ಮಗ ಸತ್ತ ತಿಂಗಳೊಳಗೇ ಅಪ್ಪನ ಸಾವು; ಇಂದು ಸಿದ್ಧಾರ್ಥ ತಂದೆ ಗಂಗಯ್ಯ ಹೆಗ್ಡೆ ಅಂತ್ಯಕ್ರಿಯೆ
Recommended Video
ಚಿಕ್ಕಮಗಳೂರು, ಆಗಸ್ಟ್ 26: ಕೆಫೆ ಕಾಫಿ ಡೇ ಮಾಲೀಕ ವಿ.ಜಿ.ಸಿದ್ದಾರ್ಥ ಅವರ ಸಾವಿಗೆ ಇಡೀ ರಾಜ್ಯವೇ ಮರುಗಿತು, ಕಂಬನಿ ಮಿಡಿಯಿತು. ಆದರೆ ಜನ್ಮ ಕೊಟ್ಟು, ಸಾಕಿ ಸಲುಹಿದ ಅಪ್ಪನಿಗೆ ಮಾತ್ರ ತನ್ನ ಮಗನ ಸಾವಿನ ವಿಷಯ ತಿಳಿಯಲೇ ಇಲ್ಲ. ಆಸ್ಪತ್ರೆಯಲ್ಲಿ ಕೋಮಾದಲ್ಲಿದ್ದ ಗಂಗಯ್ಯ ಹೆಗ್ಡೆ ಅವರಿಗೆ ತಮ್ಮ ಮಗ ಸತ್ತದ್ದು, ತಮ್ಮನ್ನು ಬಿಟ್ಟು ಹೋಗಿದ್ದು ಇದಾವುದೂ ತಿಳಿಯಲಿಲ್ಲ. ಇದೀಗ ಅವರೂ ಮಗನನ್ನೇ ಹಿಂಬಾಲಿಸಿದ್ದಾರೆ.
ಸಿದ್ಧಾರ್ಥ ಅವರ ಸಾವು ಸಂಭವಿಸಿ ಇನ್ನೂ ತಿಂಗಳಾಗಿಲ್ಲ, ಅವರ ತಂದೆ ಗಂಗಯ್ಯ ಹೆಗ್ಡೆ ಅವರೂ ವಿಧಿವಶರಾಗಿದ್ದಾರೆ. ತಿಂಗಳು ಕಳೆಯುವುದರೊಳಗೇ ಎರಡೆರಡು ಸಾವು ಕುಟುಂಬಕ್ಕೆ ಆಘಾತ ನೀಡಿದೆ.

ಮಗನ ಕೊನೆ ವಿಧಿ ನಡೆದ ಜಾಗದಲ್ಲೇ ಅಪ್ಪನ ಅಂತ್ಯಸಂಸ್ಕಾರ
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಂಗಯ್ಯ ಹೆಗ್ಡೆ ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ವಿಧಿವಶರಾಗಿದ್ದಾರೆ. ಅವರ ಅಂತ್ಯಕ್ರಿಯೆಯು ಇಂದು ಚಿಕ್ಕಮಗಳೂರಿನಲ್ಲಿ ನಡೆಯಲಿದೆ.
ಗಂಗಯ್ಯ ಹೆಗ್ಡೆ ಅವರ ಪಾರ್ಥಿವ ಶರೀರ ದರ್ಶನಕ್ಕೆ 12 ಗಂಟೆವರೆಗೆ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಅವರ ಸ್ವಗ್ರಾಮ ಚೇತನಹಳ್ಳಿ ಎಸ್ಟೇಟ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಸಿದ್ದಾರ್ಥ ಅವರ ಅಂತ್ಯಕ್ರಿಯೆ ನಡೆಸಿದ್ದ ಸ್ಥಳದ ಪಕ್ಕದಲ್ಲಿಯೇ ಗಂಗಯ್ಯ ಹೆಗ್ಡೆ ಅವರ ಅಂತ್ಯಕ್ರಿಯೆಯೂ ನಡೆಯಲಿದೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನಡೆಸಲಾಗುವುದೆಂದು ತಿಳಿದುಬಂದಿದೆ.

ಕುಟುಂಬಕ್ಕೆ ಎರಡೆರಡು ಸಾವಿನ ಆಘಾತ
ಮಗ ಮರಣ ಹೊಂದಿದ ತಿಂಗಳ ಒಳಗೇ ತಂದೆ ಗಂಗಯ್ಯ ಹೆಗ್ಡೆ ಸಾವನ್ನಪ್ಪಿದ್ದಾರೆ. ಇದು ಅವರ ಕುಟುಂಬಕ್ಕೆ ಮತ್ತೊಂದು ಆಘಾತ ನೀಡಿದಂತಾಗಿದೆ. ಜುಲೈ 31ಕ್ಕೆ ಸಿದ್ಧಾರ್ಥ ಅವರ ಅಂತ್ಯಕ್ರಿಯೆ ನಡೆದಿತ್ತು. ಇದೀಗ ತಿಂಗಳು ಕಳೆಯುವುದರೊಳಗೆ ಅದೇ ಜಾಗದಲ್ಲಿ, ಮತ್ತೊಂದು ಅಂತ್ಯಕ್ರಿಯೆಯನ್ನು ನಡೆಸಬೇಕಾಗಿದೆ.

ವೈರಲ್ ಆಗಿತ್ತು ಅಪ್ಪನ ಪಕ್ಕ ಚಿಂತಾಕ್ರಾಂತರಾಗಿ ಕುಳಿತಿದ್ದ ಸಿದ್ಧಾರ್ಥ ಚಿತ್ರ
ತನ್ನ ತಂದೆಯ ಆರೋಗ್ಯ ವಿಚಾರಿಸಲು ಸಿದ್ಧಾರ್ಥ ಅವರು ಮೈಸೂರಿನ ಗೋಪಾಲಗೌಡ ಆಸ್ಪತ್ರೆಗೆ ಆಗಾಗ ಭೇಟಿ ನೀಡುತ್ತಿದ್ದರು. ತನ್ನ ಅಪ್ಪನ ಪಕ್ಕ ಚಿಂತಾಕ್ರಾಂತರಾಗಿ ಕುಳಿತಿದ್ದ ಸಿದ್ಧಾರ್ಥ ಅವರ ಚಿತ್ರವೊಂದು ಸಿದ್ದಾರ್ಥ ಅವರ ಸಾವಿನ ನಂತರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಫೋಟೋದಲ್ಲಿ ಅವರ ತಂದೆ ಬೆಡ್ ಮೇಲೆ ಮಲಗಿದ್ದು, ಪಕ್ಕದಲ್ಲಿ ಸಿದ್ಧಾರ್ಥ್ ಕುಳಿತು ಚಿಂತಿಸುತ್ತಿರುವಂತೆ ಕಾಣುತ್ತಿದ್ದು, ಈ ಫೋಟೋ ಮನಕಲಕುವಂತಿತ್ತು.

ಅಪ್ಪ, ಮಗ ಇಬ್ಬರಿಗೂ ಸಾವು ತಿಳಿಯಲಿಲ್ಲ
ಗಂಗಯ್ಯ ಹೆಗ್ಡೆ ಅವರಿಗೆ ತಮ್ಮ ಮಗ ಸತ್ತ ವಿಚಾರ ಗೊತ್ತಾಗಲಿಲ್ಲ, ತಮ್ಮ ಮಗನ ಮುಖವನ್ನು ಕೊನೆ ಬಾರಿಯೂ ಅವರಿಗೆ ನೋಡಲು ಸಾಧ್ಯವಾಗಲಿಲ್ಲ. ಸಿದ್ಧಾರ್ಥ ಅವರಿಗೂ ತಂದೆ ಮುಖ ನೋಡಲಾಗುವುದಿಲ್ಲ. ಮಗನ ಸಾವು ಅಪ್ಪನಿಗೆ, ಅಪ್ಪನ ಸಾವು ಮಗನಿಗೆ ತಿಳಿಯಲೇ ಇಲ್ಲ. ಆದರೆ ಅಪ್ಪ ಮಗ ಇಬ್ಬರ ಅಂತ್ಯಕ್ರಿಯೆಯೂ ಒಂದೇ ಜಾಗದಲ್ಲಿ ನಡೆಯುತ್ತಿದೆ. ಇದು ಕುಟುಂಬದವರಿಗೆ ನುಂಗಲಾರದಂಥ ನೋವಾಗಿದೆ. ಸಿದ್ಧಾರ್ಥ ಅವರು ಸತ್ತಾಗ ಇಡೀ ಮೂಡಿಗೆರೆಯಲ್ಲಿ ನೀರವ ಮೌನ ತುಂಬಿಕೊಂಡಿತ್ತು. ಈಗ ಮತ್ತೊಂದು ಸಾವು ಸಂಭವಿಸಿದ್ದು, ಮತ್ತೆ ಇಂದು ಮೂಡಿಗೆರೆಯಲ್ಲಿ ಅದೇ ಸೂತಕದ ಛಾಯೆ ತುಂಬಿಕೊಂಡಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications