ಚಿಕ್ಕಮಗಳೂರು ಉಸ್ತುವಾರಿ ಸಚಿವರಾಗಿ ನೇಮಕ, ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಬೈರತಿ ಬಸವರಾಜು
ಚಿಕ್ಕಮಗಳೂರು, ಜುಲೈ 16: ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜು ಅವರನ್ನು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ರಾಜ್ಯ ಸರಕಾರ ನೇಮಿಸಿ ಆದೇಶ ಹೊರಡಿಸಿದೆ. ಬೈರತಿ ಈಗಾಗಲೇ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಗೆ ಈ ಹಿಂದೆ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆಎಸ್ ಈಶ್ವರಪ್ಪ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಆದರೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಆ ಸ್ಥಾನ ಹಾಗೆಯೆ ಉಳಿದಿತ್ತು. ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂಗಾರು ಮಳೆ ಭಾರಿ ಪ್ರಮಾಣದಲ್ಲಿ ಹಾನಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಬೈರತಿ ಬಸವರಾಜುರನ್ನು ಪರಿಶೀಲನೆ ಹಾಗೂ ಪರಿಹಾರ ನೋಡಿಕೊಳ್ಳುವುದಕ್ಕಾಗಿ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಶನಿವಾರ ಸರಕಾರ ಆದೇಶಿಸಿದೆ.
ಕಳೆದ ಐದು ತಿಂಗಳಿನಿಂದ ಜಿಲ್ಲೆಗೆ ಉಸ್ತುವಾರಿ ಸಚಿವರಿಲ್ಲದೆ ಪ್ರವಾಹ ಪರಿಸ್ಥಿತಿ ಉಂಟಾದರೂ ಮಲೆನಾಡಿಗರ ಗೋಳು ಕೇಳುವವರಿರಲಿಲ್ಲ. ಕೆಲವು ಜನಪ್ರತಿನಿಧಿಗಳು ಬಂದರೂ ಕಲವೇ ಸ್ಥಳಗಳಿಗೆ ಭೇಟಿ ನೀಡಿ ಹೊರಡುತ್ತಿದ್ದರು, ಇನ್ನೂ ವಾರದ ಹಿಂದೆ ಹೊಳೆಯಲ್ಲಿ ಕೊಚ್ಚಿ ಹೋದ ಹೊಸಪೇಟೆ ಬಾಲಕಿ ಮನೆಗೆ ಯಾರೊಬ್ಬರು ತೆರಳದೇ ಇದ್ದದ್ದು, ಜನರ ಆಕ್ರೋಶಕ್ಕೆ ಕಾರಣವಾಗಿತ್ತು.

ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಬೈರತಿ ಭೇಟಿ
ಜಿಲ್ಲಾ ಉಸ್ತುವಾರಿಯಾಗಿ ನೇಮಕವಾಗುತ್ತಿದ್ದಂತೆ ಸಚಿವ ಬೈರತಿ ಬಸವರಾಜು ಚಿಕ್ಕಮಗಳೂರಿನಳಕ್ಕೆ ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಭೇಟಿ ನೀಡಿದರು. ಅರೆನೂರಿನಲ್ಲಿ ಭೂಕುಸಿತವಾಗಿದ್ದ ಕಾಫಿ ತೋಟ ನೋಡಲು ತೆರಳಿದ್ದ ಸಂದರ್ಭದಲ್ಲಿ ಮಣ್ಣು ಕುಸಿದಿದ್ದ ಸ್ಥಳದಲ್ಲಿ ಕಾಲಿಟ್ಟು ಸಚಿವರು ಹೊರಬರಲಾರದೆ ಪರದಾಡಿದ ಘಟನೆ ನಡೆಯಿತು. ಕೊನೆಗೆ ಸ್ಥಳೀಯರ ನೆರವಿನಿಂದ ಕಷ್ಟ ಪಟ್ಟು ಹೊರಬಂದರು.
ಕೊಟ್ಟಿಗೆ ಹಾರದಲ್ಲಿ ಮನೆ ಕುಸಿತ
ಮೂಡಿಗೆರೆ ತಾಲೂಕಿನ ಕೊಟ್ಟಿಗೆ ಹಾರ ಸಮೀಪದ ಅಜಾದ್ ನಗರದಲ್ಲಿ ಮನೆಯೊಂದು ಕುಸಿದ್ದು, ಬಡಕುಟುಂಬವೊಂದು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಅಜಾದ್ ನಗದ ಲೀಲಾ ಎಂಬುವವರು ತಮ್ಮ ನಾಲ್ಕು ಮಕ್ಕಳೊಂದಿಗೆ ಬಿರುಕುಬಿಟ್ಟಿರು ಮನೆಯ ಪಕ್ಕದಲ್ಲಿ ಟಾರ್ಪಲ್ ಕಟ್ಟಿಕೊಂಡು ವಾಸ ಮಾಡುತ್ತಿದ್ದಾರೆ. ಮಳೆ ಹೀಗೆ ಮುಂದುವರಿದರೆ ಆಶ್ರಯ ಕಳೆದುಕೊಳ್ಳುವ ಭೀತಿಯಲ್ಲೇ ಕುಟುಂಬ ಜೀವನ ಸಾಗಿಸುತ್ತಿದ್ದಾರೆ.

50 ಸಾವಿರ ನೆರವು ನೀಡಿದ ಸಚಿವ
ಇನ್ನು ಶನಿವಾರವಷ್ಟೇ ಜಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದ ಬೈರತಿ ಬಸವರಾಜು ಟಾರ್ಪಲ್ ಕಟ್ಟಿಕೊಂಡು ವಾಸಿಸುತ್ತಿರುವ ಲೀಲಾ ಮನೆಗೆ ಭೇಟಿ ನೀಡಿ, ಅವರ ಕಣ್ಣೀರಿನ ಕಥೆ ಕೇಳಿ ಸ್ಥಳದಲ್ಲೇ 50 ಸಾವಿರ ರೂಪಾಯಿ ನೆರವು ನೀಡಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications