪೊಲೀಸ್ ಠಾಣೆ ಮುಂದೆ ವಕೀಲರು ಧರಣಿ ಕೂತರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿಕುಮಾರ್, ಗುರುಪ್ರಸಾದ್ ಎಂಬ ಪೊಲೀಸ್ ಸಿಬ್ಭಂದಿ ಮೇಲೆ ಐಪಿಸಿ ಸೆಕ್ಷನ್ 307ರಡಿ ಪ್ರಕರಣ ದಾಖಲು ಮಾಡಲಾಗಿದೆ.
ಶುಕ್ರವಾರ ವಕೀಲರು ಚಿಕ್ಕಮಗಳೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ನಿರೀಕ್ಷೆ ಇದೆ. ಬೆಳಗ್ಗೆ10:30ಕ್ಕೆ ಚಿಕ್ಕಮಗಳೂರು ಜಿಲ್ಲಾ ವಕೀಲರ ಸಂಘ ತುರ್ತು ಸಭೆಯನ್ನು ಕರೆದಿದೆ. ಪೊಲೀಸ್ ಸಿಬ್ಬಂದಿಗಳನ್ನು ಬಂಧಿಸುವಂತೆ ವಕೀಲರು ಪಟ್ಟು ಹಿಡಿದಿದ್ದಾರೆ. ವಿವಿಧ ಜಿಲ್ಲೆಗಳಿಂದ ವಕೀಲರು ಸಭೆಗೆ ಆಗಮಿಸುತ್ತಿದ್ದಾರೆ.
ತಡರಾತ್ರಿ ಘಟನೆ ಬಗ್ಗೆ ಕೈಗೊಳ್ಳಲಾದ ಕ್ರಮಗಳ ಕುರಿತು ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮಟೆ ಹೇಳಿಕೆ ನೀಡಿದರು. "ಈ ಘಟನೆ ಸಂಬಂಧ 6 ಜನ ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ,. ಪ್ರಕರಣ ಸಂಬಂಧ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಓರ್ವ ಪಿಎಸ್ಐ, ಓರ್ವ ಎಎಸ್ಐ, ಓರ್ವ ಹೆಡ್ ಕಾನ್ಸ್ಟೇಬಲ್, ಮೂವರು ಕಾನ್ಸ್ಟೇಬಲ್ ಅಮಾನತು ಮಾಡಲಾಗಿದೆ" ಎಂದರು.
ಘಟನೆ ಬಗ್ಗೆ ಮಾಹಿತಿ ನೀಡಿದ ವಕೀಲರು, ಹೆಲ್ಮೆಟ್ ಹಾಕದ ಲಾಯರ್ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ನಗರದ ನಗರ ಠಾಣೆಯಲ್ಲಿ ನಡೆದಿದೆ. ಯುವ ವಕೀಲರೊಬ್ಬರಿಗೆ ಪೊಲೀಸ್ ಠಾಣೆಯಲ್ಲಿ ಮನಸ್ಸೋ ಇಚ್ಛೆ ಥಳಿಸಲಾಗಿದೆ.
ವಕೀಲ ಪ್ರೀತಮ್ ನಾನು ದಂಡ ಕಟ್ಟುತ್ತೇನೆ ಎಂದು ಹೇಳಿದರೂ ಸಹ ಪೊಲೀಸ್ ಠಾಣೆಗೆ ಕರೆದದುಕೊಂಡು ಹೋಗಿದ್ದಾರೆ. ಬೈಕ್ ಕೀ ಕಿತ್ತುಕೊಂಡ ಪೊಲೀಸರನ್ನು ಪ್ರೀತಮ್ ಪ್ರಶ್ನೆ ಮಾಡಿದ್ದಾರೆ. ಆದ್ದರಿಂದ ಅವರ ಮೇಲೆ ಹಲ್ಲೆ ಮಾಡಿದ್ದಾರೆ.
ಮುಂಜಾನೆ 3 ಗಂಟೆಯ ತನಕ ವಕೀಲರು ಪೊಲೀಸರು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಕೀಲರ ಮೇಲೆ ಹಲ್ಲೆ ಮಾಡಿವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ವಕೀಲರು ಪ್ರತಿಭಟನೆ ನಡೆಸಿ ಎಸ್ಪಿ ವಿಕ್ರಂ ಅಮಟೆ ವಿರುದ್ಧವೂ ಧಿಕ್ಕಾರ ಕೂಗಿದರು.
ಶಶಿಕುಮಾರ್, ಗುರುಪ್ರಸಾದ್ ಎಂಬ ಪೊಲೀಸ್ ಸಿಬ್ಬಂದಿ ಮೇಲೆ ಐಪಿಸಿ ಸೆಕ್ಷನ್ 307ರಡಿ ಪ್ರಕರಣ ದಾಖಲಾಗಿದೆ. ಆರು ಜನರ ಮೇಲೆ ಪ್ರಕರಣ ದಾಖಲಿಸಿರುವ ವಕೀಲರು, ಇಬ್ಬರು ಪೊಲೀಸರು ಠಾಣೆಯಲ್ಲೇ ಇದ್ದರೂ ಅವರನ್ನು ಬಂಧಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications