ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಫಿನಾಡು ಚಿಕ್ಕಮಗಳೂರಲ್ಲಿ ಕಾಫಿ ತೋಟ ಮುಟ್ಟುಗೋಲು

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಫೆಬ್ರವರಿ 11: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಫಿ ತೋಟ ಸೀಜ್ ಮಾಡಿದ್ದು, 200 ಎಕರೆ ಕಾಫಿ ತೋಟವನ್ನು ಬ್ಯಾಂಕ್ ಮುಟ್ಟುಗೋಲು ಹಾಕಿಕೊಂಡಿದೆ.

ಚಿಕ್ಕಮಗಳೂರು ತಾಲೂಕಿನ ಹಿರೇಕೊಳಲೆಯ ವಾಟೇಖಾನ್ ಕಾಫಿ ಎಸ್ಟೇಟ್ ಅನ್ನು ಚಿಕ್ಕಮಗಳೂರಿನ ಯೂನಿಯನ್ ಬ್ಯಾಂಕ್ ನಿಂದ ಮುಟ್ಟುಗೋಲು ಹಾಕಿಕೊಂಡಿದ್ದು, ರಮೇಶ್ ರಾವ್ ಎಂಬುವರಿಗೆ ಕಾಫಿ ತೋಟ ಸೇರಿದೆ.

ಶೃಂಗೇರಿ ಅತ್ಯಾಚಾರ ಪ್ರಕರಣ; ಮತ್ತೆ 5 ಆರೋಪಿಗಳ ಬಂಧನ ಶೃಂಗೇರಿ ಅತ್ಯಾಚಾರ ಪ್ರಕರಣ; ಮತ್ತೆ 5 ಆರೋಪಿಗಳ ಬಂಧನ

22 ಕೋಟಿ ರುಪಾಯಿ ಸಾಲವನ್ನು ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಕಾಫಿ ಎಸ್ಟೇಟ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಯೂನಿಯನ್ ಬ್ಯಾಂಕ್ ಅಧಿಕಾರಿಗಳು ಪೊಲೀಸರೊಂದಿಗೆ ತೆರಳಿ ಕಾಫಿ ಎಸ್ಟೇಟ್ ವಶಪಡಿಸಿಕೊಂಡಿದ್ದಾರೆ.

Coffee Plantation Sieze By Union Bank In Chikkamagaluru

ಕಾಫಿ ಎಸ್ಟೇಟ್ ಮಾಲೀಕ ವಾಟೇಖಾನ್ ಅವರು ಕಾಫಿ ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೂ ಲಕ್ಷಾಂತರ ರುಪಾಯಿ ಬಾಕಿ ಉಳಿಸಿಕೊಂಡಿದ್ದು, ನಾವು ಕಾಫಿ ತೋಟದಿಂದ ತೆರಳುವುದಿಲ್ಲವೆಂದು ಪಟ್ಟು ಹಿಡಿದಿದ್ದಾರೆ.

Coffee Plantation Sieze By Union Bank In Chikkamagaluru

Recommended Video

ಯಾವುದೇ ಕಾರಣಕ್ಕೂ ಮನೆ ಮುಂದೆ ಗಾಡಿ ನಿಲ್ಲಿಸಬೇಡಿ ! | Oneindia Kannada

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ 50ಕ್ಕೂ ಹೆಚ್ಚು ಕಾರ್ಮಿಕರು. ದಯವಿಟ್ಟು.. ನಮ್ಮನ್ನು ಹೊರ ಕಳಿಸಬೇಡಿ ಅಂತ ಅಂಗಲಾಚುತ್ತಿದ್ದಾರೆ. ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

English summary
The Vatekhan Coffee Estate of Chirakamagaluru Taluk, Hirakolalu, has been acquired by Chikmagaluru Union Bank.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X