Chaitra Kundapura: ಚೈತ್ರಾ ಕುಂದಾಪುರ "ಟಿಕೆಟ್ ಪಾಲಿಟಿಕ್ಸ್" ಸಂಭಾಷಣೆಯ ಮತ್ತೊಂದು ಆಡಿಯೋ ವೈರಲ್
ಚಿಕ್ಕಮಗಳೂರು, ಸೆಪ್ಟೆಂಬರ್, 17: ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೆ ಸಂಬಂಧಸಿದಂತೆ ಮತ್ತೊಂದು ಆಡಿಯೋ ವೈರಲ್ ಆಗಿದೆ. ಹಾಗಾದರೆ ಚೈತ್ರಾ ಕುಂದಾಪುರ ಅವರು ಯಾರ ಜೊತೆ ಸಂಭಾಷಣೆ ನಡೆಸಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಚೈತ್ರಾ ಹಾಗೂ ಪ್ರಸಾದ್ ನಡುವೆ ನಡೆದಿರುವ ಮತ್ತೊಂದು ಆಡಿಯೋ ಬಹಿರಂಗವಾಗಿದ್ದು, ಇದರಲ್ಲಿ ಅಣ್ಣ ಬೆಳಗ್ಗೆ ಫೋನ್ ಮಾಡಿದ್ದರು, ಗಗನ ಹತ್ತಿರವೂ ಅಣ್ಣ ಮಾತನಾಡಿದ್ದಾರೆ. ಈಗಾಗಲೇ ಟಿಕೆಟ್ ವಿಚಾರವಾಗಿ ಡೆಲ್ಲಿಯಿಂದ ಮಾತುಕತೆ ಪೂರ್ಣಗೊಂಡಿದೆ. ಡೆಲ್ಲಿಯಿಂದ ಫೋನ್ ಬಂದಿದೆ ಅಂದರೆ ಕೆಲಸ ಆಗಿದೆ ಎಂದರ್ಥ. ಅಲ್ಲಿಂದ ಮತ್ತೆ ಫೋನ್ ಬಂದರೆ ಗೋವಿಂದ ಪೂಜಾರಿಗೆ ಪಿಕ್ ಮಾಡಲು ಹೇಳು ಎಂದು ಸಂಭಾಷಣೆ ನಡೆಸಿದ್ದಾರೆ.

ಸ್ವಾಮೀಜಿ ಪೂಜೆಯಲ್ಲಿದ್ದಾರೆ ಮತ್ತೆ ಮಾತನಾಡುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ನಡೆಯುವ ಸರ್ವೆ ಕಾರ್ಯವನ್ನು ನಾವು ನೋಡಿಕೊಂಡರೆ ಸಾಕು. ದೇವರ ಮೇಲೆ ಭಾರ ಹಾಕಿ ನಮ್ಮ ಕೆಲಸವನ್ನು ನಾವು ಮಾಡಿದ್ದೇವೆ ಎಂದು ಪ್ರಸಾದ್ ಜೊತೆ ಚೈತ್ರಾ ಸಂಭಾಷಣೆ ನಡೆಸಿರುವ ಆಡಿಯೋ ಇದೀಗ ವೈರಲ್ ಆಗಿದೆ.
ಕಟಿಂಗ್ ಶಾಪ್ನ ಮಾಲೀಕ ರಾಮುಗೆ ಧಮ್ಕಿ
ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ 7 ಕೋಟಿ ವಂಚನೆ ಆರೋಪ ಹಿನ್ನೆಲೆ ಹಿಂದೂ ಕಾರ್ಯಕರ್ತೆ ಆಗಿದ್ದ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇನ್ನು ವಂಚನೆ ಪ್ರಕರಣದ ಮಾಸ್ಟರ್ ಮೈಂಡ್ ಗಗನ್ಗೆ ಸಾಥ್ ನೀಡಿದ್ದಾರೆ ಎನ್ನಲಾದ ಕಡೂರಿನ ಕಟಿಂಗ್ ಶಾಪ್ನ ರಮೇಶ್ ಈ ಬಗ್ಗೆ ವಿಡಿಯೋ ಮೂಲಕ ಹೇಳಿಕೆಯೊಂದನ್ನು ನೀಡಿದ್ದರು. ಈ ಬೆನ್ನಲ್ಲೇ ಆರೋಪಿ ಧನ್ರಾಜ್ ಸ್ನೇಹಿತ ಕಟಿಂಗ್ ಶಾಪ್ನ ಮಾಲೀಕ ರಾಮುಗೆ ಧಮ್ಕಿ ಹಾಕಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕಟ್ಟಿಂಗ್ ಶಾಪ್ ಮಾಲೀಕ ರಾಮುಗೆ ಧನರಾಜ್ ಸ್ನೇಹಿತ ಕಾಂಗ್ರೆಸ್ ಮುಖಂಡ ನೂತನ್ ಧಮ್ಕಿ ಹಾಕಿರುವ ಆಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. "ನಿನ್ಯಾಕೆ ಮಾಧ್ಯಮ ಮುಂದೆ ಮಾತಾನಾಡಿದೆ. ನನಗೆ ಗೊತ್ತಿಲ್ಲ ಅಂತಾ ಹೇಳಬೇಕಿತ್ತು. ಅವರೇ ಬರ್ತಾರಾ? ಅಂಗಡಿ ಹೇಗೆ ನಡೆಸುತ್ತೀಯಾ ನೋಡುತ್ತೇನೆ," ಎಂದು ಧಮ್ಕಿ ಹಾಕಿರುವ ಆಡಿಯೋ ವೈರಲ್ ಆಗಿದೆ.
ಮತ್ತೊಂದೆಡೆ ಚೈತ್ರಾ ಕುಂದಾಪುರ ವಂಚನೆ ಪ್ರಕರಣದ ಆರೋಪಿ ಧನರಾಜ್ ಬಂಧನವಾಗುತ್ತಿದ್ದಂತೆ, ಧನರಾಜ್ ಅವರು ಕಡೂರಿನ ಶಾಸಕ ಕೆ.ಎಸ್. ಆನಂದ್ ಜೊತೆಗಿರುವ ಫೋಟೋಗಳು ವೈರಲ್ ಆಗುತ್ತಿವೆ. ಧನರಾಜ್ ಶಾಸಕರಿಗೆ ದೂರದ ಸಂಬಂಧಿಯಾಗಿದ್ದಾರೆ ಎನ್ನಲಾಗಿದೆ. ಇನ್ನು ಧನರಾಜ್ , ಗಗನ್, ಚೈತ್ರಾ ಕುಂದಾಪುರ, ರಮೇಶ್ ಗೋವಿಂದ ಬಾಬುಗೆ ವಂಚನೆ ಮಾಡಿದವರಾಗಿದ್ದಾರೆ ಎನ್ನಲಾಗಿದೆ.
ಸ್ಫೋಟಕ ಮಾಹಿತಿ ಬಹಿರಂಗ
ವಂಚನೆಗೆ ಸಹಾಯ ಮಾಡುತ್ತಿದ್ದರೆನ್ನಲಾದ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಧನರಾಜ್ ಮತ್ತು ರಮೇಶ್ ಎನ್ನುವವರು ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.
ಉದ್ಯಮಿಗೆ ವಂಚಿಸಲು ನಕಲಿ ಬಿಜೆಪಿ, ಆರ್ಎಸ್ಎಸ್ ನಾಯಕರನ್ನು ಚೈತ್ರಾ ಕುಂದಾಪುರ ಮತ್ತು ತಂಡ ಸೃಷ್ಟಿಸುತ್ತಿದ್ದರು ಎನ್ನಲಾಗಿದ್ದು, ಇದೀಗ ಅದೇ ಟೀಂನ ಕಡೂರಿನ ಧನರಾಜ್ ಮತ್ತು ರಮೇಶ್ ಪ್ರಕರಣದ ಕುರಿತು ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ನಿಮಗೂ ಅನುಕೂಲ ಆಗುತ್ತದೆ ಎಂದಿದ್ದಕ್ಕೆ ನಾವು ಒಪ್ಪಿಕೊಂಡಿದ್ದೀವಿ ಎಂದು ವೀಡಿಯೋ ಮಾಡುವ ಮೂಲಕ ಚೈತ್ರಾ ಕುಂದಾಪುರ ವಿರುದ್ಧ ಆರೋಪ ಮಾಡಿದ್ದಾರೆ.
ಇಷ್ಟೊಂದು ದೊಡ್ಡ ಮಟ್ಟದ ವ್ಯವಹಾರ ಎಂದು ನಮಗೆ ಗೊತ್ತಿರಲಿಲ್ಲ. ನಾನು ಹೇಳಿದ ರೀತಿಯಲ್ಲಿ ನೀವು ನಟಿಸಿ ಎಂದು ಹೇಳಿದ್ದರು. ನಾವು ಹಾಗೇ ಮಾಡಿದ್ವಿ ಅಷ್ಟೇ. ದೊಡ್ಡ ವ್ಯವಹಾರದ ಬಗ್ಗೆ ಮಾಹಿತಿ ಇಲ್ಲ. ಎಲ್ಲಾ ಕ್ರಿಯೆಟ್ ಮಾಡಿದ್ದು ಗಗನ್. ಟಿಕೆಟ್ ನೀಡಿದರೆ ಅವರು ಗೆಲ್ಲುತ್ತಾರೆ, ಆಗ ನಿಮಗೆ ಸಹಾಯ ಆಗುತ್ತದೆ ಎಂದಿದ್ದರು ಎಂದು ಮಾಹಿತಿ ನೀಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಸಲೂನ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ ರಮೇಶ್ ಹಾಗೂ ಧನರಾಜ್ ಎಂಬವರನ್ನು ಆರ್ಎಸ್ಎಸ್ ಪ್ರಚಾರಕರು ಮತ್ತು ಬೆಂಗಳೂರಿನ ಕೆಆರ್ ಪುರಂ ರಸ್ತೆ ಬದಿ ಕಬಾಬ್ ಮಾರುತ್ತಿದ್ದ ನಾಯಕ್ ಎಂಬಾತನನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸದಸ್ಯ ಎಂದು ಉದ್ಯಮಿಗೆ ಚೈತ್ರಾ ಪರಿಚಯಿಸಿದ್ದರು ಎಂದು ತಿಳಿದುಬಂದಿದೆ.
ಬೈಂದೂರಿನ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗೋವಿಂದ ಬಾಬು ಪೂಜಾರಿ ಮುಂದೆ ಹೇಗೆ ನಟಿಸಬೇಕು ಎಂದು ಮೊದಲೇ ಸೂಚನೆ ನೀಡಿದ್ದರು. ಅಲ್ಲದೆ ಚೈತ್ರಾ, ನಕಲಿ ಬಿಜೆಪಿ-ಆರ್ಎಸ್ಎಸ್ ನಾಯಕರಿಗೆ ಕಡೂರಿನ ಮನೆಯೊಂದರಲ್ಲಿ ತರಬೇತಿ ನೀಡಿದ್ದರು ಎನ್ನುವ ಮಾಹಿತಿ ಬೆಳಕಿಗೆ ಬಂದಿದೆ. ಈ ಕೆಲಸಕ್ಕೆ ರಸ್ತೆ ಬದಿ ಕಬಾಬ್ ಮಾರುತ್ತಿದ್ದ ವ್ಯಕ್ತಿಗೆ ಚೈತ್ರಾ ಮತ್ತು ಗಗನ್ ಹಣ ನೀಡಿದ್ದರು. ಸಲೂನ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ ಗಗನ್ ಮತ್ತು ಧನರಾಜ್ ಎಂಬವರಿಗೂ ನಟನೆ ಮಾಡಲು ಹಣ ಕೊಟ್ಟಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications