ಬಾರ್ ಬಂದ್ ಮಾಡ್ಸಿ ಸರ್, ಚಿಕ್ಕ ಮಕ್ಕಳು ಹಾಳಾಗುತ್ತಿದ್ದಾರೆ- ಸಚಿವರ ಮುಂದೆ ಬೇಡಿಕೊಂಡ ಮಹಿಳೆ
ಚಿಕ್ಕಮಗಳೂರು ಜುಲೈ 7: ಆಟವಾಡೊ ಮಕ್ಕಳೆಲ್ಲ ಬಾರಿಗೆ ಹೋಗ್ತಿದ್ದಾರೆ ಸರ್ ಬಾರ್ ಬಂದ್ ಮಾಡ್ಸಿ ಸರ್' ಎಂದು ಸಚಿವರ ಮುಂದೆ ಮಹಿಳೆಯೊಬ್ಬರು ಕೈ ಮುಗಿದು ಬೇಡಿಕೊಂಡಿದ್ದಾರೆ.
ನಗರದ ನಿರ್ಮಾಣವಾಗುತ್ತಿರುವ ಮೆಡಿಕಲ್ ಕಾಲೇಜಿಗೆ ವೈದ್ಯಕೀಯ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಭೇಟಿ ನೀಡಿ ಪರಶೀಲನೆ ನಡೆಸಿದರು. ಬಳಿಕ ಅವರು ಮರ್ಲೆ ಗ್ರಾಮದ ಮೂಲಕ ಮರಳಿ ಹೋಗುವ ವೇಳೆ ಕಾರಿನ ಬಳಿ ಬಂದ ಮಹಿಳೆ, 'ನಮ್ಮೂರಲ್ಲಿ ಕದ್ದು ಕದ್ದು ಎಣ್ಣೆ ಮಾರುತಿದ್ದಾರೆ ಸರ್. ಆಟವಾಡೊ ಮಕ್ಕಳೆಲ್ಲ ಕುಡಿದು ಸತ್ತು ಹೋಗ್ತಿದ್ದಾರೆ. ಬಾರ್ ಬಂದ್ ಮಾಡ್ಸಿ ಸರ್..' ಎಂದು ಅಳಲು ತೋಡಿಕೊಂಡಿದ್ದಾರೆ.

ಸಚಿವ ಶರಣಪ್ರಕಾಶ್ ಪಾಟೀಲ್ ಬಳಿ ಕೈಮುಗಿದು ಬೇಡಿದ ಮಹಿಳೆ ಮರ್ಲೆ ಗ್ರಾಮದಲ್ಲಿ ವೈನ್ ಶಾಪ್ ನಿಂದ ಆಗುತ್ತಿರೋ ಅನಾಹುತ ಬಗ್ಗೆ ಹೇಳಿಕೊಂಡಿದ್ದಾರೆ.. ಚಿಕ್ಕ ಚಿಕ್ಕ ಮಕ್ಕಳೆಲ್ಲ ಮಧ್ಯವಸನಿಗಳಾಗಿದ್ದಾರೆ. ದಯಮಾಡಿ ವೈನ್ ಶಾಪ್ ಕ್ಲೋಸ್ ಮಾಡ್ಸಿ ಎಂದು ಮಹಿಳೆ ಮನವಿ ಮಾಡಿದ್ದಾರೆ.
ಡಿಸಿ ಕಚೇರಿ ಮುಂದೆ ಪ್ರತಿಭಟನೆ ಮಾಡಿ ಮನವಿ ಕೊಟ್ಟಿದ್ದೇವೆ. ಆದರೂ ಪ್ರಯೋಜನವಾಗಿಲ್ಲ ಎಂದು ಸಚಿವರ ಬಳಿ ಗ್ರಾಮಸ್ಥರ ಅಳಲು ತೋಡಿಕೊಂಡಿದ್ದಾರೆ. ಮಕ್ಕಳ ಹಾಸ್ಟರ್ ಎದುರುಗಡೆನೇ ವೈನ್ ಶಾಪ್ ಇದೆ. ಇದರಿಂದ ಮಕ್ಕಳು ಹಾಳಾಗದೇ ಏನಾಗ್ತಾರೆ ಅಂತ ಸ್ಥಳೀಯರು ಆಕ್ರೋಶಗೊಂಡಿದ್ದಾರೆ.
ಚಿಕ್ಕಮಗಳೂರು ಮದ್ಯ ಮಾರಾಟ
ಚಿಕ್ಕಮಗಳೂರಿನಲ್ಲಿ ಚುನಾವಣೆ ಜಾತ್ರೆ ಮಹೋತ್ಸವಗಳು ಇದ್ದಾಗ ಮದ್ಯಮಾರಾಟ ಬಂದ್ ಮಾಡಲಾಗುತ್ತದೆ. ಬಳಿಕ ಮದ್ಯದ ಅಂಗಡಿಗಳು ಚಿಕ್ಕಪುಟ್ಟ ಮಕ್ಕಳಿಗೆ ಮದ್ಯ ವಿತರಿಸುತ್ತಿವೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಮದ್ಯ ವಿತರಿಸುವಾಗ ಚಿಕ್ಕಮಕ್ಕಳಿಗೂ ಮಾರಾಟಗಾರರು ಮದ್ಯದ ಬಾಟಲಿಗಳನ್ನು ಮಾರಾಟ ಮಾಡುತ್ತಿದ್ದಾರೆ. ಹೀಗಾಗಿ ಶಾಲೆಗೆ ಹೋಗುವ ಮಕ್ಕಳು ಕೂಡ ಮದ್ಯವ್ಯಸನಿಗಳಾಗಿದ್ದಾರೆ ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ಅದನ್ನು ಖರೀದಿಸಲು ಮನೆಯಲ್ಲಿ ದುಡ್ಡಿ ನೀಡಿಲ್ಲ ಅಂತಾದರೆ ಕಳ್ಳತನಕ್ಕೆ ಮುಂದಾಗಿದ್ದಾರೆ. ಜೊತೆಗೆ ಮನೆಯವರಿಗೆ ಬೆದರಿಕೆ ಹಾಕಿ ಮದ್ಯ ಖರೀದಿ ಮಾಡುತ್ತಿದ್ದಾರೆ. ಹೀಗಾಗಿ ಮದ್ಯ ಮಾರಾಟವೇ ನಿಲ್ಲಿಸಬೇಕು ಎಂದು ಜನ ಮನವಿ ಮಾಡಿದ್ದಾರೆ.
ಮದ್ಯದಂಗಡಿಗಳಲ್ಲಿ ಕುಡಿದು ಹಣ ನೀಡದೇ ಮಕ್ಕಳು ಮನೆಗೆ ವಾಪಾಸ್ ಆಗಿ ಪೋಷಕರಿಗೆ ಸಂಕಷ್ಟಕ್ಕೆ ತಂದೊಡ್ಡುತ್ತಿದ್ದಾರೆ. ಸಾಲ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿವೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications