ಕಾಂಗ್ರೆಸ್ ಸಿಂಪಥಿ ಕಳೆದುಕೊಂಡಾಯ್ತು ಎಂದು ಅಣಕಿಸಿದ ಶೋಭಾ ಕರಂದ್ಲಾಜೆ
Recommended Video
ಚಿಕ್ಕಮಗಳೂರು, ಸೆಪ್ಟೆಂಬರ್ 4: "ಕಾಂಗ್ರೆಸ್ ಜನರ ಸಿಂಪಥಿಯನ್ನು ಕಳೆದುಕೊಂಡು ಈ ಮಟ್ಟಕ್ಕೆ ಇಳಿದಿದೆ. ಇಂಥದ್ದನ್ನ ಮಾಡಿ ಮಾಡಿಯೇ ಅವರು ಜನರ ಕರುಣೆಯನ್ನೂ ಕಳೆದುಕೊಂಡಿರೋದು" ಎಂದು ವ್ಯಂಗ್ಯವಾಡಿದ್ದಾರೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ.
ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಕುರಿತು ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, "ಡಿ.ಕೆ.ಶಿವಕುಮಾರ್ ಬಂಧನ ಕಾನೂನಿನ ಪ್ರಕಾರವೇ ಆಗಿದೆ. ನಿರಂತರ ಅಧ್ಯಯನ ಹಾಗೂ ತನಿಖೆಯನ್ನು ಸಂಸ್ಥೆಗಳು ಮಾಡಿವೆ. ಅದರ ಆಧಾರದಲ್ಲಿ ಅವರ ಬಂಧನವಾಗಿರಬಹುದು. ದೇಶದ 70 ವರ್ಷದ ಇತಿಹಾಸದಲ್ಲಿ ಇಂಥ ಹಲವು ಬಂಧನ, ತನಿಖೆಗಳು ಆಗಿವೆ. ಇಡಿ ಅಥವಾ ಸಿಬಿಐ ಯಾವುದೂ ನಾವು ಹುಟ್ಟು ಹಾಕಿದ್ದಲ್ಲ. ಇವೆಲ್ಲಾ ಹುಟ್ಟಲು ಅವರೇ ಕಾರಣೀಕರ್ತರು. ಇವತ್ತು ಇವರು ಮಾಡುತ್ತಿರುವ ಹೋರಾಟ ಯಾರ ಪರ ಎಂದು ಅರ್ಥ ಆಗ್ತಿಲ್ಲ. ಯಾರ ಪರ ನಿಂತಿದ್ದಾರೆ, ಯಾಕಾಗಿ ನಿಲ್ತಾರೆ?" ಎಂದು ಪ್ರಶ್ನಿಸಿದರು.

"ಹಾಗಿದ್ದರೆ ಹಿಂದೆ ಅವರು ಮಾಡಿದ ಎಲ್ಲಾ ಬಂಧನವೂ ರಾಜಕೀಯ ಪ್ರೇರಿತವೇ? ರಾಜಕೀಯ ಪ್ರೇರಿತವಾಗಿಯೇ ಯುಪಿಎ ಕಾಲದಲ್ಲಿ ಬಂಧನವಾಗಿದೆಯಾ? ಇದಕ್ಕೆಲ್ಲಾ ಕಾಂಗ್ರೆಸ್ ಉತ್ತರ ಕೊಡಬೇಕಾದ ಜಾಗದಲ್ಲಿದೆ. ಯಾರು ಪ್ರಶ್ನೆ ಕೇಳ್ತಿದ್ದಾರೆ, ಅವರೇ ಉತ್ತರ ಹೇಳಬೇಕು" ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
"ಡಿಕೆಶಿ ಸಾಮಾನ್ಯ ವ್ಯಕ್ತಿಯಲ್ಲ. ಪ್ರಭಾವಿ ಮುಖಂಡ. ಸುಮ್ಮನೆ ಅವರ ಬಂಧನವಾಗಲ್ಲ. ದೊಡ್ಡ ವ್ಯಕ್ತಿ, ಮಂತ್ರಿಯಾದವರ ಬಂಧನವಾಗುತ್ತದೆ ಎಂದರೆ ಅದರ ಹಿಂದೆ ಬಲವಾದ ಸಾಕ್ಷಿ ಇರುತ್ತೆ. 70 ವರ್ಷದಲ್ಲಿ ಈ ದೇಶವನ್ನು ಹೇಗೆ ಲೂಟಿ ಮಾಡಿದ್ರು, ಯುಪಿಯ ಅವಧಿಯಲ್ಲಿ ಯಾವ-ಯಾವ ಇಲಾಖೆಯಲ್ಲಿ ಎಷ್ಟು ಲೂಟಿ ಮಾಡಿದರು, ಅದೆಲ್ಲ ಸಾಕ್ಷಿಗಳು ಇವತ್ತು ನಮ್ಮ ಕಣ್ಣ ಮುಂದಿದೆ. ಹಲವರಿಗೆ ಶಿಕ್ಷೆಯಾಗಿದೆ. ಮತ್ತೂ ಹಲವರಿಗೆ ಶಿಕ್ಷೆಯಾಗಲಿದೆ. ಕಾಂಗ್ರೆಸ್ ಯಾರನ್ನು ಬೇಕಾದರೂ ಸಮರ್ಥನೆ ಮಾಡಿಕೊಳ್ಳುತ್ತದೆ. ಇದು ವ್ಯವಸ್ಥೆಗೆ ಅಣಕ" ಎಂದು ಹೇಳಿದರು.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications