ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ:ಸಿಡಿಲು ಬಡಿದು ದಂಪತಿ ಬಲಿ

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಏಪ್ರಿಲ್ 29:ಕಾಫಿನಾಡಲ್ಲಿ ಅರ್ಧ ಗಂಟೆಗಳ ಕಾಲ ಬಿಟ್ಟು-ಬಿಟ್ಟು ಸುರಿದ ಭಾರೀ ಮಳೆಗೆ ಜನಜೀವನ ಕಂಗಾಲಾದರೆ, ಇತ್ತ ಸಿಡಿಲು ಬಡಿದು ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ತೇಗೂರು ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಮಂಜುನಾಥ್ ಆಚಾರ್ (50) ಹಾಗೂ ಭಾರತಿ (43) ಎಂದು ಗುರುತಿಸಲಾಗಿದೆ. ಮೃತ ದಂಪತಿಗಳಿಬ್ಬರು ಬೆಳಗ್ಗೆಯಿಂದ ಸಂಜೆವರೆಗೆ ತೇಗೂರು ಬಳಿಯ ತಮ್ಮ ಜಮೀನಿನಲ್ಲಿ ಕೆಲಸ ಮಾಡಿ, ನಂತರ ಮಳೆ ಬರುತ್ತಿದ್ದರಿಂದ ಮೇಯಲು ಬಿಟ್ಟಿದ್ದ ಹಸುಗಳನ್ನ ಹೊಡೆದುಕೊಂಡು ಮನೆಗೆ ಬರುವಾಗ ತೇಗೂರು ಕೆರೆ ಏರಿ ಮೇಲೆ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪಥ ಬದಲಾಯಿಸಿದ ಫ್ಯಾನಿ, ತಮಿಳುನಾಡಿನಲ್ಲಿ ಕಡಿಮೆ, ಒಡಿಶಾದಲ್ಲಿ ಭಾರಿ ಮಳೆ ಸಾದ್ಯತೆಪಥ ಬದಲಾಯಿಸಿದ ಫ್ಯಾನಿ, ತಮಿಳುನಾಡಿನಲ್ಲಿ ಕಡಿಮೆ, ಒಡಿಶಾದಲ್ಲಿ ಭಾರಿ ಮಳೆ ಸಾದ್ಯತೆ

ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ ಚಿಕ್ಕಮಗಳೂರಿಗರು ಹೈರಾಣಾಗಿದ್ದಾರೆ. 35-38 ಡಿಗ್ರಿ ಬಿಸಿಲಿನ ತಾಪಕ್ಕೆ ಬಸವಳಿದಿದ್ದ ಚಿಕ್ಕಮಗಳೂರು ಜನರು, ಭಾರೀ ಗುಡುಗು-ಸಿಡಿಲು ಸಮೇತ ಮಳೆ ಕಂಡು ಆತಂಕಕ್ಕೊಳಗಾದರು.

Chikkamagaluru has heavy rainfall with thunderstorms

ತೋಟಗಾರಿಕೆ ಹಾಗೂ ಕೃಷಿ ಬೆಳೆಗೆ ಈಗ ಮಳೆಯ ಅಗತ್ಯವಿತ್ತು.ಹಾಗಾಗಿ, ಮಳೆ ಕಂಡ ಜನ ಹಾಗೂ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.ಅಷ್ಟೇ ಅಲ್ಲ, ಈ ಮಳೆ ಹೀಗೆ ಬರಲೆಂದು ವರುಣದೇವನಲ್ಲಿ ಪ್ರಾರ್ಥಿಸಿಕೊಂಡಿದ್ದಾರೆ.

English summary
Chikkamagaluru has heavy rainfall with thunderstorms.Two people were died by thunder strike.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X