ಯಡಿಯೂರಪ್ಪಗೆ ಸಿಎಂ ಆಗೋ ಆಸೆ ಇನ್ನೂ ಹೋಗಿಲ್ಲ : ಸಿದ್ದರಾಮಯ್ಯ
Recommended Video

ಚಿಕ್ಕಮಗಳೂರು, ಜನವರಿ 16 : 'ಬಿ.ಎಸ್.ಯಡಿಯೂರಪ್ಪಗೆ 77 ವರ್ಷವಾಗಿದೆ. ಆದರೂ ಇನ್ನೂ ಬುದ್ಧಿ ಬಂದಿಲ್ಲ. ಸಿಎಂ ಆಗೋ ಆಸೆ ಅವರಿಗೆ ಇನ್ನೂ ಹೋಗಿಲ್ಲ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಬುಧವಾರ ಚಿಕ್ಕಮಗಳೂರಿನ ಬೀರೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, 'ಬಿಜೆಪಿಯವರು ಅತ್ಯಂತ ಮಾನಗೆಟ್ಟವರು ಹಾಗೂ ಲಜ್ಜೆಗೆಟ್ಟವರು. ಬಿಜೆಪಿಯವರಗೆ ಮಾನ ಮಯಾರ್ದೆ ಇಲ್ಲ. ಮಾಧ್ಯಮದವರಿಗೆ ಸುಳ್ಳು ಹೇಳುತ್ತಿದ್ದಾರೆ' ಎಂದರು.

'ಬಿಜೆಪಿಯವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಜನರು ಅವರಿಗೊಂದು ಮ್ಯಾನ್ ಡೇಟ್ ಕೊಟ್ಟಿದ್ದಾರೆ .ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಬೇಕು. ಬಿಜೆಪಿಯವರಿಗೆ ಅಧಿಕಾರ ಮಾಡಿ ಅಂತ ತೀರ್ಪು ಕೊಟ್ಟಿಲ್ಲ' ಎಂದು ಹೇಳಿದರು.
'ಕಳೆದ ಆರು ತಿಂಗಳಿಂದ ಸರ್ಕಾರ ಅಭದ್ರಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಯಡಿಯೂರಪ್ಪಗೆ ವಯಸ್ಸಾಗಿದೆ ಹೊರತು ಬುದ್ಧಿ ಬಂದಿಲ್ಲ. 77 ವರ್ಷ ವಯಸ್ಸಾಗಿದೆ ಬುದ್ಧಿ ಮಾತ್ರ ಬೆಳೆದಿಲ್ಲ, ಇನ್ನೂ ಸಿಎಂ ಆಗಬೇಕೆಂದು ವಾಮಮಾರ್ಗ ಹಿಡಿದಿದ್ದಾರೆ' ಎಂದು ಸಿದ್ದರಾಮಯ್ಯ ಆರೋಪಿಸಿದರು.
'ಶಾಸಕರಿಗೆ ಕೋಟ್ಯಾಂತರ ರೂಪಾಯಿ ಆಫರ್ ಮಾಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾಡುತ್ತಿರುವ ಅವಮಾನ. ಇಂತಹ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ಬಿಜೆಪಿಯವರಿಗೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ' ಎಂದರು.
'ಹರಿಯಾಣದಲ್ಲಿ ಎಲ್ಲರನ್ನೂ ಕೂಡಿಟ್ಟು ಕೊಂಡಿದ್ದಾರೆ. ಸಂಕ್ರಾಂತಿ ಗಿಫ್ಟ್ ಕೊಡ್ತೀವಿ, ಯುಗಾದಿ ಗಿಫ್ಟ್ ಕೊಡ್ತೀನಿ ಅಂತ ಬರೀ ಸುಳ್ಳು ಹೇಳುತ್ತಿದ್ದಾರೆ' ಎಂದು ವಾಗ್ದಾಳಿ ನಡೆಸಿದರು.
-
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ











Click it and Unblock the Notifications