Chikkamagaluru Utsav 2023 : ಜನವರಿ 18ರಿಂದ ಚಿಕ್ಕಮಗಳೂರು ಜಿಲ್ಲಾ ಉತ್ಸವ, ಕಾರ್ಯಕ್ರಮಗಳ ಸಂಪೂರ್ಣ ವಿವರ ತಿಳಿಯಿರಿ
ಚಿಕ್ಕಮಗಳೂರು, ಜನವರಿ, 13: ಜನವರಿ 18 ರಿಂದ 22ರ ವರೆಗೆ ಜಿಲ್ಲಾ ಉತ್ಸವ ನಡೆಯಲಿದ್ದು, ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಎಐಟಿ ಕಾಲೇಜು ಆವರಣದಲ್ಲಿ ಕೃಷಿ ಮತ್ತು ವಸ್ತುಪ್ರದರ್ಶನ 'ಜ್ಞಾನ ವೈಭವ' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದ್ದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜ್ಞಾನ ವೈಭವ ಪೋಸ್ಟರ್ಗಳನ್ನು ಬಿಡುಗಡೆಗೊಳಿಸಿ ನಂತರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ್ದರು. ಜ್ಞಾನ ವೈಭವ ಸಜೀವ ಮಾದರಿಗಳ ಸಿದ್ಧತೆ ಈಗಾಗಲೇ ನಡೆಯುತ್ತಿದೆ. ಕೃಷಿ ಮತ್ತು ವಸ್ತು ಪ್ರದರ್ಶನ, ಫಲಪುಷ್ಪ ಪ್ರದರ್ಶನ, ಶ್ವಾನ ಪ್ರದರ್ಶನ, ಆಕೀರ್ಡ್ ಪ್ರದರ್ಶನ, ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಗುರುತಿಸಿ ಸನ್ಮಾನ ಮಾಡಲಾಗುವುದು. ಹಾಗೂ ವಿಚಾರ ಗೋಷ್ಟಿಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರತೀ ವರ್ಗದ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಕೃಷಿ ಮತ್ತು ಜ್ಞಾನ ವೈಭವವನ್ನು ಹಮ್ಮಿಕೊಳ್ಳಲಾಗುವುದು. ಚಿಕ್ಕಮಗಳೂರು ಜಿಲ್ಲಾ ಉತ್ಸವ ಸರ್ಕಾರಿ ಉತ್ಸವ ಆಗಬಾರದು, ಅದು ಜನರ ಉತ್ಸವ ಆಗಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಪ್ರಯೋಜನವಾಗುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜ್ಞಾನ ವೈಭವದಲ್ಲಿ ಕೃಷಿ ಮತ್ತು ವಸ್ತುಪ್ರದರ್ಶನದ ಜೊತೆಗೆ ಕಲೆ, ಸಾಹಿತ್ಯ, ಕೃಷಿ ವಿಜ್ಞಾನ ಸೇರಿದಂತೆ ವಿವಿಧ ಅಂಶಗಳು ಒಳಗೊಂಡಿವೆ ಎಂದು ಮಾಹಿತಿ ನೀಡಿದ್ದಾರೆ.

ಫಲಪುಷ್ಪ ಪ್ರದರ್ಶನಕ್ಕೆ ವ್ಯವಸ್ಥೆ
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಚಿಕ್ಕಮಗಳೂರು ಉತ್ಸವ ಸಾಂಸ್ಕೃತಿಕ ವೈಭವದ ಜೊತೆ ಜ್ಞಾನದ ಹಬ್ಬ ಆಗಬೇಕು. ಎಲ್ಲಾ ವರ್ಗದವರನ್ನು ತಲುಪಬೇಕು ಎನ್ನುವ ಉದ್ದೇಶದಿಂದ ಎಐಟಿ ಕಾಲೇಜು ಆವರಣ ನಾಲ್ಕು ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ವಸ್ತು ಪ್ರದರ್ಶನ ಪ್ರತ್ಯೇಕವಾಗಿ ನಿರ್ಮಿಸಲಾಗಿದೆ. ಜೊತೆಗೆ ಮಾರಾಟ ಮಳಿಗೆಗಳಿಗೂ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ವಸ್ತುಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ
ಕೃಷಿಮೇಳ ಮತ್ತು ವಸ್ತುಪ್ರದರ್ಶನದಲ್ಲಿ ಹೂವಿನ ಕಲಾಕೃತಿಗಳು, ತರಕಾರಿ ಕಲಾಕೃತಿ ಕೆತ್ತನೆ, ನಟ ಡಾ.ಪುನೀತ್ ರಾಜ್ಕುಮಾರ್ ಹೂವಿನ ಪುತ್ಥಳಿ, ರಂಗೋಲಿ ಕಲಾಕೃತಿ ಪ್ರದರ್ಶನ, ಬೋನ್ಸಾಯ್ ಗಿಡಗಳ ಪ್ರದರ್ಶನ, ಆರ್ಕೀಡ್ ಪ್ರದರ್ಶನ, ಎಕ್ಸೋಟಿಕ್ ತರಕಾರಿ ಮತ್ತು ಹಣ್ಣುಗಳ ಪ್ರದರ್ಶನ, ತೋಟಗಾರಿಕೆ ಬೆಳೆಗಳ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ, ಹನಿ ನೀರಾವರಿ ಮಾದರಿ ಪ್ರದರ್ಶನ, ಜೇನು ಕೃಷಿ, ವಿವಿಧ ಯಂತ್ರೋಪಕರಣಗಳ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.

ಯಾವೆಲ್ಲ ಪ್ರದರ್ಶನಗಳು ಇರಲಿವೆ?
ಕೃಷಿ ಮತ್ತು ಇತರೆ 40 ಇಲಾಖೆಗಳಿಂದ ಅತ್ಯಾಕರ್ಷಕ ಸಜೀವ ಮಾದರಿಗಳ ನಿರ್ಮಾಣ ಕಾರ್ಯ ಈಗಾಗಲೇ ಆರಂಭವಾಗಿದೆ. ಕೃಷಿ ಮೇಳ ಮೂರು ವಿಭಾಗದಲ್ಲಿ ನಡೆಯಲಿದೆ. ಸಾಧಕರಿಗೆ ಸನ್ಮಾನ, ವಿಚಾರಗೋಷ್ಠಿಗಳು, ಸಜೀವ ಮಾದರಿ ವಸ್ತುಪ್ರದರ್ಶನ ನಡೆಯಲಿದೆ. ತೋಟಗಾರಿಕೆ ಇಲಾಖೆಯಿಂದ ಬೆಂಗಳೂರಿನ ಲಾಲ್ಬಾಗ್ ಮಾದರಿಯಲ್ಲಿ ಫಲಪುಷ್ಪ ಪ್ರದರ್ಶನ, ಸಿರಿಧಾನ್ಯ, ಬೆಳವಾಡಿಯ ವೀರನಾರಾಯಣ ದೇವಸ್ಥಾನ ಸೇರಿದಂತೆ 50ಕ್ಕಿಂತ ಹೆಚ್ಚು ಕಲಾಕೃತಿಗಳನ್ನು ಹಾಗೂ 10ಸಾವಿರಕ್ಕೂ ಹೆಚ್ಚು ಹೂವಿನ ಕುಂಡಗಳನ್ನು ಪ್ರದರ್ಶನದಲ್ಲಿ ಇರಿಸಲಾಗುವುದು ಎಂದು ತಿಳಿಸಿದ್ದಾರೆ.

ಮತ್ಯಾ ಮೇಳದ ಸಂಪೂರ್ಣ ವಿವರ ಇಲ್ಲಿದೆ
ಮೀನುಗಾರಿಕೆ ಇಲಾಖೆಯಿಂದ ಅತ್ಯಾಕರ್ಷಕ ಮತ್ಯಾಮೇಳವನ್ನು ಆಯೋಜಿಸಲಾಗಿದೆ. ರೇಷ್ಮ ಇಲಾಖೆಯಿಂದ ರೈತರ ನೇರ ಸಂದರ್ಶನ ಮತ್ತು ರೇಷ್ಮೇ ಉತ್ಪನ್ನಗಳ ಪ್ರದರ್ಶನ ಇರಲಿದೆ ಎಂದ ಅವರು, ಇಂಜಿನಿಯರಿಂಗ್ ಇಲಾಖೆಯಿಂದ ಹಿರೆನಲ್ಲೂರು, ಬಗ್ಗುವಳ್ಳಿ, ಅಮೃತೇಶ್ವರ ದೇವಸ್ಥಾನ ಮಾದರಿಯು ಪ್ರದರ್ಶನಲ್ಲಿ ಇರಲಿದ. ಕೈಗಾರಿಕೋದ್ಯಮ ಇಲಾಖೆಯಿಂದ ರೋಬೋಟಿಕ್ ಪ್ರದರ್ಶನ ಮತ್ತು ತಂತ್ರಜ್ಞಾನ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದ್ದಾರ.

ಎರಡು ಆನೆಗಳ ಪ್ರದರ್ಶನಕ್ಕೆ ವ್ಯವಸ್ಥೆ
ಪಶುಸಂಗೋಪಾನೆ ಇಲಾಖೆಯಿಂದ ಶ್ವಾನ ಪ್ರದರ್ಶನ, ಉತ್ತಮ ಶ್ವಾನಗಳ ಪ್ರದರ್ಶನ ಮತ್ತು ಮಾಹಿತಿ ಲಭ್ಯವಾಗಲಿದೆ. ಎರಡು ಆನೆಗಳನ್ನು ಪ್ರದರ್ಶನಕ್ಕೆ ಕರೆಸಲಾಗುತ್ತಿದೆ. ಹಾಗೆಯೇ ಆಹಾರ ಮೇಳ, ಜಿಲ್ಲೆಯಲ್ಲಿರುವ ಶತಮಾನಗಳ ಪರಿಕರಗಳ ಪರಿಚಯ, ನವೀನ ತಂತ್ರಜ್ಞಾನ ವಸ್ತು ಪ್ರದರ್ಶನ, ವಿದ್ಯಾರ್ಥಿಗಳಿಗೆ ಅನು ಕೂಲವಾಗುವಂತೆ ಇಸ್ರೋ ಸಂಸ್ಥೆ ತಾರಾಲಯ ಹಾಗೂ ಎಚ್ಎಎಲ್ ವೈಜ್ಞಾನಿಕ ಪ್ರದರ್ಶನ ಏರ್ಪಡಿಸಲಾಗಿದೆ. ಇನ್ನು ಪುಸ್ತಕ ಮೇಳ, ಅರಣ್ಯ ಇಲಾಖೆಯಿಂದ ವನ್ಯ ಜಗತ್ತು ಸೃಷ್ಟಿಸಲಿದ್ದಾರೆ. ತೋಟಗಾರಿಕೆ ಇಲಾಖೆಯಿಂದ ಚಿಟ್ಟೆ ಮತ್ತು ಕೀಟಗಳ ಪ್ರದರ್ಶನ, ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಗಾಂಧಿಸ್ಮರಣೆ, ವಿಜ್ಞಾನ ಮೇಳವನ್ನು ಆಯೋಜಿಸಲಾಗುತ್ತದೆ. ವಿದ್ಯಾರ್ಥಿಗಳು, ರೈತರು, ಸಾರ್ವಜನಿಕರು ಈ 'ಜ್ಞಾನ ವೈಭವ' ವಸ್ತು ಪ್ರದರ್ಶನ ಮತ್ತು ಫಲಪುಷ್ಪ ಪ್ರರ್ದಶನವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications