ಚಿಕ್ಕಮಗಳೂರು: ದಲಿತ ಯುವತಿಯನ್ನು ಮದುವೆಯಾಗಿದ್ದಕ್ಕೆ ಗ್ರಾಮದಿಂದ ಬಹಿಷ್ಕಾರ; ಮತಾಂತರಕ್ಕೆ ಚಿಂತನೆ
ಚಿಕ್ಕಮಗಳೂರು, ಫೆಬ್ರವರಿ 4: ವ್ಯಕ್ತಿಯೊಬ್ಬರು ದಲಿತ ಯುವತಿಯನ್ನು ಮದುವೆಯಾಗಿದ್ದಕ್ಕೆ ಸ್ವಜಾತಿಯವರಿಂದ ಬಹಿಷ್ಕಾರ ಹಾಕಿಸಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಲಿಂಗದಹಳ್ಳಿ ಗ್ರಾಮದ ಸೋಮಶೇಖರ್ ಕುಟುಂಬಕ್ಕೆ ಸ್ವಜಾತಿ ಮುಖಂಡರು ಬಹಿಷ್ಕಾರ ಹಾಕಿದ್ದಾರೆ. ವ್ಯಕ್ತಿಯು ದಲಿತ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದರು. ದಲಿತ ಯುವತಿಯನ್ನು ಮದುವೆಯಾಗಿದಕ್ಕೆ ಈ ದಂಪತಿಯ ಜೊತೆ ಗ್ರಾಮದಲ್ಲಿ ಯಾರು ಮಾತನಾಡುವಂತಿರಲಿಲ್ಲ. ಹಾಗೇನಾದರೂ ಅವರ ಜೊತೆ ಯಾರಾದರೂ ಮಾತನಾಡಿದ್ದಲ್ಲಿ 5 ಸಾವಿರ ರೂ. ದಂಡ ವಿಧಿಸಲಾಗುವುದು ಎಂದು ಬಹಿಷ್ಕಾರ ಹಾಕಿದ್ದಾರೆ.

ಊರಿನ ದೇವಾಲಯಕ್ಕೆ ಪ್ರವೇಶವನ್ನು ಕೊಡುತ್ತಿಲ್ಲ. ಯಾರೂ ಕೂಡ ಇವರನ್ನು ಯಾವುದೇ ಕಾರ್ಯಕ್ರಮಕ್ಕೂ ಕರೆಯಬಾರದು ಅಂತಾ ಆದೇಶ ಹೊರಡಿಸಿದ್ದಾರೆ. ಬಹಿಷ್ಕಾರಗೊಂಡಿರುವ ಈ ಕುಟುಂಬದವರನ್ನು ಮಾತನಾಡಿಸಿದರೂ 5 ಸಾವಿರ ರೂ. ದಂಡ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರಂತೆ. ಇದರಿಂದ ಮಾನಸಿಕವಾಗಿ ನೊಂದಿರುವ ಸೋಮಶೇಖರ್ ಕುಟುಂಬ, ನ್ಯಾಯ ಕೊಡಿಸುವಂತೆ ಜಿಲ್ಲಾಡಳಿತದ ಮೊರೆ ಹೋಗಿದೆ.

ಈ ಬಗ್ಗೆ ಕಳೆದ ಕೆಲ ತಿಂಗಳಿನಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಈ ಕುಟುಂಬಕ್ಕೆ ನ್ಯಾಯ ಸಿಕ್ಕಿಲ್ಲ. ನಮ್ಮ ಪಾಡಿಗೆ ನಾವು ಜೀವನ ಮಾಡಿಕೊಂಡು ಇರುತ್ತೇವೆ ಅಂತಾ ಸುಮ್ಮನಿದ್ದರು. ಸೋಮಶೇಖರ್ ಕುಟುಂಬಕ್ಕೆ ಕಿರುಕುಳ ತಪ್ಪಿಲ್ಲವಂತೆ. ಹೀಗಾಗಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ತಯಾರಿ ನಡೆಸಿದ ಸೋಮಶೇಖರ್ ಕುಟುಂಬವನ್ನು ಹಿಂದೂ ಸಂಘಟನೆಗಳ ಮುಖಂಡರು ಮನವೊಲಿಸಿ ನ್ಯಾಯ ಕೊಡಿಸುವ ಭರವಸೆ ತುಂಬಿದ್ದಾರೆ. ಹೀಗಾಗಿ ಮತಾಂತರ ಹೊಂದುವ ನಿರ್ಧಾರದಿಂದ ಸೋಮಶೇಖರ್ ಕುಟುಂಬ ಹಿಂದೆ ಸರಿದಿದೆ.
ಪ್ರೀತಿಸಿದ ಹುಡುಗಿ ಜೊತೆ ನಾನು ಮದುವೆಯಾಗಿದ್ದೇನೆ. ಅನ್ಯ ಜಾತಿಯ ಹುಡುಗಿಯನ್ನು ಮದುವೆಯಾಗಬಾರದು ಅಂತಾ ಯಾವ ಕಾನೂನಿನಲ್ಲಿಯೂ ಇಲ್ಲ. ಹೀಗಿರುವಾಗ ನಮ್ಮ ಕುಟುಂಬದ ಮೇಲೆ ಬಹಿಷ್ಕಾರ ಹೇರಲು ಇವರಿಗೇನು ಅಧಿಕಾರವಿದೆ ಅಂತಾ ಸೋಮಶೇಖರ್ ಪ್ರಶ್ನೆ ಮಾಡಿದ್ದಾರೆ. ಸಾಮಾಜಿಕ ಬಹಿಷ್ಕಾರದ ಅನಿಷ್ಟ ಪದ್ಧತಿಯನ್ನು ಈ ಕುಟುಂಬಕ್ಕೆ ಸ್ವಜಾತಿಯ ಮುಖಂಡರೇ ಹೇರಿದ್ದರು. ಈ ವಿಚಾರವನ್ನು ಜಿಲ್ಲಾಡಳಿತ ಇನ್ನೂ ಗಂಭೀರವಾಗಿ ತೆಗೆದುಕೊಳ್ಳದೇ ಇರುವುದು ನಿಜಕ್ಕೂ ದುರಂತವೇ ಸರಿ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ, ಸಮಾಜಕ್ಕೆ ಮಾರಕವಾಗಿರುವ ಸಾಮಾಜಿಕ ಬಹಿಷ್ಕಾರವನ್ನು ತೊಡೆದು ಹಾಕುತ್ತಾರಾ ಅನ್ನುವುದನ್ನು ಕಾದು ನೋಡಬೇಕು.

Recommended Video
ಪ್ರಕರಣದ ಬಗ್ಗೆ ಗಮನ ಹರಿಸಲಾಗುವುದು; ಜಿಲ್ಲಾಧಿಕಾರಿ ಕೆ.ಎನ್. ರಮೇಶ್
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್. ರಮೇಶ್, ನಿನ್ನೆ ಅಪರ ಜಿಲ್ಲಾಧಿಕಾರಿಗೆ ನೊಂದ ಕುಟುಂಬದವರು ಮನವಿ ಸಲ್ಲಿಸಿದ್ದಾರೆ. ಕುಟುಂಬಕ್ಕೆ ಅವರ ಜನಾಂಗದವರು ಕಿರುಕುಳ ನೀಡಿದ್ದರೆ, ಸೂಕ್ತ ಕ್ರಮವಹಿಸಲಾಗುವುದು. ಈಗಾಗಲೇ ಪೊಲೀಸ್ ಅಧಿಕಾರಿಗಳು ಹಾಗೂ ತಾಲೂಕು ಅಧಿಕಾರಿ ಸ್ಥಳ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದ್ದೇನೆ,. ತಪ್ಪು ಕಂಡು ಬಂದಲ್ಲಿ, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದರು. ಕಾಫಿನಾಡಿನಲ್ಲಿ ಬಹಿಷ್ಕಾರದ ಪಿಡುಗು ಈ ಪರಿ ಸದ್ದು ಮಾಡಿರುವುದು ನಿಜಕ್ಕೂ ವಿಪರ್ಯಾಸವೇ ಸರಿ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ












Click it and Unblock the Notifications