ಪ್ರವಾಸಿಗರಿಗೆ ಪ್ರಮುಖ ಸೂಚನೆ: ಚಿಕ್ಕಮಗಳೂರಿನ ಎತ್ತಿನ ಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ!
ಚಿಕ್ಕಮಗಳೂರು ಜೂನ್ 22: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರಾಕೃತಿಕ ತಾಣ ಎತ್ತಿನ ಭುಜಕ್ಕೆ ಚಾರಣ ತೆರಳುವುದಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ.
ಚಿಕ್ಕಮಗಳೂರಿನಲ್ಲಿ ಜೋರು ಮಳೆ, ಗಾಳಿ, ಗುಡುಗು ಮಿಂಚು ಶುರುವಾಗಿದೆ. ಅತ್ಯಂತ ಕಿರಿದಾದ ಈ ಪ್ರವಾಸಿ ತಾಣದಲ್ಲಿ ಚಾರಣಕ್ಕೆ ಹೋಗುವುದು ಅಪಾಯ. ಅದಾಗ್ಯೂ ಜನ ಈ ಪ್ರದೇಶದಲ್ಲಿ ಚಾರಕ್ಕೆ ಹೋಗುತ್ತಿರುವುದು ಕಂಡು ಬಂದಿದೆ. ಇದರಿಂದ ಏನಾದರೂ ಅನಾಹುತಗಳು ಸಂಭವಿಸದರೆ ಎಂಬ ಮುನ್ನೆಚ್ಚರಿಕೆಯಿಂದ ಚಾರಣ ಹೋಗುವ ವರ್ಗದಲ್ಲಿ ಪ್ರವಾಸಿಗರ ಸುರಕ್ಷತಾ ಕಾಮಗಾರಿಗೆ ಇಲಾಖೆ ಮುಂದಾಗಿದೆ.

ಕಾಮಗಾರಿ ಅನುಷ್ಠಾನಗೊಳ್ಳಲಿರುವ ಕಾರಣ ಎತ್ತಿನ ಭುಜಕ್ಕೆ ಮುಂದಿನ ಆದೇಶದವರೆಗೂ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಚಿಕ್ಕಮಗಳೂರು ಇವರ ಆದೇಶದಂತೆ ಮೂಡಿಗೆರೆ ವಲಯ ಅರಣ್ಯ ಇಲಾಖೆ ಅಧಿಕಾರಿಗಳ ಕಚೇರಿಯಿಂದ ಚಾರಣ ನಿಷೇಧ ಆದೇಶ ಹೊರಡಿಸಲಾಗಿದೆ.
ಮೂಡಿಗೆರೆ ವಯಲ ವ್ಯಾಪ್ತಿಯಲ್ಲಿ ಕಳೆದ ಕೆಲ ದಿನಗಳಿಂದ ಅತಿಯಾಗಿ ಮಳೆಯಾಗುತ್ತಿರುವುದರಿಂದ, ಅಲ್ಲಲ್ಲಿ ಗುಡ್ಡಕುಸಿತ ಸಂಭವಿಸುತ್ತಿರುವುದರಿಂದ, ರಸ್ತೆಬದಿಯ ವಿದ್ಯುತ್ ಕಂಬಗಳು, ಮರಗಳು ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆಯಿರುವುದರಿಂದ, ಹಾಗೆಯೇ ಫೋಟೋ ತೆಗೆಯುವ ಸಂದರ್ಭದಲ್ಲಿ ತುರ್ತಾಗಿ ಘಟನಾ ಸ್ಥಳಕ್ಕೆ ತೆರಳಲು ಕಷ್ಟಸಾಧ್ಯವಾಗಿರುತ್ತದೆ.
ಆದ್ದರಿಂದ ಮುಂಜಾಗೃತ ಕ್ರಮವಾಗಿ ಯಾವುದೇ ರೀತಿಯ ಪ್ರಾಣಹಾನಿ ಮತ್ತು ಅಪಾಯ ಉಂಟಾಗದಂತೆ ತಡೆಗಟ್ಟುವ ಹಿತದೃಷ್ಟಿಯಿಂದ ಎತ್ತಿನ ಭಜಕ್ಕೆ ಚಾರಣ ಹೋಗುವುದನ್ನು ಮುಂದಿನ ಆದೇಶದವರೆಗೂ ತಡೆಹಿಡಿಯಲಾಗಿದೆ ಎಂದು ಮೂಡಿಗೆರೆ ವಲಯ ಅರಣ್ಯ ಅಧಿಕಾರಿ ತಿಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಿಂದ ಎತ್ತಿನ ಭುಜವು ಸುಮಾರು 25 ಕಿಲೋ ಮೀಟರ್ ದೂರದಲ್ಲಿರುವ ಪಶ್ಚಿಮ ಘಟ್ಟಗಳ ಪರ್ವತದ ಶಿಖರವಾಗಿದೆ. ಇದು 4,265 ಅಡಿ ಎತ್ತರವನ್ನು ಹೊಂದಿದೆ. ಇದು ಕರ್ನಾಟಕದ ಜನಪ್ರಿಯವಾದ ಚಾರಣ ಸ್ಥಳವಾಗಿದೆ.
ಏಕೆಂದರೆ ಕೊನೆಯ ಎರಡು ಕೊಲೋಮೀಟರ್ಗಳನ್ನು ಪ್ರವಾಸಿಗರು ಟ್ರಕ್ಕಿಂಗ್ ಮೂಲಕ ಶಿಖರದ ಸಮೀಪವಿರುವ ಬಿಂದುವನ್ನು ತಲುಪಬಹುದಾಗಿದೆ. ಎತ್ತಿನ ಭುಜದ ಸೌಂದರ್ಯಕ್ಕೆ ಮಾರುಹೋಗದರಿಲ್ಲ ಎನ್ನುವಷ್ಟರ ಮಟ್ಟಿಗೆ ಎತ್ತಿನ ಭಜವು ಪಾಕೃತಿಕ ಸೌಂದರ್ಯವನ್ನು ಹೊಂದಿದೆ.
ಮುಂಗಾರು ಸಮಯದಲ್ಲಿ ಚಿಕ್ಕಮಗಳೂರಿನ ಸೌಂದರ್ಯ ದುಪಟ್ಟಾಗಿರುತ್ತದೆ. ನೆರೆ ಜಿಲ್ಲೆ ಅಲ್ಲದೇ ಕರ್ನಾಟಕದ ಮೂಲೆ ಮೂಲೆಯಿಂದ ಪ್ರವಾಸಿಗರು ಚಿಕ್ಕಮಗಳೂರಿಗೆ ಆಗಮಿಸುತ್ತಾರೆ. ಪ್ರಾಕೃತಿಕ ಸೌಂದರ್ಯದಿಂದ ಸಮೃದ್ಧಿವಾಗಿರುವ ಕಾಫಿನಾಡಿನ ಸೊಬಗಿಗೆ ಪ್ರವಾಸಿಗರು ಫಿದಾ ಆಗಿದ್ದು ದಿನದಿಂದ ದಿನಕ್ಕೆ ಸಂಖ್ಯೆ ಹೆಚ್ಚಾಗುತ್ತಲೇ ಇದೆ.

ಕಳೆದ ಶನಿವಾರದಿಂದ ಸೋಮವಾರದವರೆಗೆ ಮೂರು ದಿನದಲ್ಲಿ 20,000ಕ್ಕೂ ಅಧಿಕ ಪ್ರವಾಸಿಗರು ಭೇಟಿ ನೀಡಿದ್ದಾರೆ ಎಂದು ಅಂದಾಜಿಸಲಾಗಿದೆ. ಈಗಾಗಲೇ ಕಳೆದ ಕೆಲ ತಿಂಗಳ ಹಿಂದೆ ಅರಣ್ಯ ಸಚಿವ ಈಶ್ವರ ಖಂಡ್ರೆ ರಾಜ್ಯದ ಪ್ರವಾಸಿ ತಾಣಗಳಿಗೆ ಆನ್ಲೈನ್ ಟಿಕೆಟ್ ಮೂಲಕ ದಿನಕ್ಕೆ ನಿರ್ದಿಷ್ಟ ಪ್ರವಾಸಿಗರಿಗೆ ಮಾತ್ರ ಅವಕಾಶ ಕಲ್ಪಿಸಬೇಕೆಂದು ಸೂಚನೆ ನೀಡಿದ್ದರು. ಆದರೆ, ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಹಿಗ್ಗಿಲ್ಲದೆ ಭೇಟಿ ನೀಡುತ್ತಿದ್ದಾರೆ. ಸಾಲದ್ದಕ್ಕೆ, ಎತ್ತಿನ ಭುಜದ ಕಿರಿದಾದ ಪ್ರದೇಶದಲ್ಲೂ ಕೂಡ ಪ್ರವಾಸಿಗರು ಟ್ರಕ್ಕಿಂಗ್ ಹೋಗುತ್ತಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications