Swaroop Revanna: ಭವಾನಿ ರೇವಣ್ಣ ಕಾಲಿಗೆ ಬಿದ್ದ ಸ್ವರೂಪ್: ಬಿಜೆಪಿ ಸೋಲಿಸಲು ಒಂದಾದ ದೇವೇಗೌಡರ ಕುಟುಂಬ
ಹಾಸನ, ಏಪ್ರಿಲ್ 20: ಹಾಸನ ಜೆಡಿಎಸ್ ಟಿಕೆಟ್ ಭವಾನಿ ರೇವಣ್ಣ ಕೈ ತಪ್ಪಿ ಸ್ವರೂಪ್ ಸಿಕ್ಕಿದೆ. ಹಾಸನ ಟಿಕೆಟ್ಗಾಗಿ ಭವಾನಿ ರೇವಣ್ಣ ಶತ ಪ್ರಯತ್ನ ನಡೆಸಿದರೂ ಕೂಡ ಹಲವು ಜಟಾಪಟಿಗಳ ಬಳಿಕ ಜೆಡಿಎಸ್ ಸ್ವರೂಪ್ ಸ್ಪರ್ಧಿಸಲು ಅವಕಾಶ ನೀಡಿದೆ. ಆದರೆ ಟಿಕೆಟ್ ಘೋಷಣೆ ಬಳಿಕ ಹಾಸನದ ಜೆಡಿಎಸ್ ಪಕ್ಷದ ಚಿತ್ರಣ ಬದಲಾಗಿದೆ.
ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂ ಗೌಡಗೆ ಸೋಲುಣಿಸಲು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಕುಟುಂಬ ಒಂದಾಗಿದ್ದು, ಸ್ವರೂಪ್ ಗೆಲುವುವಿಗಾಗಿ ಈಗಾಗಲೇ ಹಾಸನದಲ್ಲಿ ಭರ್ಜರಿ ಪ್ರಚಾರ ಕಾರ್ಯ ಆರಂಭವಾಗಿದೆ. ಹಾಸನ ಜೆಡಿಎಸ್ ಟಿಕೆಟ್ಗಾಗಿ ಪಟ್ಟು ಹಿಡಿದಿದ್ದ ಭವಾನಿ ರೇವಣ್ಣ ಕೂಡ ಸ್ವರೂಪ್ ಗೆಲುವಿಗಾಗಿ ಅಖಾಡಕ್ಕೆ ಇಳಿದಿದ್ದು, ಸ್ವರೂಪ್ ಪರ ಮತಯಾಚನೆ ಮಾಡಿದ್ದಾರೆ.

ಹಾಸನ ಜೆಡಿಎಸ್ ಚುನಾವಣಾ ಪ್ರಚಾರದ ವೇಳೆ ಭವಾನಿ ರೇವಣ್ಣ ಸ್ವರೂಪ್ ನನ್ನ ಹಾಡಿ ಹೊಗಳಿದ್ದಾರೆ. ಸ್ವರೂಪ್ ನನ್ನ ಮಗನಿದ್ದಂತೆ, ನಾನು ಸ್ವರೂಪ್ನನ್ನ ಮಗನಾಗಿಯೇ ನೋಡಿದ್ದೇನೆ. ನಾನು ಪರಿಪೂರ್ಣವಾಗಿ ಆಶೀರ್ವಾದ ಮಾಡಿದ್ದೇನೆ, ಈ ಕ್ಷೇತ್ರದಲ್ಲಿ ಸ್ವರೂಪ್ ಗೆದ್ದೇ ಗೆಲ್ತಾನೆ ಎಂದು ಭವಾನಿ ರೇವಣ್ಣ ಭವಿಷ್ಯ ನುಡಿದಿದ್ದಾರೆ.
ಹಾಸನ ನಗರದ ಜ್ಞಾನಾಕ್ಷಿ ಕಲ್ಯಾಣ ಮಂಟಪದಲ್ಲಿ ನಡೆದ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಒಂದೇ ವೇದಿಕೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಕುಟುಂಬ ಭಾಗಿಯಾಗಿ, ಸ್ವರೂಪ್ ಗೆಲ್ಲಿಸುವಂತೆ ಜೆಡಿಎಸ್ ಕಾರ್ಯಕರ್ತರಿಗೆ ಮನವಿ ಮಾಡಿದರು. ಈ ವೇಳೆ ಸ್ವರೂಪ್ ಅವರು, ರೇವಣ್ಣ ಹಾಗೂ ಭವಾನಿ ರೇವಣ್ಣ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.

ಸಭೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ, ಭವಾನಿ ರೇವಣ್ಣ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.
ಸಭೆಯಲ್ಲಿ ಮಾತನಾಡಿದ ಭವಾನಿ ರೇವಣ್ಣ ಅವರು, ನನಗೆ ಟಿಕೆಟ್ ಸಿಗದೆ ಇರುವುದು ನನಗೆ ಬೇಸರ ಇಲ್ಲ, ಯಾರಿಗೆ ಟಿಕೆಟ್ ನೀಡಬೇಕು ಎನ್ನುವ ಚರ್ಚೆ ನಡೆಯುತ್ತಿದ್ದಾಗ ಕುಮಾರಣ್ಣ ಸ್ವರೂಪ್ಗೆ ಟಿಕೆಟ್ ಕೊಟ್ಟಿದ್ದಾರೆ. ನಾವೂ ಮೂರು ಬಾರಿ ಫೋನ್ ಮಾಡಿ ಸ್ವರೂಪ್ಗೆ ಟಿಕೆಟ್ ಕೊಡಿ ಅಂತಾ ಕುಮಾರಣ್ಣಗೆ ಹೇಳಿದ್ದೇವು. ಕುಮಾರಣ್ಣ ಅವರಿಗೆ ಟಿಕೆಟ್ ನೀಡಿದ್ದಾರೆ. ಸ್ವರೂಪ್ ಗೆಲ್ಲುವುದು ನಮಗೆ ಮುಖ್ಯ. ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಗೆಲ್ಲಬೇಕು. ಹೀಗಾಗಿ ನೀವೆಲ್ಲರೂ ಸ್ವರೂಪ್ ಗೆಲ್ಲಿಸಿ ಎಂದು ಮತದಾರರಿಗೆ ಭವಾನಿ ರೇವಣ್ಣ ಮನವಿ ಮಾಡಿದರು.
ನನಗೆ ದೇವೇಗೌಡರ ಆರೋಗ್ಯ ಮುಖ್ಯವಾಗಿತ್ತು. ದೇವೇಗೌಡರಿಗಿಂತ ನಾನೇ ದೊಡ್ಡವಳಾ ಅಂತಾ ಅನ್ನಿಸಿಬಿಡ್ತು. ಹಾಗಾಗಿ ನಾನೇ ತೀರ್ಮಾನಿಸಿ ಸ್ವರೂಪ್ ಹೆಸರು ಘೋಷಣೆ ಮಾಡಿಸಿದೆ. ಶುಕ್ರವಾರ ಒಳ್ಳೆಯ ದಿನ ಘೋಷಣೆ ಮಾಡಿ ಅಂತಾ ಕುಮಾರಣ್ಣಗೆ ಹೇಳಿದೆ. ನನಗೆ ಟಿಕೆಟ್ ಸಿಕ್ಕಿಲ್ಲ ಅಂತಾ ಹಾಸನ ಕಡೆಗಣಿಸಲ್ಲ. ಒಟ್ಟಿನಲ್ಲಿ ಬಿಜೆಪಿ ಸೋಲಿಸಬೇಕು ಅಷ್ಟೇ ನನ್ನ ಗುರಿ ಎಂದು ಕರೆ ನೀಡಿದರು.
ಹಾಸನ ಜಿಲ್ಲೆಯಲ್ಲಿ ಬಿಜೆಪಿಯನ್ನು ಸಂಪೂರ್ಣವಾಗಿ ತೆಗೆದುಹಾಕಬೇಕು. ಅದಕ್ಕಾಗಿ ನಿದ್ದೆ ಬಿಟ್ಟು ಕೆಲಸ ಮಾಡಿ, ಸ್ವರೂಪ್ ಗೆಲ್ಲಿಸಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದ ಅವರು, ನಾನು ಪರಿಪೂರ್ಣವಾಗಿ ಆಶೀರ್ವಾದ ಮಾಡುತ್ತಿದ್ದೇನೆ, ಈ ಕ್ಷೇತ್ರದಲ್ಲಿ ಸ್ವರೂಪ್ ಗೆದ್ದೇ ಗೆಲ್ಲುತ್ತಾನೆ ಎಂದರು. ಇನ್ನು ಜೆಡಿಎಸ್ ಕಾರ್ಯಕ್ರಮದಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications