ಕಾಂಗ್ರೆಸ್ ಸರ್ಕಾರ ಹಿಂದೂ ದ್ವೇಷಿಯಾಗಿದೆ: ಪ್ರಮೋದ್ ಮುತಾಲಿಕ್ ವಾಗ್ದಾಳಿ
ಚಿಕ್ಕಮಗಳೂರು, ನವೆಂಬರ್, 05: ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಹಿಂದೂ ದ್ವೇಷ ಸರ್ಕಾರವಾಗಿದೆ, ಹಿಂದೂ ಕಾರ್ಯಕರ್ತರ ಜೈಲಿಗಟ್ಟೋದನ್ನೇ ಸರ್ಕಾರ ಮಾಡುತ್ತಿದೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಚಿಕ್ಕಮಗಳೂರಿನಲ್ಲಿ ವಾಗ್ದಾಳಿ ನಡೆಸಿದರು.
ಚಿಕ್ಕಮಗಳೂರಿನಲ್ಲಿ ಮಾತಾನಾಡಿದ ಅವರು, ಹುಲಿ ಉಗುರು ವಿಚಾರದಲ್ಲಿ ನೋಟೀಸ್ ಇಲ್ಲದೆ ಅರ್ಚಕರನ್ನು ಬಂಧಿಸಿದ್ದರು. ಆದರೆ ಶಾಖಾದ್ರಿ ಮನೆಯಲ್ಲಿ ಚಿರತೆ ಚರ್ಮ ಸಿಕ್ಕಿದೆ, ಆದರೂ ಇನ್ನೂ ಬಂಧನ ಮಾಡಿಲ್ಲ. ಶಾಖಾದ್ರಿಗಾದ್ರೆ ನೋಟೀಸ್ ಕೊಡ್ತೀರಾ ನೀವು, ನಾಟಕ ಮಾಡ್ತೀರಾ ಎಂದು ಪ್ರಶ್ನಿಸುವ ಮೂಲಕ ಕಿಡಿಕಾರಿದರು. ಹಿಂದೂ ದ್ರೋಹಿಗಳಿದ್ದೀರಾ ನೀವು. ಇದು ಸಹನೆ ಆಗುವಂತದ್ದಲ್ಲ, ಇದು ಬಹಳ ದಿನ ನಡೆಯಲ್ಲ, ಎಚ್ಚರಿಕೆಯಿಂದಿರಿ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಇನ್ನು ಗಣೇಶನ ಕುರಿತು ಪಂಡಿತಾರಾಧ್ಯಶ್ರಿ ಅವರ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಪಂಡಿತಾರಾಧ್ಯರ ಬಗ್ಗೆ ಅಪಾರವಾದ ಗೌರವ ಇದೆ. ನಾಟಕ, ಉತ್ಸವದ ಮೂಲಕ ಸಾಮಾಜಿಕವಾಗಿ ಬಹಳ ದೊಡ್ಡ ಕ್ರಾಂತಿ ಮಾಡಿದ ಮಠ ಅದು, ಅವರು ಸಣ್ಣ ಹೇಳಿಕೆ ನೀಡಿ ವಿವಾದ ಸೃಷ್ಟಿ ಮಾಡಿದ್ದು ಸರಿಯಲ್ಲ. ನಿಮಗೆ ಶೋಭೆ ತರಲ್ಲ ಎಂದರು.
ಸಾವಿರಾರು ವರ್ಷಗಳಿಂದ ಈ ದೇಶದಲ್ಲಿ ಶುಭಕಾರ್ಯಗಳಿಗೆ ಮೊದಲ ಪೂಜೆ ಗಣೇಶನಿಗೆ, ಗಣೇಶನ ಅಪ್ಪ ಶಿವನನ್ನ ಪೂಜೆ ಮಾಡ್ತೀರಾ? ಗಣೇಶ ಬೇಡ್ವಾ? ನಿಮ್ಮ ಲಾಜಿಕ್ ಏನು?. ಇನ್ನು ವಚನಗಳನ್ನು ಹೇಳಬೇಕು, ಉಳಿಸಬೇಕು ಎಂಬ ಹೇಳಿಕೆಗೆ ನಮ್ಮ ವಿರೋಧವಿಲ್ಲ. ಗಣೇಶನ ಪೂಜೆಗೆ ಏಕೆ ವಿರೋಧ ಮಾಡ್ತೀರಾ? ಎಂದು ಪ್ರಶ್ನಿಸಿದರು.
ತಪ್ಪು ಅಂತಾ ಹೇಳ್ತೀರಾ, ಮೂಢ ನಂಬಿಕೆ ಅಂತಾ ಏಕೆ ಹೇಳ್ತೀರಾ? ಸಾವಿರಾರು ವರ್ಷಗಳ ನಂಬಿಕೆ ವಿರೋಧಿಸೋದು ಸಂವಿಧಾನ ವಿರೋಧಿಯಾಗುತ್ತದೆ. ಸಾರ್ವಜನಿಕವಾಗಿ ಒಂದು ನಂಬಿಕೆ ಘಾಸಿಗೊಳಿಸುವ ಗುರುಗಳೇ ನಿಮಗೆ ಶೋಭೆ ತರಲ್ಲ. ನಿಮ್ಮ ಹೇಳಿಕೆ ಹಿಂಪಡೆಯಿರಿ ಎಂದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications