ತುಂಬಲಾರದ ನಷ್ಟ; ಸಿದ್ಧಾರ್ಥ ಒಡೆತನದ ಫರ್ನಿಚರ್ ಕಂಪನಿ ಬಂದ್
Recommended Video
ಚಿಕ್ಕಮಗಳೂರು, ನವೆಂಬರ್ 25: ಕಾಫಿ ಡೇ ಮಾಲೀಕ, ಉದ್ಯಮಿ ಸಿದ್ಧಾರ್ಥ ಅವರು ಸಾವನ್ನಪ್ಪಿ ಹತ್ತಿರತ್ತಿರ ನಾಲ್ಕು ತಿಂಗಳು ಕಳೆಯುತ್ತಿವೆ. ಅಧಿಕ ಸಾಲದ ಸುಳಿಯಲ್ಲಿ ಸಿಲುಕಿ, ಜುಲೈ 29ಕ್ಕೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು ಸಿದ್ಧಾರ್ಥ್.
ಇದೀಗ ನಾಲ್ಕು ತಿಂಗಳ ನಂತರ ಸಿದ್ಧಾರ್ಥ ಒಡೆತನದ ಡಾರ್ಕ್ ಫಾರೆಸ್ಟ್ ಫರ್ನಿಚರ್ ಕಂಪೆನಿಯನ್ನು ಬಂದ್ ಮಾಡಲು ನಿರ್ಧರಿಸಲಾಗಿದ್ದು, ಏಕಾಏಕಿ ಕಂಪನಿ ಮುಚ್ಚಿದ ಪರಿಣಾಮ ನೂರಾರು ಕಾರ್ಮಿಕರು ಕಂಗಾಲಾಗಿದ್ದಾರೆ. ಕಾರ್ಮಿಕರು ಪ್ರತಿಭಟಿಸದಂತೆ ಪೊಲೀಸರು ಎಚ್ಚರಿಕೆ ನೀಡಿದ್ದು, ಎಬಿಸಿ ಆವರಣದ 100 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಹೇರಲಾಗಿದೆ. ಸ್ಥಳದಲ್ಲಿ ಡಿಎಆರ್ ಪಿ ತುಕಡಿ ನಿಯೋಜಿಸಲಾಗಿದೆ. ನಿಷೇಧಾಜ್ಞೆ ನಡುವೆಯೂ ಮೇಲಾಧಿಕಾರಿಗಳ ಆಗಮನಕ್ಕಾಗಿ ಕಾರ್ಮಿಕರು ಕಾದು ಕುಳಿತಿದ್ದಾರೆ.
ಚಿಕ್ಕಮಗಳೂರು ನಗರದ ಎಬಿಸಿ ಆವರಣದಲ್ಲಿರುವ ಈ ಕಂಪನಿ ಸಿದ್ಧಾರ್ಥ ಅವರ ಮರಣದ ನಂತರ ಸಾಕಷ್ಟು ನಷ್ಟ ಅನುಭವಿಸಿದ್ದು, ಈ ಕಾರಣದಿಂದ ಬಂದ್ ಮಾಡುತ್ತಿರುವುದಾಗಿ ನೋಟೀಸ್ ನಲ್ಲಿ ನಮೂದಿಸಲಾಗಿದೆ.

ಭಿನ್ನ ರೀತಿಯ ಪೀಠೋಪಕರಣಕ್ಕೆ ಆರಂಭಗೊಂಡ ಸಂಸ್ಥೆ
ಎಂಟು ವರ್ಷದ ಹಿಂದೆ ಕೆಫೆ ಕಾಫಿ ಡೇ ಅಂಗ ಸಂಸ್ಥೆಯಾಗಿ ಡ್ಯಾಫ್ಕೋ ಕಂಪನಿಯನ್ನು ಉದ್ಯಮಿ ದಿವಂಗತ ಸಿದ್ಧಾರ್ಥ್ ಹೆಗಡೆ ಪ್ರಾರಂಭ ಮಾಡಿದ್ದರು. ಮ್ಮ ಕೆಫೆ ಕಾಫಿ ಡೇ ಕಂಪನಿ ಉತ್ತುಂಗದಲ್ಲಿದ್ದ ಸಂದರ್ಭದಲ್ಲಿ ರಾಜ್ಯ, ಹೊರ ರಾಜ್ಯ ಸೇರಿದಂತೆ ವಿದೇಶಗಳಲ್ಲಿ ಕಾಫಿ ಡೇಗಳು ತಲೆ ಎತ್ತುತ್ತಿರುವ ಸಂದರ್ಭ ತಮ್ಮ ಕಾಫಿ ಡೇಗಳಿಗೆ ಸ್ವತಃ ಫರ್ನಿಚರ್ ಗಳನ್ನು ತಮ್ಮದೇ ವಿಭಿನ್ನ ರೀತಿಯಲ್ಲಿ ತಯಾರು ಮಾಡುವ ಉದ್ದೇಶದಿಂದ ಈ ಟ್ಯಾಫ್ಕೋ ಕಂಪನಿಯನ್ನು ಪ್ರಾರಂಭ ಮಾಡಲಾಗಿತ್ತು.

ವಿದೇಶಗಳಿಗೂ ಹೊರಟಿದ್ದ ಫರ್ನಿಚರ್ ಗಳು
ಕಂಪನಿ ಆರಂಭಗೊಂಡ ಉದ್ದೇಶದಂತೆ ರಾಜ್ಯ, ಹೊರ ರಾಜ್ಯಗಳಿಂದ ಹಿಡಿದು ವಿದೇಶದಲ್ಲಿರುವ ಕಾಫಿ ಡೇ ಗಳಿಗೂ ಮಲೆನಾಡು ಚಿಕ್ಕಮಗಳೂರಿನಿಂದಲೇ ಫರ್ನಿಚರ್ ಗಳನ್ನು ತಯಾರು ಮಾಡಿ ರವಾನೆ ಮಾಡಲಾಗುತ್ತಿತ್ತು. ಕಂಪನಿಗೆ ವಿದೇಶದಿಂದಲೂ ವುಡ್ ಗಳನ್ನು ತೆಗೆದುಕೊಂಡು ಬರಲಾಗುತ್ತಿತ್ತು. ಇಲ್ಲಿ ಗಯಾನವುಡ್, ಸಿಲ್ವರ್ ಬೀಚ್, ರೋಸ್ವವುಡ್ ಸೇರಿದಂತೆ ಸ್ಥಳೀಯ ಅಕೇಷಿಯಾ ಸಿಲ್ವರ್ ಮರಗಳನ್ನು ಬಳಸಿಕೊಂಡು ಫರ್ನಿಚರ್ ಗಳನ್ನು ತಯಾರು ಮಾಡಲಾಗುತ್ತಿತ್ತು.

ಕಂಪನಿಯ ಸಾವಿರಾರು ಉದ್ಯಮಿಗಳು ಅತಂತ್ರ
ಕಂಪನಿ ಶುರುವಾದ ಸಂದರ್ಭ ಸುಮಾರು 600ಕ್ಕೂ ಹೆಚ್ಚು ರಾಜ್ಯ, ಹೊರ ರಾಜ್ಯದ ಜನರಿಗೆ ಉದ್ಯೋಗ ನೀಡಲಾಗಿತ್ತು. ಜೊತೆಗೆ ಕಂಪನಿಯೂ ತಮ್ಮ ಕೆಲಸಗಾರರಿಗೆ ಉತ್ತಮ ಸಂಬಳದ ಜೊತೆಗೆ ಹಲವು ಸೌಕರ್ಯಗಳನ್ನು ನೀಡಿತ್ತು. ಆದರೆ ಸಿದ್ದಾರ್ಥ್ ಹೆಗಡೆ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ ನಡೆದ ಬಳಿಕ ಡ್ಯಾಫ್ಕೋ ಸಹ ಸಂಕಷ್ಟಕ್ಕೆ ಸಿಲುಕಿತ್ತು. ಅದರಲ್ಲೂ ಕಂಪನಿಯ ಸಂಸ್ಥಾಪಕ ಸಿದ್ಧಾರ್ಥ್ ಹೆಗಡೆ ಸಾವನ್ನಪ್ಪಿದ ಬಳಿಕ ಕೆಲವು ಉದ್ಯೋಗಿಗಳನ್ನು ಕೆಲಸದಿಂದ ತೆಗೆಯಲಾಗಿತ್ತು. ಆದರೆ ಈಗ ಏಕಾಏಕಿ ಕಂಪನಿ ಮುಚ್ಚಲಾಗಿದ್ದು ಕಾರ್ಮಿಕರು ಅತಂತ್ರರಾಗಿದ್ದಾರೆ.

ತಿಂಗಳ ಹಿಂದೆಯೇ ನಿಂತಿದ್ದ ಕೆಲಸ
ಒಂದು ತಿಂಗಳ ಹಿಂದೆಯೇ ಕಂಪನಿಯಲ್ಲಿ ಕೆಲಸವನ್ನು ನಿಲ್ಲಿಸಲಾಗಿತ್ತು. ಕೆಲಸಗಾರರು ಕಂಪನಿಗೆ ಬಂದು ವಾಪಸ್ ಆಗುತ್ತಿದ್ದರು. ಈಗ ಇದರ ಬೆನ್ನಲ್ಲೆ ನವೆಂಬರ್ 25 ರಂದು ಕಂಪನಿಯನ್ನು ಮುಚ್ಚಲಾಗುವುದು ಎಂದು ಕಂಪನಿ ನೋಟಿಸ್ ನೀಡಿ ಇಂದಿನಿಂದ ಬಂದ್ ಮಾಡಿದೆ. ಹೀಗಾಗಿ ಕಂಪನಿಯ ಮುಂದೆ ಜಮಾಯಿಸಿದ ಸಿಬ್ಬಂದಿ ಹೋರಾಟದ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ. ಅಲ್ಲದೇ ಕಾನೂನಿನ ಮೊರೆ ಹೋಗುವುದಾಗಿಯೂ ಕೆಲಸಗಾರರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
-
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications