ಚಿಕ್ಕಮಗಳೂರು: ಸರ್ಕಾರಿ ಶಾಲೆಗೆ 2 ಕೋಟಿ ದಾನ ನೀಡಿ, ಮಗನನ್ನು ಸೇರಿಸಿದ ಕಾಫಿ ಉದ್ಯಮಿ
ಚಿಕ್ಕಮಗಳೂರು, ಫೆಬ್ರವರಿ 25: ಸರ್ಕಾರಿ ಶಾಲೆಗಳು ವಿದ್ಯಾರ್ಥಿಗಳ ಕೊರತೆ ಎದುರಿಸುತ್ತಿವೆ. ನಗರ ಪ್ರದೇಶ ಮಾತ್ರವಲ್ಲ ಪಟ್ಟಣಗಳಲ್ಲೂ ಈಗ ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವುದು ಹೆಚ್ಚಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಸರಿಯಾದ ಮೂಲ ಸೌಕರ್ಯಗಳು ಸಹ ಇಲ್ಲ. ಇಂತಹ ಹೊತ್ತಿನಲ್ಲಿ ಕಾಫಿ ಎಸ್ಟೇಟ್ ಮಾಲೀಕರೊಬ್ಬರು ಸರ್ಕಾರಿ ಶಾಲೆಗೆ ಮಗನನ್ನು ದಾಖಲು ಮಾಡಿದ್ದಾರೆ. ಶಾಲೆಯ ಅಭಿವೃದ್ಧಿಗಾಗಿ 2.18 ಕೋಟಿ ರೂ. ದೇಣಿಗೆ ನೀಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಕಾಫಿ ಕ್ಯೂರಿಂಗ್ ಮಾಲೀಕರಾದ ಬಿ. ಎಸ್. ಸಂತೋಷ್ ಸರ್ಕಾರಿ ಶಾಲೆಗೆ 2.18 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಈ ಶಾಲೆಗೆ ತಮ್ಮ ಪುತ್ರನನ್ನು ಸೇರಿಸಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಈ ಓದಿರುವ ಸಂತೋಷ್ ಈಗ ದೊಡ್ಡ ಕಾಫಿ ಉದ್ಯಮಿಯಾಗಿದ್ದು, ಕಾಫಿ ಕ್ಯೂರಿಂಗ್ ಘಟಕವನ್ನು ಹೊಂದಿದ್ದಾರೆ.

ಮುತ್ತಿಗೆಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಂತೋಷ್ ದೇಣಿಗೆಯನ್ನು ನೀಡಿದ್ದಾರೆ. 1973ರಲ್ಲಿ ಈ ಶಾಲೆ ಪ್ರಾರಂಭವಾಗಿದೆ. ಸದ್ಯ ಶಾಲೆಯಲ್ಲಿ 363 ವಿದ್ಯಾರ್ಥಿಗಳಿದ್ದಾರೆ. ಸಂತೋಷ್ ನೀಡಿರುವ ದೇಣಿಗೆಯಿಂದ ಶಾಲೆಯಲ್ಲಿ 8 ಸುಸಜ್ಜಿತ ಕೊಠಡಿಗಳು, ಸಭಾಂಗಣವನ್ನು ನಿರ್ಮಾಣ ಮಾಡಲಾಗಿದೆ.
ಕೊಠಡಿಗಳ ಉದ್ಘಾಟನೆ: ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೇಣಿಗೆಯ ನೆರವಿನಲ್ಲಿ 'ವಿವೇಕ' ಯೋಜನೆ ಅನ್ವಯ 56 ಲಕ್ಷ ರೂ. ವೆಚ್ಚದಲ್ಲಿ 4 ಹೆಚ್ಚುವರಿ ಕೊಠಡಿಗಳನ್ನು ನಿರ್ಮಾಣ ಮಾಡಲಾಗಿದೆ. ಫೆಬ್ರವರಿ 28ರಂದು ಒಟ್ಟು 12 ಕೊಠಡಿಗಳನ್ನು ಉದ್ಘಾಟಿಸಲಾಗುತ್ತದೆ.
ಮುತ್ತಿಗೆಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಜ್ಯದಲ್ಲಿಯೇ ಮಾದರಿ ಶಾಲೆಯಾಗುವತ್ತ ಹೆಜ್ಜೆ ಹಾಕಿದೆ. ಹಲವಾರು ದಾನಿಗಳು, ಸಂಘ ಸಂಸ್ಥೆಗಳು ಶಾಲೆಗೆ ದೇಣಿಗೆಯನ್ನು ನೀಡುತ್ತಿದ್ದಾರೆ. ಸೌದಿ ಅರೇಬಿಯಾದಲ್ಲಿ ನೆಲೆಸಿರುವ ಗ್ರಾಮದ ಸಿದ್ದಿಕ್ ಶಾಲೆಗೆ 60,000 ರೂ. ವೆಚ್ಚದಲ್ಲಿ ಶುದ್ಧೀಕರಿಸಿದ ಕುಡಿಯುವ ನೀರಿನ ಘಟಕವನ್ನು ನೀಡಿದ್ದಾರೆ.
ಶಾರ್ಲಿನ್ ವಿಲಿಯಮ್ಸ್ ಎಂಬ ಕಂಪನಿಯು 18 ಲಕ್ಷ ರೂ. ಮೌಲ್ಯದ ಪಿಠೋಪಕರಣಗಳನ್ನು ನೀಡಿದೆ. ಯೂತ್ ಫಾರ್ ಸೇವಾ ಸಂಸ್ಥೆಯು 8 ಕಂಪ್ಯೂಟರ್ಗಳನ್ನು ಮತ್ತು ಅವುಗಳನ್ನು ಬಳಕೆ ಮಾಡಲು ಬೇಕಾದ ಟೇಬಲ್ಗಳನ್ನು ನೀಡಿದೆ.
ದಾನಿಗಳು ಶಾಲೆಗೆ 20 ಸಿಟಿಟಿವಿ ಕ್ಯಾಮರಾಗಳನ್ನು ನೀಡಲು ಮುಂದೆ ಬಂದಿದ್ದಾರೆ. ಮಧ್ಯಾಹ್ನದ ಬಿಸಿಯೂಟ ತಯಾರು ಮಾಡಲು 5 ಲಕ್ಷ ರೂ. ವೆಚ್ಚದಲ್ಲಿ ಹೈಟೆಕ್ ಅಡುಗೆ ಮನೆಯನ್ನು ನಿರ್ಮಾಣ ಮಾಡಲು ಸಹ ದಾನಿಗಳು ದೇಣಿಗೆ ನೀಡುವುದಾಗಿ ಹೇಳಿದ್ದಾರೆ.
ಸಿ. ಟಿ. ರವಿ ಅಭಿನಂದನೆ: ಬಿ. ಎಸ್. ಸಂತೋಷ್ ಕಾರ್ಯಕ್ಕೆ ಬಿಜೆಪಿ ನಾಯಕ, ಎಂಎಲ್ಸಿ ಸಿ. ಟಿ. ರವಿ ಅಭಿನಂದನೆ ಸಲ್ಲಿಸಿದ್ದಾರೆ. 'ತಾನು ಕಲಿತ ಸರ್ಕಾರಿ ಶಾಲೆಯನ್ನು ಮಾದರಿ ಶಾಲೆಯಾಗಿ ಅಭಿವೃದ್ಧಿಪಡಿಸಿ ಮಾದರಿಯಾದ ಉದ್ಯಮಿ ಮುದ್ರೆಮನೆ ಕಾಫಿ ಕ್ಯೂರಿಂಗ್ ಮಾಲೀಕರಾದ ಶ್ರೀ ಬಿ. ಎಸ್. ಸಂತೋಷ್. ಮೂಡಿಗೆರೆ ಸಮೀಪದಲ್ಲಿರುವ ಮುತ್ತಿಗೆರೆಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಯನ್ನು ಸುಮಾರು 2 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ 8 ಕೊಠಡಿ ಹಾಗು ಇನ್ನಿತರ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಿದ್ದಾರೆ' ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.
'ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಮಾತ್ರವಲ್ಲದೆ ತನ್ನ ಮಗನನ್ನು ಕೂಡ ಇದೆ ಸರಕಾರಿ ಶಾಲೆಗೆ ಸೇರಿಸಿ ಓದಿಸುತ್ತಿದ್ದಾರೆ. ಶಾಲೆಯಲ್ಲಿ 363 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು, ಸರಕಾರಿ ಶಾಲೆಯನ್ನು ಖಾಸಗಿ ಶಾಲೆ ಮಾದರಿಯಲ್ಲಿ ಅಭಿವೃದ್ಧಿಪಡಿಸಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಸಂತೋಷ್ ಅವರ ಈ ಮಾದರಿ ಕಾರ್ಯ ಅನುಕರಣಾಯೋಗ್ಯ ಹಾಗು ಅಭಿನಂದನಾರ್ಹ' ಎಂದು ಹೇಳಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications