ಪಕ್ಷ ಸದೃಢಗೊಳಿಸಲು ಬಿಜೆಪಿಯಿಂದ ಬೂತ್ ವಿಜಯ ಅಭಿಯಾನ
ಚಿಕ್ಕಮಗಳೂರು, ಜನವರಿ 2: ಮುಂದಿನ ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ಪ್ರಚಾರ ಆರಂಭಿಸಿದ್ದು, ಇಂದಿನಿಂದ ರಾಜ್ಯಾದ್ಯಂತ ಬೂತ್ ವಿಜಯ ಅಭಿಯಾನ ಆರಂಭಿಸಿದೆ. ಚಿಕ್ಕಮಗಳೂರಿನಲ್ಲಿಯೂ ಈ ಅಭಿಯಾನ ಆರಂಭವಾಗಿದೆ.
ಬಿಜೆಪಿ ಪಕ್ಷವನ್ನು ಜಿಲ್ಲಾದ್ಯಂತ ಸದೃಢಗೊಳಿಸುವ ನಿಟ್ಟಿನಲ್ಲಿ ಜನವರಿ 2 ಸೋಮವಾರದಿಂದ 12ರವರೆಗೆ ಪ್ರತೀ ಬೂತ್ನಲ್ಲಿಯೂ, ಬೂತ್ ವಿಜಯ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರುಡಪ್ಪ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಚಿಕ್ಕಮಗಳೂರು ಜಿಲ್ಲೆಯ 9 ಮಂಡಲಗಳು, 46 ಮಹಾಶಕ್ತಿಕೇಂದ್ರಗಳು, 308 ಶಕ್ತಿಕೇಂದ್ರಗಳು ಹಾಗೂ 1,222 ಬೂತ್ಗಳಲ್ಲಿ ಈ ಅಭಿಯಾನ ನಡೆಯಲಿದೆ. ಅಭಿಯಾನದ ಸಂದರ್ಭದಲ್ಲಿ ಪ್ರತೀ ಬೂತ್ ವ್ಯಾಪ್ತಿಯ 25 ಹಿತೈಷಿ ಕಾರ್ಯಕರ್ತರ ಮನೆಗಳ ಮೇಲೆ ಬಿಜೆಪಿ ಪಕ್ಷದ ಧ್ವಜವನ್ನು ಹಾರಿಸಲಾಗುವುದು ಎಂದರು.

ಅಭಿಯಾನ ಮುಖ್ಯ ಉದ್ದೇಶ ಶೇ.100ರಷ್ಟು ಮತದಾನ ಆಗುವ ರೀತಿಯಲ್ಲಿ ಮತದಾರರನ್ನು ಮನವೊಲಿಸುವುದು ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ಎಲ್ಲಾ ಬೂತ್ಗಳಲ್ಲಿ ಹಾಗೂ ಹಳ್ಳಿಗಳಲ್ಲಿ ವೀಕ್ಷಿಸುವಂತೆ ಜನರನ್ನು ಪ್ರೇರೇಪಿಸುವುದಾಗಿದೆ. ಪ್ರತೀ ಬೂತ್ನಲ್ಲಿ ವಾಟ್ಸ್ಪ್ ಗ್ರೂಪ್ಗಳನ್ನು ಮಾಡಿ ಪಕ್ಷದ ಎಲ್ಲಾ ವಿಚಾರಗಳನ್ನು ಜನರಿಗೆ ಮುಟ್ಟಿಸಲಾಗುವುದು ಎಂದು ಹೇಳಿದರು.
ಬೂತ್ ವಿಜಯ ಅಭಿಯಾನದ ಯಶಸ್ವಿಗಾಗಿ ಜಿಲ್ಲಾ ಮಟ್ಟದಲ್ಲಿ ಸಮಿತಿ ರಚನೆ ಮಾಡಿದ್ದು, ಸಮಿತಿಯ ಸಂಚಾಲಕರಾಗಿ ಜಿಪಂ ಮಾಜಿ ಸದಸ್ಯ ರವೀಂದ್ರ ಬೆಳವಾಡಿ, ಸಹಸಂಚಾಲಕರಾಗಿ ಬಿ.ರಾಜಪ್ಪ ಹಾಗೂ ಪುಣ್ಯಪಾಲ್, ಅವಿನಾಶ್ ಹಾಗೂ ಸರೋಜ ಸುರೇಂದ್ರ ಇವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಇದೇ ರೀತಿ ಜಿಲ್ಲೆಯ ಎಲ್ಲಾ 9ಮಂಡಲಗಳಲ್ಲೂ ಸಮಿತಿಗಳನ್ನು ರಚಿಸಲಾಗಿದೆ. ಈ ಅಭಿಯಾನದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್, ಅಫೆಕ್ಸ್ ಬ್ಯಾಂಕ್ ಅಧ್ಯಕ್ಷ ಮತ್ತು ಶಾಸಕ ಬೆಳ್ಳಿ ಪ್ರಕಾಶ್ ಹಾಗೂ ಶಾಸಕರಾದ ಡಿ.ಎಸ್.ಸುರೇಶ್, ಎಂ.ಪಿ.ಕುಮಾರ ಸ್ವಾಮಿ, ಎಂ.ಕೆ.ಪ್ರಾಣೇಶ್ ಸೇರಿದಂತೆ ಜಿಲ್ಲಾ ಪದಾಧಿಕಾರಿಗಳು, ಮಂಡಲ ಪದಾಧಿಕಾರಿಗಳು, ಮಹಾಶಕ್ತಿಕೇಂದ್ರ ಹಾಗೂ ಶಕ್ತಿಕೇಂದ್ರಗಳೊನ್ನಳಗೊಂಡ ಸಾವಿರಾರು ಕಾರ್ಯಕರ್ತರು ಅಭಿಯಾನದಲ್ಲಿ ಸಕ್ರೀಯರಾಗಿ ಕೆಲಸ ಮಾಡಲಿದ್ದಾರೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ದೀಪಕ್ ದೊಡ್ಡಯ್ಯ, ಬೆಳವಾಡಿ ರವೀಂದ್ರ, ಎಚ್.ಡಿ.ತಮ್ಮಯ್ಯ, ಕವಿತಾ ಶೇಖರ್, ಅಂಕಿತಾ, ರಾಜಪ್ಪ, ದಿನೇಶ್ ಉಪಸ್ಥಿತರಿದ್ದರು.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications