ಮಲೆನಾಡಿನ ಪ್ರಕೃತಿ ಸೌಂದರ್ಯಕ್ಕೆ ಮತ್ತೊಂದು ಸಾಕ್ಷಿ ಈ ಬೆಟ್ಟದ ಮೇಲಿನ ಕೆಸರು ಗದ್ದೆ
ಚಿಕ್ಕಮಗಳೂರು, ಜುಲೈ 29: ನಾವು ನೀವೆಲ್ಲಾ ವಿದೇಶದ ಯಾವುದೋ ಒಂದು ಪ್ರದೇಶವನ್ನು ನೋಡಿ ರೋಮಾಂಚನಗೊಳ್ಳುತ್ತೇವೆ. ಆದರೆ ಅಂತಹ ಪ್ರದೇಶವೊಂದು ನಮ್ಮ ಮಲೆನಾಡಿನಲ್ಲಿಯೇ ಮೈನೆರೆದುಕೊಂಡಿದೆ. ಆ ಜಾಗವನ್ನು ನೋಡಿದರೆ ಅಯ್ಯೋ,! ಇದು ನಮ್ಮ ರಾಜ್ಯದಲ್ಲಿದೆಯಾ ಅಂತಾ ಆಶ್ಚರ್ಯ ಪಡಬಹುದು.
Recommended Video
ನಮ್ಮ ಮಲೆನಾಡ ಪ್ರಕೃತಿಯ ಸೊಬಗು ಯಾವುದಕ್ಕೂ ಕಡಿಮೆ ಇಲ್ಲಾ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕಳಸ ಬಳಿಯ ಸಂಸೆ ಸಮೀಪದ ಬಾಮಿಕೊಂಡ ಎಂಬ ಚಿಕ್ಕಹಳ್ಳಿಯ ಅತ್ಯದ್ಬುತ ಪ್ರಕೃತಿ ಸೊಬಗೊಂದು ಎಲ್ಲರ ಕಣ್ಮನ ಸೆಳೆಯುತ್ತಿದೆ. ಎತ್ತರವಾದ ಬೆಟ್ಟದ ಮೇಲಿನ ಕೆಸರಿನ ಮಧ್ಯೆ ಹಚ್ಚ ಹಸಿರಿನ ಹೃದಯಾಕಾರದ ಹಸಿರು ರಾಶಿ ಎಲ್ಲರನ್ನು ಆಕರ್ಷಿಸುತ್ತಿದೆ.
ಅನೇಕ ವರ್ಷಗಳಿಂದ ಇಲ್ಲಿನ ಕೃಷ್ಣ ಎಂಬ ರೈತ ಕುಟುಂಬ ಈ ಬೆಟ್ಟದ ಸುತ್ತ ಕೃಷಿಯನ್ನು ಮಾಡುತ್ತಾ ಬಂದಿದ್ದಾರೆ. ಯಾವುದೇ ಯಂತ್ರೋಪಕರಣಗಳಿಲ್ಲದೆ ಗದ್ದೆಗಳನ್ನು ಸಿದ್ದ ಮಾಡಿ ಸೌಂದರ್ಯವನ್ನು ತುಂಬಿರುವುದು ಅದ್ಬುತವೇ ಸರಿ.

ಯಾವುದೋ ದೇಶದ ಎತ್ತರವಾದ ಬೆಟ್ಟಗಳ ಮೇಲಿನ ಕೆಸರು ಗದ್ದೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೋಡಿ ವ್ಹಾವ್! ಎಂತಹ ಸೌಂದರ್ಯ ಅಂತಾ ಕಣ್ತುಂಬಿಕೊಂಡಿರುತ್ತೇವೆ. ಆದರೆ ಮಲೆನಾಡಿನ ಈ ಸಂಸೆ ಎಂಬ ಅದ್ಬುತ ಫಾರಿನ್, ಈವೆರಗೂ ಯಾರ ಕಣ್ಣಿಗೂ ಬಿದ್ದಿಲ್ಲ. ರೈತನು ಎತ್ತರವಾದ ಬೆಟ್ಟದ ಸುತ್ತಾ ಮೆಟ್ಟಿಲುಗಳ ರೀತಿ ಭತ್ತದ ಗದ್ದೆಗಳನ್ನು ಮಾಡಿ, ಸೌಂದರ್ಯವನ್ನು ಅದಕ್ಕೆ ತುಂಬಿದ್ದಾನೆ. ಸುತ್ತಲಿನ ಎತ್ತರದ ಬೆಟ್ಟಗುಡ್ಡಗಳು ತಂಪಾದ ಗಾಳಿ ಮತ್ತಷ್ಟು ಜೀವಕಳೆ ತುಂಬಿದೆ.

ಸುಮಾರು ನಾಲ್ಕು ಎಕರೆ ಜಾಗದಲ್ಲಿ ಈ ಗದ್ದೆಯನ್ನು ಉಳುಮೆ ಮಾಡಲಾಗುತ್ತಿದೆ. ಬೆಟ್ಟದ ಸುತ್ತಲೂ ಉಳುಮೆಯನ್ನು ಮಾಡಿ ಭತ್ತ ನಾಟಿ ಮಾಡಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಸುತ್ತಲು ಉಳುಮೆ ಮಾಡಿ ಬೆಟ್ಟದ ಮೇಲ್ಭಾಗವನ್ನು ಹೃದಯಾಕಾರದಲ್ಲಿ ಹಸಿರು ಹುಲ್ಲನ್ನು ಹಾಗೆಯೇ ಬಿಡಲಾಗಿದೆ. ಇದು ಗದ್ದೆಯ ಕೆಸರಿನ ನಡುವೆ ಹಚ್ಚಹಸಿರಿನಿಂದ ಕಂಗೊಳಿಸುತ್ತಿದೆ. ಇನ್ನು ಒಂದು ಹಾಳಿಯಿಂದ ಮತ್ತೊಂದು ಹಾಳಿಗೆ ಬದುವಿನ ಮೇಲಿಂದ ನೀರು ಸುರಿಯುವ ದೃಶ್ಯ ಸಣ್ಣ ಸಣ್ಣ ಜಲಪಾತಗಳಂತೆ ಗೋಚರಿಸುತ್ತವೆ.

ಮೂಡಿಗೆರೆ ತಾಲ್ಲೂಕು ಕಳಸಾದಿಂದ ಕುದುರೆಮುಖ ಮಾರ್ಗವಾಗಿ ಸಾಗಿದರೆ ಈ ಗ್ರಾಮ ಸಿಗುತ್ತದೆ. ಆದರೆ ಈ ಭತ್ತದ ಗದ್ದೆಯ ಸೌಂದರ್ಯ ಸವಿಯಲು ಸುಮಾರು 4 ಕಿ.ಮೀ ಬೆಟ್ಟದ ಹಾದಿಯಲ್ಲಿ ನಡೆದುಕೊಂಡು ಹೋಗಬೇಕು. ಇದುವರೆಗೂ ಈ ಗ್ರಾಮದಲ್ಲಿ ಐದಾರು ಕುಟುಂಬಗಳು ವಾಸ ಮಾಡುತ್ತಿದ್ದು, ನಗರ ಸಂಪರ್ಕ ಮಾಡಲು ಅವರಿಗೆ ಕಾಲು ನಡಿಗೆಯೇ ಆಧಾರವಾಗಿದೆ. ಆದರೆ ಇಲ್ಲಿನ ಪ್ರಕೃತಿಯ ಸೊಬಗು ನೋಡಿದರೆ ಎಂತಹ ಸುಸ್ತು ಸಹ ಮಾಯವಾಗುತ್ತೆ ಅಂತಾರೆ ಸ್ಥಳಕ್ಕೆ ಭೇಟಿ ನೀಡಿದ ಪರೀಕ್ಷಿತ್ ಜಾವಳಿ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications