Drinks Party in School: ಸರ್ಕಾರಿ ಶಾಲೆ ಆವರಣದಲ್ಲೇ ಎಣ್ಣೆ ಪಾರ್ಟಿ: ವಿದ್ಯಾರ್ಥಿಗಳು, ಶಿಕ್ಷಕರಿಗೆ ಸ್ವಚ್ಚಗೊಳಿಸುವುದೇ ಕೆಲಸ!
ಚಿಕ್ಕಮಗಳೂರು ಆಗಸ್ಟ್ 6: ಶಾಲೆ ಎಂಬ ದೇಗುಲದಲ್ಲಿ ನಿತ್ಯ ಸರಸ್ವತಿ ಹಾಗೂ ಗಣೇಶನನ್ನು ನೆನೆದು ಶಿಕ್ಷಕರು ವಿದ್ಯಾರ್ಥಿಗಳಿಗೆ ಜ್ಞಾನವನ್ನು ನೀಡುತ್ತಾರೆ. ಆದರೆ ಶಾಲೆಯ ಆವರಣವೊಂದರಲ್ಲಿ ಪುಂಡರು ಎಣ್ಣೆ ಪಾರ್ಟಿ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಇದರಿಂದಾಗಿ ಬೆಳಗ್ಗೆ ಶಾಲೆಗೆ ಬರುವ ಮಕ್ಕಳು ಆವರಣದಲ್ಲಿ ಬಿದ್ದ ಎಣ್ಣೆ ಬಾಟಲಿಗಳ ದರ್ಶನ ಪಡೆದು ಕೊಠಡಿಗಳಿಗೆ ಪ್ರವೇಶ ಮಾಡುವಂತಾಗಿದೆ. ಹೀಗಿದ್ದರೂ ಇದನ್ನು ಪ್ರಶ್ನೆ ಮಾಡುವವರು ಇಲ್ಲದಂತಾಗಿದೆ.
ಹೌದು... ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಗ್ರಾಮದಲ್ಲಿ ಕಿಡಿಗೇಡಿಗಳು ಶಾಲಾ ಆವರಣವನ್ನೇ ಬಾರ್ ಮಾಡಿಕೊಂಡಿರುವುದು ಕಂಡು ಬಂದಿದೆ. ಗ್ರಾಮದ ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿವೆ. ಈ ಶಾಲೆಯ ಆವರಣದಲ್ಲಿ ಕೆಲ ಕಿಡಿಗೇಡಿಗಳು ರಾತ್ರಿಯಿಡೀ ಎಣ್ಣೆ ಪಾರ್ಟಿ ಮಾಡಿ ಬೆಳಗಿನ ಜಾವ ಮನೆಗೆ ಹೋಗುತ್ತಾರೆ. ಆದರೆ ಬೆಳಗ್ಗೆ ಶಾಲೆಗೆ ಬರುವ ಮಕ್ಕಳು ಬಾಟಲಿಗಳು, ತಿಂದು ಉಳಿದ ಮಾಂಸಾಹಾರವನ್ನು ಹಾಗೂ ಇತರ ತ್ಯಾಜ್ಯವನ್ನು ನೋಡಿಕೊಂಡು ಶಾಲಾ ಕೊಠಡಿಗಳಿಗೆ ತೆರಳಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಇದರಿಂದಾಗಿ ಶಾಲಾ ಆವರಣದಲ್ಲಿ ಮಕ್ಕಳು ಆಟವಾಡುವಂತಿಲ್ಲ. ಪ್ರಾರ್ಥನೆ ಮಾಡುವಂತಿಲ್ಲ, ಯೋಗ ಮಾಡುವಂತಿಲ್ಲ. ಎಲ್ಲಂದರಲ್ಲಿ ಎಣ್ಣೆ ಬಾಟಲಿಗಳು, ಒಡೆದ ಗಾಜುಗಳಿಂದಾಗಿ ಮಕ್ಕಳು ಶಾಲಾ ಆವರಣದಲ್ಲಿ ಆಟವಾಡುವುದನ್ನೇ ಬಿಟ್ಟು ಬಿಟ್ಟಿದ್ದಾರೆ ಎಂದು ಶಿಕ್ಷಕರು ಆರೋಪಿಸಿದ್ದಾರೆ.
ಸ್ಥಳೀಯ ಕಿಡಿಗೇಡಿಗಳು ಶಾಲೆಯ ಆವರಣದಲ್ಲಿ ನಿತ್ಯ ಎಣ್ಣೆ ಪಾರ್ಟಿ ಮಾಡಲು ಅಡ್ಡ ಮಾಡಿಕೊಂಡಿದ್ದಾರೆ. ಇವರು ಮಾಡಿದ ಗಲೀಜನ್ನು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸ್ವಚ್ಚಗೊಳಿಸುವುದೇ ನಿತ್ಯದ ಕೆಲಸವಾಗಿ ಹೋಗಿದೆ. ಕಿಡಿಗೇಡಿಗಳ ಈ ಅಸಭ್ಯ ವರ್ತನೆಯಿಂದಾಗಿ ವಿದ್ಯಾರ್ಥಿಗಳು, ಶಿಕ್ಷಕರು ಬೇಸರ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಶಾಲಾ ಆವರಣದಲ್ಲಿ ತಡರಾತ್ರಿಯವರೆಗೂ ಕುಡಿದು ಕೂಗಾಡಿ ಜಗಳವಾಡಿ ಹೋಗುವುದರಿಂದ ಸ್ಥಳೀಯರು ಬೇಸತ್ತಿದ್ದಾರೆ. ಇದರಿಂದ ಶಾಲೆಯ ಸುತ್ತಲು ವಾಸಿಸುವ ಜನರಿಗೆ ತೊಂದರೆಯಾಗಿದೆ. ಅವರಿಗೆ ಬುದ್ಧಿ ಹೇಳಲು ಹೋದವರಿಗೆ ಜೀವ ಬೆದರಿಕೆ ಹಾಕುತ್ತಾರೆ. ಹೀಗಾಗಿ ಅವರಿಗೆ ಬುದ್ಧಿ ಹೇಳುವುದನ್ನೂ ಬಿಟ್ಟು ಬಿಟ್ಟಿರುವುದಾಗಿ ಗ್ರಾಮಸ್ಥರು ಹೇಳುತ್ತಾರೆ. ಇದರಿಂದ ಪೊಲೀಸರು ಕೃತ್ಯ ಎಸಗುವ ಯುವಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕಿಡಿಗೇಡಿಗಳಿಗೆ ಹೆದರಿ ಜನ ಕೂಡ ದೂರು ನೀಡಲು ಮುಂದೆ ಬರುತ್ತಿಲ್ಲ. ಅವರ ಪುಂಡಾಟಿಕೆಯನ್ನು ತಡೆಯಲು ಕೂಡ ಮುಂದಾಗುತ್ತಿಲ್ಲ. ಕಾಲೇಜು ವಯಸ್ಸಿನ ಹುಡುಗರು ಕುಡಿದು ಹಾಲಾಗುತ್ತಿದ್ದಾರೆ ಎನ್ನುವ ಆರೋಪವಿದೆ. ಹೀಗಾಗಿ ಪೊಲೀಸರು ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾತಯಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications