Lok Sabha Election: ಕಾಂಗ್ರೆಸ್ಅನ್ನು ದುರ್ಬಲ ಎಂದು ಪರಿಗಣಿಸಲ್ಲ- ಸಿ.ಟಿ.ರವಿ
ಚಿಕ್ಕಮಗಳೂರು, ಮಾರ್ಚ್ 18: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಅನ್ನು ದುರ್ಬಲ ಅಂತಾ ಪರಿಗಣಿಸಲ್ಲ. ಕಾಂಗ್ರೆಸ್ಗೆ ಪ್ರಬಲ ಅಭ್ಯರ್ಥಿಗಳು ಇಲ್ಲದೆ ಇರಬಹುದು. ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿ ವಿರೋಧಿ ಮತಗಳು ಕಾಂಗ್ರೆಸ್ಗೆ ಹೋಗುತ್ತದೆ. ಯುದ್ಧ ಮತ್ತು ಚುನಾವಣೆಯನ್ನು ಹಗುರವಾಗಿ ಪರಿಗಣಿಸಲ್ಲ ಎಂದು ಮಾಜಿ ಸಚಿವ ಸಿ.ಟಿ ರವಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುದ್ಧ ಮತ್ತು ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು, ಗಂಭೀರವಾಗಿ ಎದುರಿಸಬೇಕು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೇಲ್ನೋಟಕ್ಕೆ ಎಲ್ಲ ಕಡೆ ಪ್ರಧಾನಿ ನರೇಂದ್ರ ಮೋದಿ ಪರ ಅಲೆ ಇರುವುದು ಅರ್ಥವಾಗುತ್ತಿದೆ ಎಂದರು.

ಇನ್ನು ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ವೋಟ್ ಹಾಕಿದ ಜನರೂ ಕೂಡ ಈ ಬಾರಿ ನಾವು ದೇಶಕ್ಕಾಗಿ ಮೋದಿಗೆ ವೋಟ್ ಹಾಕುತ್ತೇವೆ ಎನ್ನುತ್ತಿದ್ದಾರೆ. ನಾವೇನೂ ದೇಶ ಭಕ್ತರಲ್ಲವೇ..?, ನಮಗೂ ಮೋದಿ ಪ್ರಧಾನಿ ಆಗುವುದು ಇಷ್ಟ ಎನ್ನುತ್ತಿದ್ದಾರೆ. ಕ್ಷೇತ್ರದ ಅಭ್ಯರ್ಥಿಗಳ ಬಗ್ಗೆ ಚರ್ಚೆ ಆಗುತ್ತಿರುವುದು ಕಡಿಮೆ. ಎಲ್ಲಾ ಕಡೆ ಮೋದಿ ಮೋದಿ ಕೇಳುತ್ತಿದೆ ಎಂದರು.
ಚುನಾವಣೆಯನ್ನು ನಾವು ಹಗುರವಾಗಿ ಪರಿಗಣಿಸಬಾರದು. ಗಂಭೀರವಾಗಿ ತೆಗೆದುಕೊಳ್ಳಬೇಕು, ನಾವು ಟಾಸ್ಕ್ ಕೊಟ್ಟಿದ್ದೇವೆ. ಪ್ರತಿ ಬೂತ್ ನಲ್ಲಿ ಮೋದಿಜೀ, ಬಿಜೆಪಿ ಗೆಲ್ಲಿಸಿ ಅಂತಾ ಟಾಸ್ಕ್ ಕೊಟ್ಟಿದ್ದೇವೆ. ಪ್ರತಿ ಬೂತ್ ಗೆದ್ದರೆ ಮೋದಿಜೀ ಗೆದ್ದ ಹಾಗೆ. ತಾನಾಗೀಯೇ ಮೋದಿ ಪ್ರಧಾನಿಯಾಗುತ್ತಾರೆ. ಅದೇ ನಮ್ಮ ಗುರಿ ಎಂದು ಹೇಳಿದರು.
ಕಾಂಗ್ರೆಸ್ನಲ್ಲಿ ಯಾರು ಅಭ್ಯರ್ಥಿ ಯಾರು ಆಗುತ್ತಾರೋ ಎನ್ನುವುದು ಮುಖ್ಯವಲ್ಲ. ಕಾಂಗ್ರೆಸ್ಗೆ ಒಂದಷ್ಟು ಮತ ಇದೆ ಎನ್ನುವುದನ್ನು ನಾವು ಮರೆಯುವ ಹಾಗಿಲ್ಲ ಎಂದು ಮಾಜಿ ಶಾಸಕ ಸಿ.ಟಿ ರವಿ ಲೋಕಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಯಡಿಯೂರಪ್ಪ- ಈಶ್ವರಪ್ಪನವರದ್ದು ನಾಲ್ಕು ದಶಕ ಮೀರಿದ ಸಂಬಂಧ
ಇನ್ನು ಬಿಜೆಪಿ ಲೋಕಸಭಾ ಟಿಕೆಟ್ ಹಂಚಿಕೆ ಬಳಿಕ ಪಕ್ಷದ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ ಅಸಮಾಧಾನದ ಬಗ್ಗೆ ಮಾತನಾಡಿದ ಸಿ.ಟಿ ರವಿ, ಬಿ.ಎಸ್ ಯಡಿಯೂರಪ್ಪ ಹಾಗೂ ಕೆ.ಎಸ್ ಈಶ್ವರಪ್ಪನವರ ಸಂಬಂಧ ನಾಲ್ಕು ದಶಕ ಮೀರಿದ್ದು. ಒಂದು ಕಾಲದಲ್ಲಿ ವ್ಯವಹಾರವನ್ನೂ ಜಂಟಿಯಾಗಿಯೇ ಮಾಡುತ್ತಿದ್ದರು ಎನ್ನುವುದನ್ನು ಕೇಳಿದ್ದೇವೆ. ಅವರಿಗಿಂತ ಹತ್ತಿರವಾದರೂ ಯಾರು ಇಲ್ಲ. ಎನೇ ಸಮಸ್ಯೆ ಇದ್ದರೂ ಅವರಿಬ್ಬರೇ ಬಗೆಹರಿಸಿಕೊಳ್ಳುತ್ತಾರೆ ಎಂದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications