ಚಿಕ್ಕಮಗಳೂರು: ರಾಜ್ಯದಲ್ಲಿ 1 ಲಕ್ಷ ಜನರಿಗೆ ಜಾಗೃತಿ ಕಾರ್ಯಕ್ರಮ, ಯೋಜನೆಗಳ ವಿವರ ಇಲ್ಲಿದೆ
ಚಿಕ್ಕಮಗಳೂರು, ಜನವರಿ, 10: ಇಡೀ ರಾಜ್ಯದಲ್ಲಿ ಶುದ್ಧ ಜಲ ಅಭಿಯಾನ ಹಮ್ಮಿಕೊಂಡು 1 ಲಕ್ಷ ಜನರಿಗೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ್ ಸುವರ್ಣ ಚಿಕ್ಕಮಗಳೂರಿನಲ್ಲಿ ಹೇಳಿದರು.
ಮಂಗಳವಾರ ನಗರದ ಹೌಸಿಂಗ್ ಬೋರ್ಡ್ ಬಡಾವಣೆಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶುದ್ಧಜಲ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಶಾಲಾ ಮಕ್ಕಳು ಸಾಧ್ಯವಾದಷ್ಟು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಬಳಸಿಕೊಳ್ಳಬೇಕು. ಅಶುದ್ಧವಾದ ನೀರು ಬಳಿಸಿದರೆ ಆರೋಗ್ಯ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದರು.
ಒಂದು ಲೀಟರ್ ಹಾಲಿಗೆ 30 ರಿಂದ 50 ರೂಪಾಯಿ ಇದ್ದರೆ, ಒಂದು ಲೀಟರ್ ನೀರಿಗೆ 20 ರೂಪಾಯಿ ಕೊಡಬೇಕಿದೆ. ಆದರೆ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ 15 ಪೈಸೆಗೆ 1 ಲೀಟರ್ ನೀರು ಲಭಿಸುತ್ತದೆ. ಇದರ ಪ್ರಯೋಜನ ಪಡೆದರೆ ಆರೋಗ್ಯಕರ ಬದುಕು ಸಾಗಿಸಲು ಸಾಧ್ಯವಿದೆ ಎಂದರು.

ಪ್ಲಾಸ್ಟಿಕ್ ಬಳಕೆ ಕಡಿಮೆ ಆಗಬೇಕಿದೆ
ಅತಿಯಾಗಿ ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ಬಿಡಬೇಕಿದೆ. ಪ್ಲಾಸ್ಟಿಕ್ ಅನ್ನು ಮಣ್ಣಿನಲ್ಲಿ ಹೂತರೂ ಮಣ್ಣು ಹಾಳಾಗುತ್ತದೆ. ರಾಶಿ ಹಾಕಿ ಬೆಂಕಿ ಹಾಕಿದರೆ ಗಾಳಿ ಹಾಗೂ ವಾತಾವರಣ ಹಾಳಾಗುತ್ತದೆ. ಆದ್ದರಿಂದ ಪ್ಲಾಸ್ಟಿಕ್ ಬಳಕೆಯನ್ನೇ ಕಡಿಮೆ ಮಾಡುವುದೇ ಉತ್ತಮ ಪರಿಹಾರ ಆಗಿದೆ. ಹಾಗೆಯೇ ಬಟ್ಟೆ ಬ್ಯಾಗ್ಗಳನ್ನು ಹೆಚ್ಚಾಗಿ ಬಳಸುವಂತಾಗಬೇಕು ಎಂದರು.
ನೀರನ್ನು ಮಿತವಾಗಿ ಬಳಸಲು ಮನವಿ
ನಗರಸಭಾ ಸದಸ್ಯೆ ಕವಿತಾ ಶೇಖರ್ ಮಾತನಾಡಿ, ನೀರು ಎಲ್ಲದಕ್ಕೂ ಅತ್ಯವಶ್ಯಕವಾಗಿದೆ. ನೀರನ್ನು ಮಿತವಾಗಿ ಬಳಸಬೇಕು. ಜೊತೆಗೆ ಶುದ್ಧ ನೀರನ್ನೇ ಬಳಸುವ ಮೂಲಕ ಆರೋಗ್ಯವನ್ನೂ ಕಾಪಾಡಿಕೊಳ್ಳಬೇಕು. ಈ ವಿಚಾರದಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಂಡಿರುವ ಧರ್ಮಸ್ಥಳ ಶ್ರೀ ವೀರೇಂದ್ರ ಹೆಗ್ಡೆ ಅವರ ಕಾರ್ಯ ಶ್ಲಾಘನೀಯವಾಗಿದೆ ಎಂದು ತಿಳಿಸಿದರು. ಇನ್ನು ಚಿಕ್ಕಮಗಳೂರು ನಗರದಲ್ಲಿ ನಮ್ಮ ವಾರ್ಡ್ನಲ್ಲೇ ಮೊದಲ ಶುದ್ಧ ಗಂಗಾ ಘಟಕ ಸ್ಥಾಪಿಸಿದ ಹೆಮ್ಮೆ ನಮಗಿದೆ. ಲೋಕಸಭಾ ಸದಸ್ಯರಾದ ವೆಂಕಯ್ಯ ನಾಯ್ಡು ಅವರು ಅದಕ್ಕೆ ಅನುದಾನ ಕೊಟ್ಟಿದ್ದರು. ಘಟಕ ಸ್ಥಾಪಿಸಿದ ನಂತರ ನಿರಂತರವಾಗಿ ಅದರ ನಿರ್ವಹಣೆ ಬಗ್ಗೆ ಗಮನಹರಿಸುತ್ತಾ ಬಂದಿದ್ದೇವೆ. ಸಾರ್ವಜನಿಕರಿಗೆ ಹಲವು ವರ್ಷಗಳಿಂದ ಶುದ್ಧ ಕುಡಿಯುವ ನೀರು ಲಭಿಸುತ್ತಿದೆ ಎಂದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಭಾರತಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಕಳಸಪ್ಪ ಪೂಜಾರಿ, ಶಿವಾನಂದಾಚಾರಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಶ್ರೀನಿವಾಸ್, ಡಾ.ಅನಿಲ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications