Swaroop Revanna: ಭವಾನಿ ರೇವಣ್ಣ ಕಾಲಿಗೆ ಬಿದ್ದ ಸ್ವರೂಪ್: ಬಿಜೆಪಿ ಸೋಲಿಸಲು ಒಂದಾದ ದೇವೇಗೌಡರ ಕುಟುಂಬ
ಹಾಸನ, ಏಪ್ರಿಲ್ 20: ಹಾಸನ ಜೆಡಿಎಸ್ ಟಿಕೆಟ್ ಭವಾನಿ ರೇವಣ್ಣ ಕೈ ತಪ್ಪಿ ಸ್ವರೂಪ್ ಸಿಕ್ಕಿದೆ. ಹಾಸನ ಟಿಕೆಟ್ಗಾಗಿ ಭವಾನಿ ರೇವಣ್ಣ ಶತ ಪ್ರಯತ್ನ ನಡೆಸಿದರೂ ಕೂಡ ಹಲವು ಜಟಾಪಟಿಗಳ ಬಳಿಕ ಜೆಡಿಎಸ್ ಸ್ವರೂಪ್ ಸ್ಪರ್ಧಿಸಲು ಅವಕಾಶ ನೀಡಿದೆ. ಆದರೆ ಟಿಕೆಟ್ ಘೋಷಣೆ ಬಳಿಕ ಹಾಸನದ ಜೆಡಿಎಸ್ ಪಕ್ಷದ ಚಿತ್ರಣ ಬದಲಾಗಿದೆ.
ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂ ಗೌಡಗೆ ಸೋಲುಣಿಸಲು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಕುಟುಂಬ ಒಂದಾಗಿದ್ದು, ಸ್ವರೂಪ್ ಗೆಲುವುವಿಗಾಗಿ ಈಗಾಗಲೇ ಹಾಸನದಲ್ಲಿ ಭರ್ಜರಿ ಪ್ರಚಾರ ಕಾರ್ಯ ಆರಂಭವಾಗಿದೆ. ಹಾಸನ ಜೆಡಿಎಸ್ ಟಿಕೆಟ್ಗಾಗಿ ಪಟ್ಟು ಹಿಡಿದಿದ್ದ ಭವಾನಿ ರೇವಣ್ಣ ಕೂಡ ಸ್ವರೂಪ್ ಗೆಲುವಿಗಾಗಿ ಅಖಾಡಕ್ಕೆ ಇಳಿದಿದ್ದು, ಸ್ವರೂಪ್ ಪರ ಮತಯಾಚನೆ ಮಾಡಿದ್ದಾರೆ.

ಹಾಸನ ಜೆಡಿಎಸ್ ಚುನಾವಣಾ ಪ್ರಚಾರದ ವೇಳೆ ಭವಾನಿ ರೇವಣ್ಣ ಸ್ವರೂಪ್ ನನ್ನ ಹಾಡಿ ಹೊಗಳಿದ್ದಾರೆ. ಸ್ವರೂಪ್ ನನ್ನ ಮಗನಿದ್ದಂತೆ, ನಾನು ಸ್ವರೂಪ್ನನ್ನ ಮಗನಾಗಿಯೇ ನೋಡಿದ್ದೇನೆ. ನಾನು ಪರಿಪೂರ್ಣವಾಗಿ ಆಶೀರ್ವಾದ ಮಾಡಿದ್ದೇನೆ, ಈ ಕ್ಷೇತ್ರದಲ್ಲಿ ಸ್ವರೂಪ್ ಗೆದ್ದೇ ಗೆಲ್ತಾನೆ ಎಂದು ಭವಾನಿ ರೇವಣ್ಣ ಭವಿಷ್ಯ ನುಡಿದಿದ್ದಾರೆ.
ಹಾಸನ ನಗರದ ಜ್ಞಾನಾಕ್ಷಿ ಕಲ್ಯಾಣ ಮಂಟಪದಲ್ಲಿ ನಡೆದ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಒಂದೇ ವೇದಿಕೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಕುಟುಂಬ ಭಾಗಿಯಾಗಿ, ಸ್ವರೂಪ್ ಗೆಲ್ಲಿಸುವಂತೆ ಜೆಡಿಎಸ್ ಕಾರ್ಯಕರ್ತರಿಗೆ ಮನವಿ ಮಾಡಿದರು. ಈ ವೇಳೆ ಸ್ವರೂಪ್ ಅವರು, ರೇವಣ್ಣ ಹಾಗೂ ಭವಾನಿ ರೇವಣ್ಣ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.

ಸಭೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ, ಭವಾನಿ ರೇವಣ್ಣ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.
ಸಭೆಯಲ್ಲಿ ಮಾತನಾಡಿದ ಭವಾನಿ ರೇವಣ್ಣ ಅವರು, ನನಗೆ ಟಿಕೆಟ್ ಸಿಗದೆ ಇರುವುದು ನನಗೆ ಬೇಸರ ಇಲ್ಲ, ಯಾರಿಗೆ ಟಿಕೆಟ್ ನೀಡಬೇಕು ಎನ್ನುವ ಚರ್ಚೆ ನಡೆಯುತ್ತಿದ್ದಾಗ ಕುಮಾರಣ್ಣ ಸ್ವರೂಪ್ಗೆ ಟಿಕೆಟ್ ಕೊಟ್ಟಿದ್ದಾರೆ. ನಾವೂ ಮೂರು ಬಾರಿ ಫೋನ್ ಮಾಡಿ ಸ್ವರೂಪ್ಗೆ ಟಿಕೆಟ್ ಕೊಡಿ ಅಂತಾ ಕುಮಾರಣ್ಣಗೆ ಹೇಳಿದ್ದೇವು. ಕುಮಾರಣ್ಣ ಅವರಿಗೆ ಟಿಕೆಟ್ ನೀಡಿದ್ದಾರೆ. ಸ್ವರೂಪ್ ಗೆಲ್ಲುವುದು ನಮಗೆ ಮುಖ್ಯ. ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಗೆಲ್ಲಬೇಕು. ಹೀಗಾಗಿ ನೀವೆಲ್ಲರೂ ಸ್ವರೂಪ್ ಗೆಲ್ಲಿಸಿ ಎಂದು ಮತದಾರರಿಗೆ ಭವಾನಿ ರೇವಣ್ಣ ಮನವಿ ಮಾಡಿದರು.
ನನಗೆ ದೇವೇಗೌಡರ ಆರೋಗ್ಯ ಮುಖ್ಯವಾಗಿತ್ತು. ದೇವೇಗೌಡರಿಗಿಂತ ನಾನೇ ದೊಡ್ಡವಳಾ ಅಂತಾ ಅನ್ನಿಸಿಬಿಡ್ತು. ಹಾಗಾಗಿ ನಾನೇ ತೀರ್ಮಾನಿಸಿ ಸ್ವರೂಪ್ ಹೆಸರು ಘೋಷಣೆ ಮಾಡಿಸಿದೆ. ಶುಕ್ರವಾರ ಒಳ್ಳೆಯ ದಿನ ಘೋಷಣೆ ಮಾಡಿ ಅಂತಾ ಕುಮಾರಣ್ಣಗೆ ಹೇಳಿದೆ. ನನಗೆ ಟಿಕೆಟ್ ಸಿಕ್ಕಿಲ್ಲ ಅಂತಾ ಹಾಸನ ಕಡೆಗಣಿಸಲ್ಲ. ಒಟ್ಟಿನಲ್ಲಿ ಬಿಜೆಪಿ ಸೋಲಿಸಬೇಕು ಅಷ್ಟೇ ನನ್ನ ಗುರಿ ಎಂದು ಕರೆ ನೀಡಿದರು.
ಹಾಸನ ಜಿಲ್ಲೆಯಲ್ಲಿ ಬಿಜೆಪಿಯನ್ನು ಸಂಪೂರ್ಣವಾಗಿ ತೆಗೆದುಹಾಕಬೇಕು. ಅದಕ್ಕಾಗಿ ನಿದ್ದೆ ಬಿಟ್ಟು ಕೆಲಸ ಮಾಡಿ, ಸ್ವರೂಪ್ ಗೆಲ್ಲಿಸಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದ ಅವರು, ನಾನು ಪರಿಪೂರ್ಣವಾಗಿ ಆಶೀರ್ವಾದ ಮಾಡುತ್ತಿದ್ದೇನೆ, ಈ ಕ್ಷೇತ್ರದಲ್ಲಿ ಸ್ವರೂಪ್ ಗೆದ್ದೇ ಗೆಲ್ಲುತ್ತಾನೆ ಎಂದರು. ಇನ್ನು ಜೆಡಿಎಸ್ ಕಾರ್ಯಕ್ರಮದಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications