Charmadi Ghat: ಚಾರ್ಮಾಡಿ ಘಾಟ್ 10ನೇ ತಿರುವಿನಲ್ಲಿ ಕೆಟ್ಟುನಿಂತ 16 ಚಕ್ರದ ಲಾರಿ-ಪೊಲೀಸರ ವಿರುದ್ಧ ಸ್ಥಳೀಯರ ಆಕ್ರೋಶ ಏಕೆ?
ಚಿಕ್ಕಮಗಳೂರು, ಮಾರ್ಚ್,18: 16 ಚಕ್ರದ ಲಾರಿ ಕೆಟ್ಟು ನಿಂತು ಟ್ರಾಫಿಕ್ ಜಾಮ್ ಸಂಭವಿಸಿ ವಾಹನ ಸವಾರರು ಪರದಾಡಿದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.
ಇತ್ತೀಚೆಗೆ ಚಾರ್ಮಾಡಿ ಘಾಟ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗುತ್ತಲೇ ಇದೆ. ಇದೀಗ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಈ ರಸ್ತೆಯಲ್ಲಿ ಕಿಲೋ ಮೀಟರ್ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ಇದರಿಂದ ವಾಹನ ಸವಾರರು ಪರದಾಡಿದ್ದಾರೆ. ಇನ್ನು ಕೆಟ್ಟು ನಿಂತ ಲಾರಿ ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿತ್ತು ಎಂದು ತಿಳಿದುಬಂದಿದೆ.

ಕಿರಿದಾದ ರಸ್ತೆ ಇರುವ ಹಿನ್ನೆಲೆ ನಿಯಮದ ಪ್ರಕಾರ 10 ಚಕ್ರದ ವಾಹನಕ್ಕಿಂತ ದೊಡ್ಡ ವಾಹನಗಳು ಚಾರ್ಮಾಡಿ ಘಾಟಿಯಲ್ಲಿ ಸಂಚರಿಸುವಂತಿಲ್ಲ. ಆದರೂ ಕೂಡ ಘಾಟಿಯ ತಿರುವಿನಲ್ಲಿ 16 ಚಕ್ರದ ಬೃಹತ್ ಲಾರಿಯೊಂದು ಕೆಟ್ಟುನಿಂತು ಟರ್ನ್ ಮಾಡಲಾಗದೇ ಅಲ್ಲಿಯೇ ನಿಂತ ಪರಿಣಾಮ ಇಷ್ಟೆಲ್ಲ ಅವಾಂತರಗಳು ಸಂಭವಿಸಿವೆ.
ಇದನ್ನೆಲ್ಲ ಗಮನಿಸಿದರೆ ಕೊಟ್ಟಿಗೆಹಾರ ಚೆಕ್ ಪೋಸ್ಟ್ನಲ್ಲಿ ಪೊಲೀಸರು ಇದ್ರೂ ಹೇಗೆ ಹೋದ್ರು ಎಂಬ ಅನುಮಾನಗಳು ಕಾಡತೊಡಗಿದೆ. ಅಲ್ಲದೆ ಪೊಲೀಸರು ವಾಹನ ಬಿಟ್ಟಿರುವುದಕ್ಕೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿ: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆ (KSRTC) ಬಸ್ ಪಲ್ಟಿಯಾದ ಘಟನೆ ಹನೂರು ತಾಲೂಕಿನ ಒಡೆಯರಪಾಳ್ಯ ಸಮೀಪ ಇತ್ತೀಚೆಗಷ್ಟೇ ನಡೆದಿತ್ತು.
ಈ ವೇಳೆ ಬಸ್ನಲ್ಲಿ 30 ಮಂದಿ ಪ್ರಯಾಣಿಕರಲ್ಲಿ ಶಿಕ್ಷಕರೇ ಹೆಚ್ಚು ಮಂದಿ ಇದ್ದರು. ಅದೃಷ್ಟವಶಾತ್ 6-7 ಮಂದಿ ಸಣ್ಣಪುಟ್ಟ ಗಾಯಗಳಾಗಿರುವುದು ಬಿಟ್ಟರೇ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿತ್ತು.
ರಾಜ್ಯದಲ್ಲಿ ಚಾಮರಾಜನಗರ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಭಾಗದಲ್ಲೇ ಅತೀ ಹೆಚ್ಚಾಗಿ ಸಾರಿಗೆ ಬಸ್ಗಳನ್ನು ಅಪಘಾತಕ್ಕೀಡಾಗಿವೆ. ಹಾಗೆಯೇ ಇನ್ನೂ ಇದೀಗ ಹನೂರು ತಾಲೂಕಿನ ಒಡೆಯರಪಾಳ್ಯ ಸಮೀಪ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿದ್ದು, ಇದಕ್ಕೆ ಕಾರಣ ಬಸ್ ಕಂಡಕ್ಟರ್ ಬಸ್ ಚಲಾಯಿಸಿದ್ದು ಎಂದು ತಿಳಿದುಬಂದಿದೆ. ಇನ್ನು ಇಲಾಖೆ ಈ ಘಟನೆ ಬಗ್ಗೆ ಯಾವ ರೀತಿ ಕ್ರಮ ಜರುಗಿಸಲಿದೆ ಎಂದು ಕಾದುನೋಡಬೇಕಿದೆ.
ಹನೂರು ತಾಲೂಕಿನ ಲೋಕ್ಕನಹಳ್ಳಿ ಮಾರ್ಗವಾಗಿ ಒಡೆಯರ್ ಪಾಳ್ಯ ಕಡೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಆನೆ ಕಾರಿಡಾರ್ ರಸ್ತೆಗೆ ಇಳಿದಿದೆ. ಕೂಡಲೇ ಸ್ಥಳೀಯರು ದೌಡಾಯಿಸಿ ಬಸ್ಸಿನಲ್ಲಿದ್ದವರನ್ನು ಹೊರಕ್ಕೆ ಕರೆತಂದಿದ್ದು, ಕಿಟಕಿ ಬಳಿ ಕುಳಿತಿದ್ದವರಿಗೆ 6-7 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಈ ಘಟನೆ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇನ್ನು, ಕಂಡಕ್ಟರ್ ಬಸ್ ಅನ್ನು ಓಡಿಸುತ್ತಿದ್ದರಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications