ಬೈಕಿಗೆ ಪ್ಯಾಲಿಸ್ತೀನ್ ಧ್ವಜ ಕಟ್ಟಿ ಓಡಾಟ- ವಿಡಿಯೋ ವೈರಲ್
ಚಿಕ್ಕಮಗಳೂರು ಸೆಪ್ಟೆಂಬರ್ 15: ಚಿಕ್ಕಮಗಳೂರು-ಕಡೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕಿಗೆ ಪ್ಯಾಲಿಸ್ತೀನ್ ಧ್ವಜ ಕಟ್ಟಿ ಮುಸ್ಲಿಂ ಯುವಕರು ಓಡಾಡಿದ ಘಟನೆ ನಡೆದಿದೆ. ನಿನ್ನೆಯಿಂದ ಬಾವುಟ ಕಟ್ಟಿಕೊಂಡು ಓಡಾಡುತ್ತಿರುವ ಯುವಕರು ಘೋಷಣೆ ಕೂಗುತ್ತಿದ್ದು ಹಿಂದೂ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಬೈಕಿಗೆ ಪ್ಯಾಲಿಸ್ತೀನ್ ಧ್ವಜ ಕಟ್ಟಿ ಓಡಾಡುವುದನ್ನು ಖಂಡಿಸಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಗೆ ಹಿಂದೂಪರ ಸಂಘಟನೆಗಳು ದೂರು ನೀಡಿವೆ. ಪೊಲೀಸ್ ಠಾಣೆ ಮುಂದೆ 30ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರು ಜಮಾಯಿಸಿ ಪ್ಯಾಲಿಸ್ತೀನ್ ಧ್ವಜ ಹಾರಿಸಿದ ಯುವಕರ ಬಂಧನಕ್ಕೆ ಆಗ್ರಹಿಸಿದ್ದಾರೆ.

ಪ್ಯಾಲಿಸ್ತೀನ್ ಧ್ವಜ ಹಾರಿಸಿದ ದೇಶದ್ರೋಹಿಗಳನ್ನು ಬಂಧಿಸದಿದ್ದರೆ ಮತ್ತಷ್ಟು ಹೋರಾಟದ ಎಚ್ಚರಿಕೆ ನೀಡಿದರು. ರಾಜ್ಯದಲ್ಲಿ ಪ್ಯಾಲಿಸ್ತೀನ್ ಧ್ವಜ ಹಾರಿಸುತ್ತಿರುವುದು ಇದೇ ಮೊದಲಲ್ಲ. ಆಗಾಗ ಇಂತಹ ಪುಂಡಾಟ ನಡೆಯುತ್ತಲೇ ಇರುತ್ತವೆ.
ಆಗಸ್ಟ್ 15ರಂದು ಪ್ಯಾಲಿಸ್ತೀನ್ ಬಾವುಟ ಹಾರಿಸಲಾಗಿತ್ತು..
ಸ್ವಾತಂತ್ರ್ಯ ದಿನಾಚರಣೆ ದಿನದಂದು (ಆಗಸ್ಟ್ 15,2024) ದೇಶಾದ್ಯಂತ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸುತ್ತಿರುವ ಸಂದರ್ಭದಲ್ಲಿ ತುಮಕೂರು ಜಿಲ್ಲೆಯ ಕುಣಿಗಲ್ನಲ್ಲಿ ಕೆಲ ಯುವಕರು ಪ್ಯಾಲಿಸ್ತೀನ್ ಬಾವುಟ (Palestine Flag) ಹಾರಿಸಲು ಯತ್ನಿಸಿರುವುದು ಕಂಡುಬಂದಿತ್ತು. ಇದಕ್ಕೆ ಸ್ಥಳೀಯ ಯುವಕರು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದರು.

ಕುಣಿಗಲ್ ಪಟ್ಟಣದ ಸರ್ಕಾರಿ ಶಾಲಾ ಮೈದಾನದಲ್ಲಿ ತಾಲೂಕು ಆಡಳಿತದಿಂದ ಧ್ವಜಾರೋಹಣ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಮತ್ತೊಂದು ಕಡೆ ಕೆಲ ಯುವಕರ ಗುಂಪು ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನಿಸಿತ್ತು. ಅದಕ್ಕೆ ಮತ್ತೊಂದು ಯುವಕರ ತಂಡ ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದು, ಇವತ್ತು ಪ್ಯಾಲೇಸ್ತೀನ್ ಧ್ವಜ ಹಾರಿಸುತ್ತಾರೆ, ನಾಳೆ ಪಾಕಿಸ್ತಾನ ಧ್ವಜ ಹಾರಿಸುತ್ತಾರೆ. ಹಾರಿಸುವುದರೆ ಭಾರತ ಧ್ವಜ ಹಾರಿಸಿ, ಇಲ್ಲದಿದ್ದರೆ ವಿವಾದವಾಗಲಿದೆ ಎಂದು ಯುವಕರಿಗೆ ಬುದ್ಧಿ ಹೇಳಿದ್ದಾರೆ. ಆಗ ಯುವಕರು ಸುಮ್ಮನಾಗಿದ್ದಾರೆ ಎಮದು ತಿಳಿದು ಬಂದಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications