Get Updates
Get notified of breaking news, exclusive insights, and must-see stories!

ನಟ ಸುದೀಪ್ ಗೆ ಚಿಕ್ಕಮಗಳೂರು ಜೆಎಂಎಫ್​​ಸಿ ಕೋರ್ಟ್​ನಿಂದ ಅರೆಸ್ಟ್ ವಾರೆಂಟ್ ಜಾರಿ

Recommended Video

      ಸುದೀಪ್ ಗೆ ಕಂಟಕ | ನತಮ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ | Oneindia Kannada

      ಚಿಕ್ಕಮಗಳೂರು, ಮಾರ್ಚ್ 27:ನಟ ಸುದೀಪ್ ಗೆ ಚಿಕ್ಕಮಗಳೂರು ಜೆಎಂಎಫ್ ಸಿ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ. ಸುದೀಪ್ ನಿನ್ನೆ ಮಂಗಳವಾರ (ಮಾ.26) ಕೋರ್ಟ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ಅರೆಸ್ಟ್ ವಾರೆಂಟ್ ಜಾರಿಯಾಗಿದೆ.

      ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

      ದೀಪಕ್ ಮಯೂರ್ ಎಂಬುವವರು ಸುದೀಪ್ ವಿರುದ್ಧ ದೂರು ನೀಡಿದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

      ಸುದೀಪ್ ಖಾಸಗಿ ವಾಹಿನಿಯಲ್ಲಿ 'ವಾರಸ್ದಾರ' ಧಾರಾವಾಹಿ ನಿರ್ಮಾಣ ಮಾಡಿದ್ದರು. ಈ ಧಾರಾವಾಹಿಯ ಶೂಟಿಂಗ್ ಗಾಗಿ ದೀಪಕ್ ಅವರ ಮನೆ ಹಾಗೂ ತೋಟವನ್ನು ಬಾಡಿಗೆಗೆ ಪಡೆದುಕೊಳ್ಳಲಾಗಿತ್ತು. ಆದರೆ ಸುದೀಪ್ ಅವರು ಬಾಡಿಗೆ ಹಣ ನೀಡದೆ, ತೋಟ ನಾಶ ಮಾಡಿದ್ದಾರೆ ಎಂದು ಸುದೀಪ್ ವಿರುದ್ಧ ದೀಪಕ್ ದೂರು ದಾಖಲಿಸಿದ್ದರು.

      Chikkamagalur JMFC court has issued a arrest warrant to Actor Sudeep

      ಪ್ರಕರಣದ ವಿವರ
      ಖಾಸಗಿ ವಾಹಿನಿಯೊಂದರಲ್ಲಿ ಸುದೀಪ್ ಅವರ ಕಿಚ್ಚ ಕ್ರಿಯೇಷನ್ ನಿರ್ಮಾಣದ ಅಡಿಯಲ್ಲಿ 'ವಾರಸ್ದಾರ' ಧಾರಾವಾಹಿ ಪ್ರಸಾರವಾಗುತ್ತಿತ್ತು. ಈಗ ಈ ಧಾರಾವಾಹಿ ಪ್ರಸಾರ ನಿಂತಿದೆ. ಇದರ ಚಿತ್ರೀಕರಣಕ್ಕಾಗಿ ಚಿಕ್ಕಮಗಳೂರಿನ ದೀಪಕ್ ಮಯೂರ್ ಪಟೇಲ್ ಅವರ ಮನೆ ಮತ್ತು ಕಾಫಿ ತೋಟವನ್ನು ಬಾಡಿಗೆಗೆ ಪಡೆಯಲಾಗಿತ್ತು.

      ಧಾರಾವಾಹಿ ಸಂದರ್ಭದಲ್ಲಿ ಕಾಫಿ ತೋಟಕ್ಕೆ ಸಾಕಷ್ಟು ಹಾನಿಯಾಗಿದ್ದು, ಹಾನಿಯಾದ ಹಿನ್ನೆಲೆಯಲ್ಲಿ ಒಟ್ಟು 1.50 ಕೋಟಿ ರೂ. ನಷ್ಟವಾಗಿದೆ. ಈ ಹಣವನ್ನು ನೀಡಬೇಕೆಂದು ಧಾರಾವಾಹಿ ನಿರ್ಮಾಣ ತಂಡಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ಈ ಬೇಡಿಕೆಯನ್ನು ಸುದೀಪ್ ಕ್ರಿಯೇಶನ್ಸ್ ತಿರಸ್ಕರಿಸಿತ್ತು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+