Chikkamagaluru Utsav 2023: ಈ ಬಾರಿಯ ಆಹಾರ ಮೇಳ ಹೇಗಿರಲಿದೆ?, ಇಲ್ಲಿದೆ ವಿವರ
ಚಿಕ್ಕಮಗಳೂರು, ಜನವರಿ, 15: ಸಾರ್ವಜನಿಕರಿಗೆ ಹೆಚ್ಚು ಮನರಂಜನೆ ನೀಡುವುದನ್ನು ಗಮನದಲ್ಲಿಟ್ಟುಕೊಂಡು ಚಿಕ್ಕಮಗಳೂರು ಜಿಲ್ಲಾ ಹಬ್ಬವನ್ನು ಆಯೋಜಿಸಲಾಗಿದೆ ಎಂದು ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ ಹೇಳಿದ್ದಾರೆ.
ನಗರದ ಚಿಕ್ಕಮಗಳೂರು ಕ್ಲಬ್ ಮುಂಭಾಗ ಚಿಕ್ಕಮಗಳೂರು ಹಬ್ಬದ ಆಹಾರ ಮೇಳದ ಮಳಿಗೆಗಳ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕಳೆದ ಎರಡು ವರ್ಷದಿಂದ ಮಹಾಮಾರಿ ಕೊರೊನಾದಿಂದಾಗಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿರಲಿಲ್ಲ. ಈ ಬಾರಿ ಸಾರ್ವಜನಿಕರಿಗೆ ಹೆಚ್ಚು ಮನರಂಜನೆ ನೀಡುವುದನ್ನು ಆದ್ಯತೆಯಾಗಿ ಇಟ್ಟುಕೊಂಡು ಜಿಲ್ಲಾ ಉತ್ಸವವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಈ ಬಾರಿಯ ಆಹಾರ ಮೇಳದ ವಿಶೇಷತೆ
ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಾತನಾಡಿ, ಚಿಕ್ಕಮಗಳೂರು ಜಿಲ್ಲಾ ಹಬ್ಬದಲ್ಲಿ ಮಲೆನಾಡು, ಬಯಲುಸೀಮೆ ಸೇರಿದಂತೆ ಜಿಲ್ಲೆಯ ವಿವಿಧ ಬಗೆಯ ಖಾದ್ಯಗಳನ್ನು ಆಹಾರ ಮೇಳದಲ್ಲಿ ಪರಿಚಯಿಸಲಾಗುತ್ತಿದೆ ಎಂದರು. ಎಸ್ಬಿಎಂ.ನಿಂದ ಕೆಎಸ್ಎಫ್ಸಿವರೆಗಿನ ರಸ್ತೆಯಲ್ಲಿ ಸುಮಾರು 125 ಆಹಾರ ಮಳಿಗೆಗಳನ್ನು ತೆರೆಯಲು ಅವಕಾಶ ನೀಡಲಾಗುವುದು. ಎಐಟಿ ಕ್ಯಾಂಪಸ್ ಆವರಣದಲ್ಲಿ 25 ಆಹಾರ ಮಳಿಗೆಗಳನ್ನು ತೆರೆಯಲಾಗುವುದು ಎಂದರು.

ಮಳೆಗೆಗಳಲ್ಲಿ ಏನೆಲ್ಲ ಲಭ್ಯವಿರಲಿದೆ?
ಇನ್ನು ಮಳಿಗೆಗಳಲ್ಲಿ ಆಕರ್ಷಕ ತಿಂಡಿ ತಿನಿಸುಗಳ ಜೊತೆಗೆ ಬಳೆ ತೊಡಿಸುವ, ಟ್ಯಾಟೂ, ಮೆಹಂದಿ ಬಿಡಿಸುವ ಪ್ರದರ್ಶನ ಕೂಡ ಇರಲಿದೆ ಎಂದು ಮಾಹಿತಿ ನೀಡಿದರು. ನಂತರ ಸಿಇಒ ಜಿ.ಪ್ರಭು ಮಾತನಾಡಿ, ಜಿಲ್ಲಾ ಉತ್ಸವದಲ್ಲಿ ವೈವಿಧ್ಯಮಯವಾದ ಸಾಂಸ್ಕೃತಿಕ ಚಟುವಟಿಕೆಗಳು, ಜ್ಞಾನ ವೈಭವಕ್ಕೆ ಪೂರಕವಾದ ಆಹಾರ ಮೇಳವನ್ನು ಆಯೋಜಿಸಲಾಗಿದೆ. ದೇಶಿ ಖಾದ್ಯಗಳ ಜೊತೆಗೆ ಮನೆಯ ಉತ್ಪನ್ನಗಳನ್ನು ಸಾರ್ವಜನಿಕರಿಗೆ ಉಣಬಡಿಸಬೇಕು ಎಂಬುದು ಉತ್ಸವದ ಸದುದ್ದೇಶವಾಗಿದೆ ಎಂದರು.

ಜನವರಿ 18 ರಿಂದ ಜಿಲ್ಲಾ ಉತ್ಸವ
ಜನವರಿ 18 ರಿಂದ 22ರ ವರೆಗೆ ಜಿಲ್ಲಾ ಉತ್ಸವ ನಡೆಯಲಿದ್ದು, ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಎಐಟಿ ಕಾಲೇಜು ಆವರಣದಲ್ಲಿ ಕೃಷಿ ಮತ್ತು ವಸ್ತುಪ್ರದರ್ಶನ 'ಜ್ಞಾನ ವೈಭವ' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದ್ದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜ್ಞಾನ ವೈಭವ ಪೋಸ್ಟರ್ಗಳನ್ನು ಬಿಡುಗಡೆಗೊಳಿಸಿ ನಂತರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ್ದರು. ಜ್ಞಾನ ವೈಭವ ಸಜೀವ ಮಾದರಿಗಳ ಸಿದ್ಧತೆ ಈಗಾಗಲೇ ನಡೆಯುತ್ತಿದೆ. ಕೃಷಿ ಮತ್ತು ವಸ್ತು ಪ್ರದರ್ಶನ, ಫಲಪುಷ್ಪ ಪ್ರದರ್ಶನ, ಶ್ವಾನ ಪ್ರದರ್ಶನ, ಆಕೀರ್ಡ್ ಪ್ರದರ್ಶನ, ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಗುರುತಿಸಿ ಸನ್ಮಾನ ಮಾಡಲಾಗುವುದು. ಹಾಗೂ ವಿಚಾರ ಗೋಷ್ಟಿಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications