ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ; ಸಿಎಂ
ಚಿಕ್ಕಮಗಳೂರು, ಸೆಪ್ಟೆಂಬರ್ 12: "ನಮ್ಮ ವಿರೋಧ ಪಕ್ಷ ಯಾವಾಗಲೂ ಚಟುವಟಿಕೆಯಿಂದ ಇರಬೇಕು. ಹೀಗಾಗಿ ಕಾಂಗ್ರೆಸ್ ನವರು ತಮ್ಮ ಅಸ್ತಿತ್ವ ತೋರಲು ಪ್ರತಿಭಟನೆ ನಡೆಸುತ್ತಿದ್ದಾರೆ ಅಷ್ಟೆ" ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾಂಗ್ರೆಸ್ ನವರಿಗೆ ತಿರುಗೇಟು ನೀಡಿದ್ದಾರೆ.
ಶೃಂಗೇರಿಯ ಶಾರದಾಂಬೆಯ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, "ರಾಜ್ಯದಲ್ಲಿ ಸಂಭವಿಸಿದ ಪ್ರವಾಹಕ್ಕೆ ಹಾಗೂ ಡಿ.ಕೆ.ಶಿವಕುಮಾರ್ ಬಂಧನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಲಾಗುತ್ತಿದೆ. ಆದರೆ ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನದಲ್ಲಿರುವುದರಿಂದ ಅಸ್ತಿತ್ವ ಉಳಿಸಿಕೊಳ್ಳಲು ಪ್ರತಿಭಟನೆ ಮಾಡಬೇಕಾಗಿರುವುದು ಸಹಜವೇ" ಎಂದು ಹೇಳಿದರು.

"ಶೃಂಗೇರಿ ಶಾರದಾಂಬೆ ಹಾಗೂ ಗೌರಿಗದ್ದೆಯಲ್ಲಿ ಪೂಜೆ ನಡೆಸಲು ಬಂದಿದ್ದೇನೆ. ಹಿಂದೆ ಮಳೆ ಬರಲೆಂದು ಪೂಜೆ ಮಾಡುತ್ತಿದ್ದೆವು. ಈಗ ಮಳೆ ನಿಲ್ಲಲಿ ಎಂದು ಪೂಜೆ ಮಾಡಬೇಕಾಗಿದೆ. ಶೀಘ್ರದಲ್ಲಿ 1 ಲಕ್ಷ ರೂಪಾಯಿಯನ್ನು ಸಂತ್ರಸ್ತರ ಖಾತೆಗೆ ಜಮೆ ಮಾಡಲಾಗುವುದು" ಎಂದು ತಿಳಿಸಿದರ












Click it and Unblock the Notifications