ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾರ್ಮಾಡಿ ಘಾಟ್ ವಾಹನ ಸಂಚಾರ; ಆದೇಶ ವಾಪಸ್

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಮಾರ್ಚ್ 18; ಚಾರ್ಮಾಡಿ ಘಾಟ್ ಮಾರ್ಗದಲ್ಲಿ ದಿನದ 24 ಗಂಟೆ ಲಘು ಹಾಗೂ ಕೆಲವು ವಾಹನಗಳ ಸಂಚಾರಕ್ಕೆ ಬುಧವಾರ ಅನುಮತಿ ನೀಡಲಾಗಿತ್ತು. ಚಿಕ್ಕಮಗಳೂರು ಜಿಲ್ಲಾಡಳಿತ ಈ ಆದೇಶವನ್ನು ವಾಪಸ್ ಪಡೆದಿದ್ದು, ಪುನಃ ಸಂಚಾರ ಬಂದ್ ಆಗಿದೆ.

ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಮಾರ್ಗದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ಈ ಸಂದರ್ಭದಲ್ಲಿ ವಾಹನಗಳು ಸಂಚರಿಸಿದರೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಡ್ಡಿಯಾಗಲಿದೆ.

ಚಾರ್ಮಾಡಿ ಘಾಟ್‌ನಲ್ಲಿ ಸರ್ಕಾರಿ ಬಸ್ ಸಂಚಾರಕ್ಕೆ ಒಪ್ಪಿಗೆ ಚಾರ್ಮಾಡಿ ಘಾಟ್‌ನಲ್ಲಿ ಸರ್ಕಾರಿ ಬಸ್ ಸಂಚಾರಕ್ಕೆ ಒಪ್ಪಿಗೆ

ವಾಹನಗಳ ದಟ್ಟಣೆ ಉಂಟಾಗಿ ಅಪಘಾತಗಳು ಸಂಭವಿಸುವುದರಿಂದ ಪ್ರಯಾಣಿಕರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಈ ಹಿಂದೆ ಹೊರಡಿಸಿದ್ದ ಆದೇಶವನ್ನು‌ ವಾಪಸ್ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಎನ್. ರಮೇಶ್ ಆದೇಶದಲ್ಲಿ ತಿಳಿಸಿದ್ದಾರೆ.

ಚಾರ್ಮಾಡಿ ಘಾಟ್ ವಾಹನ ಸವಾರರ ಗಮನಕ್ಕೆ ಚಾರ್ಮಾಡಿ ಘಾಟ್ ವಾಹನ ಸವಾರರ ಗಮನಕ್ಕೆ

Charmadi Ghat Road Again Closed For Bus

ಬುಧವಾರ ವಾಹನ ಸಂಚಾರಕ್ಕೆ ಅವಕಾಶ ನೀಡಿದ್ದ ಆದೇಶ ಗುರುವಾರ ರದ್ದುಗೊಳಿಸಿರುವುದರಿಂದ ಚಾರ್ಮಾಡಿ ಘಾಟ್ ಮಾರ್ಗವಾಗಿ ಹೊರಟಿದ್ದ ಪ್ರಯಾಣಿಕರು ತೊಂದರೆ ಅನುಭವಿಸುವಂತಾಯಿತು.

ಚಾರ್ಮಾಡಿ ಘಾಟ್ ರಸ್ತೆ ಉಳಿಸಿ, ಅಭಿವೃದ್ಧಿಪಡಿಸಿ: ಯುವಕರ ಅಭಿಯಾನಚಾರ್ಮಾಡಿ ಘಾಟ್ ರಸ್ತೆ ಉಳಿಸಿ, ಅಭಿವೃದ್ಧಿಪಡಿಸಿ: ಯುವಕರ ಅಭಿಯಾನ

ವಾಹನ ಸಂಚಾರಕ್ಕೆ ಅವಕಾಶವಿದೆ ಎಂದು ಬಂದಿದ್ದೆ. ಲಾರಿ, ಸೇರಿದಂತೆ ಆರು ಚಕ್ರದ ವಾಹನಗಳು ಆದೇಶ ಹಿಂಪಡೆದ ಕಾರಣದಿಂದ ಚಾರ್ಮಾಡಿ ಘಾಟ್ ಮಾರ್ಗದಲ್ಲಿ ಸಂಚರಿಸಲು ಸಾಧ್ಯವಾಗದೆ ತೊಂದರೆ ಅನುಭವಿಸುವಂತಾಯಿತು ಎಂದು ಪ್ರಯಾಣಿಕರು ಹೇಳಿದ್ದಾರೆ.

Recommended Video

ರಕ್ತ ಸಂಗ್ರಹಣೆ ಮತ್ತು ಸಾಗಾಟ ವಾಹನಕ್ಕೆ ಸಿಎಂ ಯಡಿಯೂರಪ್ಪ ಚಾಲನೆ | Oneindia Kannada

ಬುಧವಾರ ಹೊರಡಿಸಿದ್ದ ಆದೇಶದಂತೆ ಸರ್ಕಾರಿ ಬಸ್, 6 ಚಕ್ರದ ಲಾರಿ ಹಾಗೂ ಲಘು ವಾಹನಗಳ ಸಂಚಾರಕ್ಕೆ ಅವಕಾಶವನ್ನು ನೀಡಲಾಗಿತ್ತು. 6 ಚಕ್ರ ಮೇಲ್ಪಟ್ಟ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.

English summary
Chikkamagaluru district administration withdrawal the order of allowing KSRTC bus to travel in Charmadi ghat road.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X