ಚಿಕ್ಕಮಗಳೂರು: ರಿಯಲ್ ಎಸ್ಟೇಟ್ ಮಾತುಕತೆ ವೇಳೆ ಗುಂಡಿನ ದಾಳಿ

ಚಿಕ್ಕಮಗಳೂರು, ಮೇ 28: ರಿಯಲ್ ಎಸ್ಟೇಟ್ ವ್ಯವಹಾರದ ಮಾತುಕತೆ ವೇಳೆ ಮಾತಿನ ಚಕಮಕಿ ನಡೆದು ಇಬ್ಬರ ಮೇಲೆ ಗುಂಡು ಹಾರಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಬಾಣೂರು ಗ್ರಾಮದಲ್ಲಿ ನಡೆದಿದೆ.

Recommended Video

      ಮನೆಯಲ್ಲೇ ಕ್ವಾರಂಟೈನ್ ಗೆ ಅವಕಾಶ ಕೊಡಿ ಎಂದು ಬೇಡಿಕೊಳ್ತಿದ್ದಾರೆ ಗರ್ಭಿಣಿಯರು | Oneindia Kannada

      ಚಿಕ್ಕಮಗಳೂರು ನಗರದ ಬಿಜೆಪಿ ಮುಖಂಡರ ಸಂಬಂಧಿ ಕಲ್ಯಾಣ್ ಕುಮಾರ್ ಹಾಗೂ ಖಾಸಗಿ ಶಾಲೆಯ ಉಪನ್ಯಾಸಕ ಸುಮಂತ್ ಎಂಬುವವರಿಗೆ ಗುಂಡೇಟು ಬಿದ್ದಿದೆ. ಬೆಂಗಳೂರಿನಿಂದ ಬಂದಿದ್ದ ರಿಯಲ್ ಎಸ್ಟೇಟ್ ಉದ್ಯಮಿಗಳ ಜೊತೆ ವ್ಯವಹಾರದ ವೇಳೆ ಮಾತಿನ ಚಕಮಕಿ ನಡೆದು ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

      ಗುಂಡೇಟು ಬಿದ್ದ ಇಬ್ಬರಿಗೂ ಚಿಕ್ಕಮಗಳೂರಿನ ಕೆ.ಆರ್.ಎಸ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ನಂತರ ಬೆಂಗಳೂರಿಗೆ ರವಾನಿಸಲಾಗಿದೆ. ಇಬ್ಬರ ಮೇಲೆ ಫೈರಿಂಗ್ ಮಾಡಿದ ಬೆಂಗಳೂರು ಮೂಲದ ರಿಯಲ್ ಎಸ್ಟೇಟ್ ಉದ್ಯಮಿಗಳು ನಾಪತ್ತೆಯಾಗಿದ್ದಾರೆ.

      Chikkamagaluru: Bullet Shot During Real Estate Discussion

      ಗುಂಡೇಟು ತಿಂದ ಕಲ್ಯಾಣ್ ಕುಮಾರ್ ಹಾಗೂ ಸುಮಂತ್ ಅವರ ದೇಹದಲ್ಲಿ ಗುಂಡುಗಳು ಹಾಗೇ ಇದ್ದು, ಅವುಗಳನ್ನು ತೆಗೆಯಲು ಇಬ್ಬರನ್ನೂ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

      ಸಖರಾಯಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಸಖರಾಯಪಟ್ಟಣ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ರಿಯಲ್ ಎಸ್ಟೇಟ್ ವ್ಯವಹಾರದ ವೇಳೆ ಈ ಘಟನೆ ನಡೆದಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಘಟನೆ ಮೂಲ ಕಾರಣ ಏನೆಂದು ಇನ್ನಷ್ಟೇ ಪೊಲೀಸರ ತನಿಖೆಯಿಂದ ಸ್ಪಷ್ಟವಾಗಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+