Lok Sabha Election: ಕಾಂಗ್ರೆಸ್ಅನ್ನು ದುರ್ಬಲ ಎಂದು ಪರಿಗಣಿಸಲ್ಲ- ಸಿ.ಟಿ.ರವಿ
ಚಿಕ್ಕಮಗಳೂರು, ಮಾರ್ಚ್ 18: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಅನ್ನು ದುರ್ಬಲ ಅಂತಾ ಪರಿಗಣಿಸಲ್ಲ. ಕಾಂಗ್ರೆಸ್ಗೆ ಪ್ರಬಲ ಅಭ್ಯರ್ಥಿಗಳು ಇಲ್ಲದೆ ಇರಬಹುದು. ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿ ವಿರೋಧಿ ಮತಗಳು ಕಾಂಗ್ರೆಸ್ಗೆ ಹೋಗುತ್ತದೆ. ಯುದ್ಧ ಮತ್ತು ಚುನಾವಣೆಯನ್ನು ಹಗುರವಾಗಿ ಪರಿಗಣಿಸಲ್ಲ ಎಂದು ಮಾಜಿ ಸಚಿವ ಸಿ.ಟಿ ರವಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುದ್ಧ ಮತ್ತು ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು, ಗಂಭೀರವಾಗಿ ಎದುರಿಸಬೇಕು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೇಲ್ನೋಟಕ್ಕೆ ಎಲ್ಲ ಕಡೆ ಪ್ರಧಾನಿ ನರೇಂದ್ರ ಮೋದಿ ಪರ ಅಲೆ ಇರುವುದು ಅರ್ಥವಾಗುತ್ತಿದೆ ಎಂದರು.

ಇನ್ನು ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ವೋಟ್ ಹಾಕಿದ ಜನರೂ ಕೂಡ ಈ ಬಾರಿ ನಾವು ದೇಶಕ್ಕಾಗಿ ಮೋದಿಗೆ ವೋಟ್ ಹಾಕುತ್ತೇವೆ ಎನ್ನುತ್ತಿದ್ದಾರೆ. ನಾವೇನೂ ದೇಶ ಭಕ್ತರಲ್ಲವೇ..?, ನಮಗೂ ಮೋದಿ ಪ್ರಧಾನಿ ಆಗುವುದು ಇಷ್ಟ ಎನ್ನುತ್ತಿದ್ದಾರೆ. ಕ್ಷೇತ್ರದ ಅಭ್ಯರ್ಥಿಗಳ ಬಗ್ಗೆ ಚರ್ಚೆ ಆಗುತ್ತಿರುವುದು ಕಡಿಮೆ. ಎಲ್ಲಾ ಕಡೆ ಮೋದಿ ಮೋದಿ ಕೇಳುತ್ತಿದೆ ಎಂದರು.
ಚುನಾವಣೆಯನ್ನು ನಾವು ಹಗುರವಾಗಿ ಪರಿಗಣಿಸಬಾರದು. ಗಂಭೀರವಾಗಿ ತೆಗೆದುಕೊಳ್ಳಬೇಕು, ನಾವು ಟಾಸ್ಕ್ ಕೊಟ್ಟಿದ್ದೇವೆ. ಪ್ರತಿ ಬೂತ್ ನಲ್ಲಿ ಮೋದಿಜೀ, ಬಿಜೆಪಿ ಗೆಲ್ಲಿಸಿ ಅಂತಾ ಟಾಸ್ಕ್ ಕೊಟ್ಟಿದ್ದೇವೆ. ಪ್ರತಿ ಬೂತ್ ಗೆದ್ದರೆ ಮೋದಿಜೀ ಗೆದ್ದ ಹಾಗೆ. ತಾನಾಗೀಯೇ ಮೋದಿ ಪ್ರಧಾನಿಯಾಗುತ್ತಾರೆ. ಅದೇ ನಮ್ಮ ಗುರಿ ಎಂದು ಹೇಳಿದರು.
ಕಾಂಗ್ರೆಸ್ನಲ್ಲಿ ಯಾರು ಅಭ್ಯರ್ಥಿ ಯಾರು ಆಗುತ್ತಾರೋ ಎನ್ನುವುದು ಮುಖ್ಯವಲ್ಲ. ಕಾಂಗ್ರೆಸ್ಗೆ ಒಂದಷ್ಟು ಮತ ಇದೆ ಎನ್ನುವುದನ್ನು ನಾವು ಮರೆಯುವ ಹಾಗಿಲ್ಲ ಎಂದು ಮಾಜಿ ಶಾಸಕ ಸಿ.ಟಿ ರವಿ ಲೋಕಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಯಡಿಯೂರಪ್ಪ- ಈಶ್ವರಪ್ಪನವರದ್ದು ನಾಲ್ಕು ದಶಕ ಮೀರಿದ ಸಂಬಂಧ
ಇನ್ನು ಬಿಜೆಪಿ ಲೋಕಸಭಾ ಟಿಕೆಟ್ ಹಂಚಿಕೆ ಬಳಿಕ ಪಕ್ಷದ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ ಅಸಮಾಧಾನದ ಬಗ್ಗೆ ಮಾತನಾಡಿದ ಸಿ.ಟಿ ರವಿ, ಬಿ.ಎಸ್ ಯಡಿಯೂರಪ್ಪ ಹಾಗೂ ಕೆ.ಎಸ್ ಈಶ್ವರಪ್ಪನವರ ಸಂಬಂಧ ನಾಲ್ಕು ದಶಕ ಮೀರಿದ್ದು. ಒಂದು ಕಾಲದಲ್ಲಿ ವ್ಯವಹಾರವನ್ನೂ ಜಂಟಿಯಾಗಿಯೇ ಮಾಡುತ್ತಿದ್ದರು ಎನ್ನುವುದನ್ನು ಕೇಳಿದ್ದೇವೆ. ಅವರಿಗಿಂತ ಹತ್ತಿರವಾದರೂ ಯಾರು ಇಲ್ಲ. ಎನೇ ಸಮಸ್ಯೆ ಇದ್ದರೂ ಅವರಿಬ್ಬರೇ ಬಗೆಹರಿಸಿಕೊಳ್ಳುತ್ತಾರೆ ಎಂದರು.
-
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications