KSRTC: ಕೆಎಸ್ಆರ್ಟಿಸಿ ಡಿಸಿಗೆ ಚಾಕುವಿನಿಂದ ಇರಿಯಲು ಯತ್ನ!
ಚಿಕ್ಕಮಗಳೂರು ಸೆಪ್ಟೆಂಬರ್ 13: ಕೆಎಸ್ಆರ್ಟಿಸಿ ಡಿಸಿಗೆ ಚಾಕುವಿನಿಂದ ಇರಿಯಲು ಯತ್ನಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಸಿಬ್ಬಂದಿಯಿಂದಲೇ ಚಾಕುವಿನಿಂದ ದಾಳಿ ನಡೆದಿದ್ದು ಸ್ವಲ್ಪದರಲ್ಲೇ ಕೆಎಸ್ಆರ್ಟಿಸಿ ಡಿಸಿ ಪಾರಾಗಿದ್ದಾರೆ. ಅಷ್ಟಕ್ಕೂ ಹಲ್ಲೆಗೆ ಕಾರಣ ಏನು? ಹಲ್ಲೆಯಾಗಿದ್ದು ಎಲ್ಲಿ ಅನ್ನೋದಾದರೆ...

ಚಿಕ್ಕಮಗಳೂರು ಸರ್ಕಾರಿ ಬಸ್ ನಿಲ್ದಾಣದ ಒಳಗೆ ಈ ಘಟನೆ ನಡೆದಿದೆ. ಜ್ಯೂನಿಯರ್ ಅಸಿಸ್ಟೆಂಟ್ ರಿತೇಶ್ ಎಂಬುವವರ ಮೇಲೆ ಹಲ್ಲೆ ಆರೋಪ ಕೇಳಿ ಬಂದಿದೆ. ಡಿಸಿ ಜಗದೀಶ್ ಕುಮಾರ್ ಈ ಹಿಂದೆ ರಿತೇಶ್ ಹಾಜರಾತಿ ಸರಿಯಿಲ್ಲ ಎಂದು ಕುಟುಂಬವನ್ನ ಕರೆಸಿ ಕೌನ್ಸಿಲಿಂಗ್ ಮಾಡಿದ್ದರು. ಕುಟುಂಬದವರ ಮನವಿ ಮೇರೆಗೆ ರಿತೇಶ್ನನ್ನು ಚಿಕ್ಕಮಗಳೂರಿನಿಂದ ಬೇಲೂರಿಗೆ ವರ್ಗಾವಣೆ ಮಾಡಲಾಗಿತ್ತು. ಇದು ರಿತೇಶ್್ಗೆ ಇಷ್ಟವಾಗಿರಲಿಲ್ಲ. ಇದರಿಂದ ಡಿಸಿ ಮೇಲೆ ರಿತೇಶ್ ಕೋಪಗೊಂಡಿದ್ದನು ಎನ್ನಲಾಗಿದೆ.

ಇದೇ ಕಾರಣಕ್ಕೆ ಗುರುವಾರ (ಸೆಪ್ಟೆಂಬರ್ 12) ಏಕಾಏಕಿ ಬಸ್ ನಿಲ್ದಾಣದಲ್ಲಿ ಕಾಣಿಸಿಕೊಂಡ ರಿತೇಶ್ ಡಿಸಿ ಮೇಲೆ ಹಲ್ಲೆ ಮಾಡಿದ್ದಾರೆ. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಕುಮಾರ್ ವಾಹನ ಹತ್ತವ ವೇಳೆ ಅಡ್ಡಗಟ್ಟಿದ ರಿತೇಶ್ ಏಕಾಏಕಿ ಚಾಕುವಿನಿಂದ ಚುಚ್ಚಲು ಮುಂದಾಗಿದ್ದಾನೆ.
ಡಿಸಿ ಕೈ ಅಡ್ಡ ಕೊಟ್ಟಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಅದಾಗ್ಯೂ ಕೆಎಸ್ಆರ್ಟಿಸಿ ಡಿಸಿಯ ಎಡಗೈನ ಎರಡು ಬೆರಳುಗಳಿಗೆ ಗಾಯವಾಗಿದೆ. ಚಾಕುವಿನಿಂದ ಹಲ್ಲೆ ಮಾಡಿದ ಬಳಿಕ ಆರೋಪಿ ರಿತೇಶ್ ನಾಪತ್ತೆಯಾಗಿದ್ದಾನೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ದಾಖಲಾಗಿದೆ.
ಚಿಕ್ಕಮಗಳೂರು: ಮಾಜಿ ಕಾಂಗ್ರೆಸ್ ಸಚಿವರಿಗೆ ಕಂದಾಯ ಇಲಾಖೆ ಶಾಕ್
ಒತ್ತುವರಿ ಭೂಮಿ ತೆರವು ಮಾಡಲು ಕಂದಾಯ ಇಲಾಖೆ ಮಾಜಿ ಕಾಂಗ್ರೆಸ್ ಸಚಿವರಿಗೆ ನೋಟೀಸ್ ಜಾರಿ ಮಾಡಿದೆ. ಕಂದಾಯ ಇಲಾಖೆ ಅಧಿಕಾರಿಗಳು ಮಾಜಿ ಸಚಿವ ಸಗೀರ್ ಅಹಮದ್ ಮನೆಯ ಗೋಡೆಗೆ ನೋಟೀಸ್ ಅಂಟಿಸಿದ್ದಾರೆ.
ಚಿಕ್ಕಮಗಳೂರಿನ ದತ್ತಪೀಠಕ್ಕೆ ತೆರಳುವ ಮಾರ್ಗ ಮಧ್ಯೆ ಅತ್ತಿಗುಂಡಿ ಗ್ರಾಮದಲ್ಲಿರುವ 31 ಎಕರೆ ಕಂದಾಯ ಭೂಮಿ ಒತ್ತುವರಿ ಮಾಡಿ, ಕಾಫಿ ತೋಟವಾಗಿ ಪರಿವರ್ತನೆ ಮಾಡಿರುವ ಆರೋಪ ಸಗೀರ್ ಅಹಮದ್ ಅವರ ಮೇಲಿದೆ. ಕಾಫಿ ತೋಟ ಮಾಡಿ ಫಾರಂ 57 ಅರ್ಜಿ ಹಾಕಿರುವ ಆರೋಪ ಅವರ ವಿರುದ್ಧ ಕೇಳಿ ಬಂದಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಕೋರ್ಟ್ ನಲ್ಲಿ ಸುದೀರ್ಘ ವಿಚಾರಣೆ ಬಳಿಕ ಭೂಮಿ ವಶಕ್ಕೆ ಆದೇಶ ನೀಡಲಾಗಿದ್ದು, ಒತ್ತುವರಿ ತೆರವು ಮಾಡಲು ಸಹಕಾರ ನೀಡುವಂತೆ ಕಂದಾಯ ಇಲಾಖೆ ಮನವಿ ಮಾಡಿದೆ. ಇದರಿಂದಾಗಿ ಕಂದಾಯ ಇಲಾಖೆ ಅಧಿಕಾರಿಗಳು ಸಗೀರ್ ಅಹಮದ್ ಮನೆಯ ಗೋಡೆಗೆ ನೋಟೀಸ್ ಅಂಟಿಸಿದ್ದಾರೆ.
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications