ಬಡವನದಿಣ್ಣೆಯಲ್ಲಿ ನುಂಗಿದ ನಾಲ್ಕು ಮೊಟ್ಟೆಯನ್ನು ಕಕ್ಕಿದ ಮರಿ ನಾಗರ!
ಚಿಕ್ಕಮಗಳೂರು, ಡಿಸೆಂಬರ್ 05: ಕೆಲವು ತಿಂಗಳುಗಳ ಹಿಂದೆ ಉಡುಪಿ ಜಿಲ್ಲೆಯ ಹಾವಂಜೆ ಗ್ರಾಮದ ಮನೆಯೊಂದಕ್ಕೆ ನುಗ್ಗಿದ್ದ ನಾಗರಹಾವು ಮನೆಯ ಹೆಂಟೆಯನ್ನು ಕೊಂದು 7 ಮೊಟ್ಟೆಗಳನ್ನು ತಿಂದಿದ್ದ ಘಟನೆ ನೆನಪಿರಬೇಕಲ್ಲ?. ಅಂದು ನಾಗರಹಾವು ಹಸಿವಿನ ಕಾರಣಕ್ಕೆ ಮೊಟ್ಟೆಗಳನ್ನು ತಿಂದಿತ್ತು.
ಕೊನೆಗೆ ಅದನ್ನು ಉರಗತಜ್ಞರು ಸಂರಕ್ಷಿಸಿ ಆಹಾರ ನೀಡಿ, ಕಾಡಿಗೆ ಬಿಟ್ಟಿದ್ದರು. ಈ ಘಟನೆಯನ್ನೆಲ್ಲಾ ನೆನಪಿಸಿಕೊಂಡು ಮತ್ತೇಕೆ ಹೇಳುತ್ತಿದ್ದೇವೆ ಎಂದರೆ ಇಂತಹುದೆ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಡವನದಿಣ್ಣೆ ಗ್ರಾಮದಲ್ಲಿ ನಡೆದಿದೆ.
ವ್ಯತ್ಯಾಸವೆಂದರೆ ಇದು ಗೋಧಿ ನಾಗರಹಾವಿನ ಮರಿಯಾಗಿದೆ. ಮೊಟ್ಟೆ ನುಂಗಿದ್ದಕ್ಕೆ ಕಾರಣ ಗೊತ್ತಿಲ್ಲವಾದರೂ ಚಿಕ್ಕಮರಿಯಾದರೂ ನಾಲ್ಕು ಮೊಟ್ಟೆಯನ್ನು ಸಲೀಸಾಗಿ ನುಂಗಿದೆ. ಆದರೆ ನುಂಗಿದ ಮೇಲೆ ಕೂಡಲೇ ಅದು ಅಸ್ವಸ್ಥಗೊಂಡಿದೆ.

ಅಸ್ವಸ್ಥಗೊಂಡಿದ್ದ ಹಾವಿನ ಮರಿಯನ್ನು ಗಮನಿಸಿದ ಸ್ಥಳೀಯರು ಉರಗತಜ್ಞ ಆರೀಫ್ ಅವರನ್ನು ಕರೆಸಿದ್ದಾರೆ. ಅವರು ಬಂದು ಚಿಕಿತ್ಸೆ ನೀಡಿದ ಬಳಿಕ ನಾಲ್ಕು ಮೊಟ್ಟೆಗಳನ್ನು ನಾಗರಹಾವಿನ ಮರಿ ಕಕ್ಕಿದೆ. ಆ ನಂತರ ಹಾವನ್ನು ಸಂರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications