ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ಜನನಾಯಕರು ಇರುವ ಪಕ್ಷ: ಹಾಗಾಗಿ ಸಿದ್ದರಾಮಯ್ಯಗೆ ಮುಕ್ತ ಆಹ್ವಾನ

|
Google Oneindia Kannada News

ಚಿಕ್ಕಮಗಳೂರು, ಜೂನ್ 1: ರಾಜ್ಯ ಪ್ರವಾಸೋದ್ಯಮ ಇಲಾಖೆಯ ಸಚಿವ ಸಿ.ಟಿ.ರವಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಬಿಜೆಪಿ ಸೇರಲು ಮುಕ್ತ ಆಹ್ವಾನವನ್ನು ನೀಡಿದ್ದಾರೆ.

Recommended Video

Padarayanapura corporator Imran Pasha shares special video from quaratine centre | Oneindia Kannada

"ಸಿದ್ದರಾಮಯ್ಯನವರು ಕಾಂಗ್ರೆಸ್ ಮುಖಂಡರು. ಹಾಗಾಗಿ, ಬಿಜೆಪಿಯನ್ನು ಮತ್ತು ನಮ್ಮ ಸರಕಾರದ ಸಾಧನೆಯನ್ನು ಅವರಿಂದ ಹೊಗಳಲು ಸಾಧ್ಯವೇ" ಎಂದು ಪ್ರಶ್ನಿಸಿರುವ ಸಚಿವ ರವಿ, "ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯನವರು ಬಿಜೆಪಿಗೆ ಬರುವ ಬೆಳವಣಿಗೆ ನಡೆದರೂ ನಡೆಯಬಹುದು"ಎಂದು ಹೇಳಿದ್ದಾರೆ.

'ಇದು ಮೋದಿ ಕುರುಡುತನದ ಆಲೋಚನೆ': ಸಿದ್ದರಾಮಯ್ಯ ಅಸಮಾಧಾನ'ಇದು ಮೋದಿ ಕುರುಡುತನದ ಆಲೋಚನೆ': ಸಿದ್ದರಾಮಯ್ಯ ಅಸಮಾಧಾನ

"ಕಾಂಗ್ರೆಸ್ ನಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನವರ ನಡುವೆ ಶೀತಲ ಸಮರ ನಡೆಯುತ್ತಿಲ್ಲವೇ. ಇದು ರಾಜಕೀಯ, ಹಾಗಾಗಿ ಮುಂದಿನ ದಿನಗಳಲ್ಲಿ ಏನು ಬೇಕಾದರೂ ರಾಜಕೀಯ ಬೆಳವಣಿಗೆ ನಡೆಯಬಹುದು"ಎಂದು ಸಿ.ಟಿ.ರವಿ ಹೇಳಿದ್ದಾರೆ.

BJP Is Party With Peoples Leader: Minister C T Ravi Invited Siddaramaiah To BJP

"ರಾಜ್ಯದಲ್ಲಿ ಕೆಲವೇ ಕೆಲವು ಜನನಾಯಕರೆಂದರೆ ಯಡಿಯೂರಪ್ಪ, ದೇವೇಗೌಡ್ರು ಮತ್ತು ಸಿದ್ದರಾಮಯ್ಯ. ಜನನಾಯಕರು ಇರಬೇಕಾಗಿರುವುದು ಬಿಜೆಪಿಯಲ್ಲಿ"ಎಂದು ಸಚಿವ ರವಿ ಹೇಳುವ ಮೂಲಕ, ಪರೋಕ್ಷವಾಗಿ ಗೌಡ್ರು ಮತ್ತು ಸಿದ್ದರಾಮಯ್ಯನವರನ್ನು ಬಿಜೆಪಿಗೆ ಆಹ್ವಾನಿಸಿದ್ದಾರೆ.

"ಭಾರತದ ಅಸ್ತಿತ್ವ ಇರುವುದು ಹಳ್ಳಿಗಳಲ್ಲಿ. ಅಲ್ಲೆಲ್ಲ ಕಂಪ್ಯೂಟರ್-ಲ್ಯಾಪ್ ಟಾಪ್ -ಸ್ಮಾರ್ಟ್ ಪೋನ್‌ಗಳೆಲ್ಲಿಂದ ಬರಬೇಕು? ಪೋನ್ ಇದ್ದರೂ ನೆಟ್‌ವರ್ಕ್ ಎಲ್ಲಿದೆ? ಆನ್ ಲೈನ್ ಶಿಕ್ಷಣದಲ್ಲಿ ಹಳ್ಳಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದು ಹೇಗೆ? ದೇಶ ಆಳುವ ನಾಯಕರಿಗೆ ಈ ಪ್ರಾಥಮಿಕ ಜ್ಞಾನ ಬೇಡವೇ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ಡಿ.ಕೆ.ಶಿವಕುಮಾರ್ ಪದಗ್ರಹಣಕ್ಕೆ ದಿನವೇ ಕೂಡಿ ಬರುತ್ತಿಲ್ಲ: 2ನೇ ಬಾರಿಯೂ ವಿಘ್ನಡಿ.ಕೆ.ಶಿವಕುಮಾರ್ ಪದಗ್ರಹಣಕ್ಕೆ ದಿನವೇ ಕೂಡಿ ಬರುತ್ತಿಲ್ಲ: 2ನೇ ಬಾರಿಯೂ ವಿಘ್ನ

"ಸಿದ್ದರಾಮಯ್ಯನವರು ಬಿಜೆಪಿಯನ್ನು ಹೊಗಳಿದರು ಎಂದಾಗುವುದು, ಅದು ಅವರು ಬಿಜೆಪಿ ಸೇರಿದಾಗ ಮಾತ್ರ" ಎಂದು ಸಚಿವ ಸಿ.ಟಿ.ರವಿ ಲೇವಡಿ ಮಾಡಿದ್ದಾರೆ.

English summary
BJP Is Party With Peoples Leader: Minister C T Ravi Invited Siddaramaiah To BJP,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X