ಬೈಕಿಗೆ ಪ್ಯಾಲಿಸ್ತೀನ್ ಧ್ವಜ ಕಟ್ಟಿ ಓಡಾಟ- ವಿಡಿಯೋ ವೈರಲ್
ಚಿಕ್ಕಮಗಳೂರು ಸೆಪ್ಟೆಂಬರ್ 15: ಚಿಕ್ಕಮಗಳೂರು-ಕಡೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕಿಗೆ ಪ್ಯಾಲಿಸ್ತೀನ್ ಧ್ವಜ ಕಟ್ಟಿ ಮುಸ್ಲಿಂ ಯುವಕರು ಓಡಾಡಿದ ಘಟನೆ ನಡೆದಿದೆ. ನಿನ್ನೆಯಿಂದ ಬಾವುಟ ಕಟ್ಟಿಕೊಂಡು ಓಡಾಡುತ್ತಿರುವ ಯುವಕರು ಘೋಷಣೆ ಕೂಗುತ್ತಿದ್ದು ಹಿಂದೂ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಬೈಕಿಗೆ ಪ್ಯಾಲಿಸ್ತೀನ್ ಧ್ವಜ ಕಟ್ಟಿ ಓಡಾಡುವುದನ್ನು ಖಂಡಿಸಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಗೆ ಹಿಂದೂಪರ ಸಂಘಟನೆಗಳು ದೂರು ನೀಡಿವೆ. ಪೊಲೀಸ್ ಠಾಣೆ ಮುಂದೆ 30ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರು ಜಮಾಯಿಸಿ ಪ್ಯಾಲಿಸ್ತೀನ್ ಧ್ವಜ ಹಾರಿಸಿದ ಯುವಕರ ಬಂಧನಕ್ಕೆ ಆಗ್ರಹಿಸಿದ್ದಾರೆ.

ಪ್ಯಾಲಿಸ್ತೀನ್ ಧ್ವಜ ಹಾರಿಸಿದ ದೇಶದ್ರೋಹಿಗಳನ್ನು ಬಂಧಿಸದಿದ್ದರೆ ಮತ್ತಷ್ಟು ಹೋರಾಟದ ಎಚ್ಚರಿಕೆ ನೀಡಿದರು. ರಾಜ್ಯದಲ್ಲಿ ಪ್ಯಾಲಿಸ್ತೀನ್ ಧ್ವಜ ಹಾರಿಸುತ್ತಿರುವುದು ಇದೇ ಮೊದಲಲ್ಲ. ಆಗಾಗ ಇಂತಹ ಪುಂಡಾಟ ನಡೆಯುತ್ತಲೇ ಇರುತ್ತವೆ.
ಆಗಸ್ಟ್ 15ರಂದು ಪ್ಯಾಲಿಸ್ತೀನ್ ಬಾವುಟ ಹಾರಿಸಲಾಗಿತ್ತು..
ಸ್ವಾತಂತ್ರ್ಯ ದಿನಾಚರಣೆ ದಿನದಂದು (ಆಗಸ್ಟ್ 15,2024) ದೇಶಾದ್ಯಂತ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸುತ್ತಿರುವ ಸಂದರ್ಭದಲ್ಲಿ ತುಮಕೂರು ಜಿಲ್ಲೆಯ ಕುಣಿಗಲ್ನಲ್ಲಿ ಕೆಲ ಯುವಕರು ಪ್ಯಾಲಿಸ್ತೀನ್ ಬಾವುಟ (Palestine Flag) ಹಾರಿಸಲು ಯತ್ನಿಸಿರುವುದು ಕಂಡುಬಂದಿತ್ತು. ಇದಕ್ಕೆ ಸ್ಥಳೀಯ ಯುವಕರು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದರು.

ಕುಣಿಗಲ್ ಪಟ್ಟಣದ ಸರ್ಕಾರಿ ಶಾಲಾ ಮೈದಾನದಲ್ಲಿ ತಾಲೂಕು ಆಡಳಿತದಿಂದ ಧ್ವಜಾರೋಹಣ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಮತ್ತೊಂದು ಕಡೆ ಕೆಲ ಯುವಕರ ಗುಂಪು ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನಿಸಿತ್ತು. ಅದಕ್ಕೆ ಮತ್ತೊಂದು ಯುವಕರ ತಂಡ ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದು, ಇವತ್ತು ಪ್ಯಾಲೇಸ್ತೀನ್ ಧ್ವಜ ಹಾರಿಸುತ್ತಾರೆ, ನಾಳೆ ಪಾಕಿಸ್ತಾನ ಧ್ವಜ ಹಾರಿಸುತ್ತಾರೆ. ಹಾರಿಸುವುದರೆ ಭಾರತ ಧ್ವಜ ಹಾರಿಸಿ, ಇಲ್ಲದಿದ್ದರೆ ವಿವಾದವಾಗಲಿದೆ ಎಂದು ಯುವಕರಿಗೆ ಬುದ್ಧಿ ಹೇಳಿದ್ದಾರೆ. ಆಗ ಯುವಕರು ಸುಮ್ಮನಾಗಿದ್ದಾರೆ ಎಮದು ತಿಳಿದು ಬಂದಿತ್ತು.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications