ನಿಗೂಢವಾಗಿ ಸಾವನ್ನಪ್ಪಿದ ಚಂದ್ರುವಿಗೂ ಗೌರಿಗದ್ದೆ ಆಶ್ರಮಕ್ಕೂ ಇರುವ ಸಂಬಂಧವೇನು?
ಚಿಕ್ಕಮಗಳೂರು, ನವೆಂಬರ್ 7: ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್ ಕಳೆದ ಭಾನುವಾರ ನಿಗೂಢವಾಗಿ ಕಾಣೆಯಾಗಿದ್ದರು. ಆ ನಂತರ ಅವರು ಶವವಾಗಿ ಪತ್ತೆಯಾಗಿದ್ದರು. ಈ ಸಾವು ಹಲವು ಶಂಕೆಗಳನ್ನು ಹುಟ್ಟುಹಾಕಿದೆ.
ಕಾಣೆಯಾದ ಐದು ದಿನಗಳ ಬಳಿಕ ಹೊನ್ನಾಳಿ-ನ್ಯಾಮತಿ ನಡುವೆ ಇರುವ ತುಂಗಾ ಮೇಲ್ದಂಡೆ ನಾಲೆಯ ತಡೆಗೋಡೆ ಬಳಿ ಚಂದ್ರಶೇಖರ್ ಕಾರು ಪತ್ತೆಯಾಗಿತ್ತು. ಈ ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದಾಗ, ಕಾಲುವೆಯಲ್ಲಿ ಸಿಕ್ಕ ಕಾರಿನ ಹಿಂಬದಿ ಸೀಟ್ನಲ್ಲಿ ಚಂದ್ರಶೇಖರ್ ಮೃತದೇಹ ಪತ್ತೆಯಾಗಿತ್ತು.
ಕಾರು ವೇಗವಾಗಿ ಚಲಾಯಿಸಿದ ಕಾರಣ ಅಪಘಾತವಾಗಿರಬಹುದು ಎಂಬ ಶಂಕೆ ಪೊಲೀಸರು ವ್ಯಕ್ತಪಡಿಸಿದ್ದರು. ಶಾಸಕ ರೇಣುಕಾಚಾರ್ಯ ಹಾಗೂ ಕುಟುಂಬಸ್ಥರು ಇದೊಂದು ಪೂರ್ವನಿಯೋಜಿತ ಕೊಲೆ ಎಂದೇ ಆರೋಪಿಸುತ್ತಿದ್ದಾರೆ. ಚಂದ್ರು ಕೈಯಲ್ಲಿ ಹಗ್ಗ ಕಂಡು ಬಂದಿದೆ. ಸೀಟ್ ಬೆಲ್ಟ್ ಹಾಕಿದ್ದರೂ ಹಿಂಬದಿ ಸೀಟ್ಗೆ ಹೋಗಿದ್ದು ಹೇಗೆ..? ಎನ್ನುವುದು ಕುಟುಂಬಸ್ಥರ ಪ್ರಶ್ನೆಯಾಗಿದೆ.

ಚಂದ್ರಶೇಖರ್ ಸಾವು ರಾಜ್ಯದಲ್ಲೇ ಸಂಚಲನ ಮೂಡಿಸಿದೆ. ನಾಪತ್ತೆಯಾಗುವ ಮೊದಲು ಚಂದ್ರಶೇಖರ್ ಯಾರ ಜೊತೆ ಇದ್ದರು, ಎಲ್ಲಿಗೆ ಹೋಗಿದ್ದರು, ಯಾರೊಂದಿಗೆ ಕೊನೆಯದಾಗಿ ಸಂಪರ್ಕಕ್ಕೆ ಸಿಕ್ಕಿದ್ದರು ಎಂಬುದರ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ. ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ವೇಳೆ ಕೊನೆಯ ಬಾರಿ ಭೇಟಿ ನೀಡಿದ ಸ್ಥಳದ ಬಗ್ಗೆ ಮಾಹಿತಿ ಬಹಿರಂಗವಾಗಿದೆ.
ಚಂದ್ರಶೇಖರ್ ಯಾರ ಸಂಪರ್ಕಕ್ಕೂ ಸಿಗದೇ ನಾಪತ್ತೆಯಾಗುವ ಕೆಲ ಗಂಟೆಗಳ ಮುಂಚೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಗೌರಿಗದ್ದೆಯಲ್ಲಿರುವ ಒಂದು ಪ್ರತಿಷ್ಠಿತ ಆಶ್ರಮಕ್ಕೆ ಭೇಟಿ ನೀಡಿದ್ದರು. ಈ ಆಶ್ರಮಕ್ಕೂ ಮೃತ ಚಂದ್ರಶೇಖರ್ಗೂ ನಿಕಟ ಸಂಪರ್ಕವಿರುವುದು ತಿಳಿದುಬಂದಿದೆ. ಚಂದ್ರಶೇಖರ್ ಗೌರಿಗದ್ದೆಯ ಆಶ್ರಮಕ್ಕೆ ಆಗಾಗ ತೆರಳುತ್ತಿದ್ದು, ಆಶ್ರಮದ ಭಕ್ತರಾಗಿದ್ದರು ಎನ್ನುವ ಮಾಹಿತಿ ಕೂಡ ಲಭ್ಯವಾಗಿದೆ.
ಚಂದ್ರಶೇಖರ್ ತನ್ನ ಸ್ನೇಹಿತ ಕಿರಣ್ ಜೊತೆಯಲ್ಲಿ ಆಗಾಗ ಗೌರಿಗದ್ದೆ ಆಶ್ರಮಕ್ಕೆ ಭೇಟಿ ನೀಡುತ್ತಿದ್ದರು. ಆಶ್ರಮದಲ್ಲಿ ಅವರನ್ನು ಆತ್ಮೀಯವಾಗಿಯೇ ಕಾಣುತ್ತಾ ಚಂದ್ರು ಅಂತಾನೆ ಎಲ್ಲರೂ ಕರೆಯುತ್ತಿದ್ದರು. ಚಂದ್ರಶೇಖರ್ ಗೌರಿಗದ್ದೆಯ ಆಶ್ರಮದಲ್ಲಿ ಸಿಬ್ಬಂದಿಯಂತೆ ಭಕ್ತರಿಗೆ ಊಟ ಬಡಿಸುತ್ತಿದ್ದರು. ತೆಂಗಿನ ಕಾಯಿ ಸುಲಿಯುತ್ತಿದ್ದರು. ಎಲ್ಲರಂತೆ ಆಶ್ರಮದ ಕೆಲಸಗಳನ್ನು ಮಾಡಿ ಸರಳವಾಗಿ ಇರುತ್ತಿದ್ದರು ಎನ್ನುವ ವಿಚಾರವನ್ನು ಆಶ್ರಮದ ಸಿಬ್ಬಂದಿ ಹೇಳಿದ್ದಾರೆ.
ಭಾನುವಾರ ರಾತ್ರಿ ಒಂಬತ್ತು ಗಂಟೆಗೆ ಆಶ್ರಮಕ್ಕೆ ಬಂದಿದ್ದ ಚಂದ್ರಶೇಖರ್ ಹಾಗೂ ಆತನ ಸ್ನೇಹಿತ ಕಿರಣ್ 9.40ರ ವರೆಗೂ ಗುರೂಜಿ ಕಾದಿದ್ದರು. ಬಳಿಕ ಗುರೂಜಿ ಆರ್ಶೀವಾದ ಪಡೆದು, 9.45ಕ್ಕೆ ಆಶ್ರಮದಿಂದ ತೆರಳಿದ್ದರು ಎನ್ನಲಾಗಿದೆ. ಪೊಲೀಸರು ಈ ಆಯಾಮದಲ್ಲೂ ತನಿಖೆ ನಡೆಸುತ್ತಿದ್ದು, ಈಗಾಗಲೇ ತನಿಖಾ ತಂಡ ಗೌರಿಗದ್ದೆ ಆಶ್ರಮಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications