Get Updates
Get notified of breaking news, exclusive insights, and must-see stories!

ಕಾಂಗ್ರೆಸ್ ಸರ್ಕಾರ ಹಿಂದೂ ದ್ವೇಷಿಯಾಗಿದೆ: ಪ್ರಮೋದ್ ಮುತಾಲಿಕ್ ವಾಗ್ದಾಳಿ

ಚಿಕ್ಕಮಗಳೂರು, ನವೆಂಬರ್‌, 05: ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಹಿಂದೂ ದ್ವೇಷ ಸರ್ಕಾರವಾಗಿದೆ, ಹಿಂದೂ ಕಾರ್ಯಕರ್ತರ ಜೈಲಿಗಟ್ಟೋದನ್ನೇ ಸರ್ಕಾರ ಮಾಡುತ್ತಿದೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಚಿಕ್ಕಮಗಳೂರಿನಲ್ಲಿ ವಾಗ್ದಾಳಿ ನಡೆಸಿದರು.

ಚಿಕ್ಕಮಗಳೂರಿನಲ್ಲಿ ಮಾತಾನಾಡಿದ ಅವರು, ಹುಲಿ ಉಗುರು ವಿಚಾರದಲ್ಲಿ ನೋಟೀಸ್ ಇಲ್ಲದೆ ಅರ್ಚಕರನ್ನು ಬಂಧಿಸಿದ್ದರು. ಆದರೆ ಶಾಖಾದ್ರಿ ಮನೆಯಲ್ಲಿ ಚಿರತೆ ಚರ್ಮ ಸಿಕ್ಕಿದೆ, ಆದರೂ ಇನ್ನೂ ಬಂಧನ ಮಾಡಿಲ್ಲ. ಶಾಖಾದ್ರಿಗಾದ್ರೆ ನೋಟೀಸ್ ಕೊಡ್ತೀರಾ ನೀವು, ನಾಟಕ ಮಾಡ್ತೀರಾ ಎಂದು ಪ್ರಶ್ನಿಸುವ ಮೂಲಕ ಕಿಡಿಕಾರಿದರು. ಹಿಂದೂ ದ್ರೋಹಿಗಳಿದ್ದೀರಾ ನೀವು. ಇದು ಸಹನೆ ಆಗುವಂತದ್ದಲ್ಲ, ಇದು ಬಹಳ ದಿನ ನಡೆಯಲ್ಲ, ಎಚ್ಚರಿಕೆಯಿಂದಿರಿ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

Congress government is Hindus hater says Pramod Muthalik

ಇನ್ನು ಗಣೇಶನ ಕುರಿತು ಪಂಡಿತಾರಾಧ್ಯಶ್ರಿ ಅವರ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಪಂಡಿತಾರಾಧ್ಯರ ಬಗ್ಗೆ ಅಪಾರವಾದ ಗೌರವ ಇದೆ. ನಾಟಕ, ಉತ್ಸವದ ಮೂಲಕ ಸಾಮಾಜಿಕವಾಗಿ ಬಹಳ ದೊಡ್ಡ ಕ್ರಾಂತಿ ಮಾಡಿದ ಮಠ ಅದು, ಅವರು ಸಣ್ಣ ಹೇಳಿಕೆ ನೀಡಿ ವಿವಾದ‌ ಸೃಷ್ಟಿ ಮಾಡಿದ್ದು ಸರಿಯಲ್ಲ. ನಿಮಗೆ ಶೋಭೆ ತರಲ್ಲ ಎಂದರು.

ಸಾವಿರಾರು ವರ್ಷಗಳಿಂದ ಈ‌ ದೇಶದಲ್ಲಿ ಶುಭಕಾರ್ಯಗಳಿಗೆ ಮೊದಲ ಪೂಜೆ ಗಣೇಶನಿಗೆ, ಗಣೇಶನ ಅಪ್ಪ ಶಿವನನ್ನ ಪೂಜೆ ಮಾಡ್ತೀರಾ? ಗಣೇಶ ಬೇಡ್ವಾ? ನಿಮ್ಮ ಲಾಜಿಕ್‌ ಏನು?. ಇನ್ನು ವಚನಗಳನ್ನು ಹೇಳಬೇಕು, ಉಳಿಸಬೇಕು ಎಂಬ ಹೇಳಿಕೆಗೆ ನಮ್ಮ ವಿರೋಧವಿಲ್ಲ. ಗಣೇಶನ ಪೂಜೆಗೆ ಏಕೆ ವಿರೋಧ ಮಾಡ್ತೀರಾ? ಎಂದು ಪ್ರಶ್ನಿಸಿದರು.

ತಪ್ಪು ಅಂತಾ ಹೇಳ್ತೀರಾ, ಮೂಢ ನಂಬಿಕೆ ಅಂತಾ ಏಕೆ ಹೇಳ್ತೀರಾ? ಸಾವಿರಾರು ವರ್ಷಗಳ ನಂಬಿಕೆ ವಿರೋಧಿಸೋದು ಸಂವಿಧಾನ ವಿರೋಧಿಯಾಗುತ್ತದೆ. ಸಾರ್ವಜನಿಕವಾಗಿ ಒಂದು ನಂಬಿಕೆ ಘಾಸಿಗೊಳಿಸುವ ಗುರುಗಳೇ ನಿಮಗೆ ಶೋಭೆ ತರಲ್ಲ. ನಿಮ್ಮ ಹೇಳಿಕೆ ಹಿಂಪಡೆಯಿರಿ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+