ಬೆಳಗಾವಿಯಲ್ಲಿ ಮತ್ತೆ ಶಿವಾಜಿ ಪ್ರತಿಮೆ ಲೋಕಾರ್ಪಣೆ: ಕಾಂಗ್ರೆಸ್ನವರಿಗೆ ನಾಚಿಕೆ ಆಗ್ಬೇಕು: ಸಿಎಂ ಆಕ್ರೋಶ
ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕರು ಮತ್ತೆ ಶಿವಾಜಿ ಪ್ರತಿಮೆಯನ್ನು ಲೋಕಾರ್ಪಣೆ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಬಸವರಾಜ ಬೊಮ್ಮಾಯಿ ಬಾಳೆಹೊನ್ನೂರಿನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು, ಮಾರ್ಚ್, 05: ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕರು ಮತ್ತೆ ಶಿವಾಜಿ ಪ್ರತಿಮೆಯನ್ನು ಲೋಕಾರ್ಪಣೆ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಬಾಳೆಹೊನ್ನೂರಿನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ಮಾತಾನಾಡಿದ ಅವರು, ನಿಜವಾಗಿಯೂ ಇದು ಹಾಸ್ಯಾಸ್ಪದ, ಅದು ಸರ್ಕಾರದಿಂದ ನಿರ್ಮಾಣಗೊಂಡಿರುವ ಶಿವಾಜಿ ಪ್ರತಿಮೆಯಾಗಿದೆ. ಸರ್ಕಾರ ಈ ಪ್ರತಿಮೆಯನ್ನು ಅಧಿಕೃತವಾಗಿ ಉದ್ಘಾಟಿಸಿದೆ. ಈಗ ಅಲ್ಲಿಗೆ ಭೇಟಿ ಕೊಡಬಹುದು, ಗೌರವ ಸಮರ್ಪಣೆ ಮಾಡಬಹುದು. ಆದರೆ ಮತ್ತೆ ಉದ್ಘಾಟನೆ ಮಾಡುತ್ತಿರುವುದನ್ನು ಎಲ್ಲೂ ಕೇಳಿರಲಿಲ್ಲ, ನೋಡಿರಲ್ಲಿಲ್ಲ. ಇದರಿಂದ ಅಧಿಕಾರ ಚಲಾವಣೆ ಮಾಡಬೇಕು ಎಂಬ ಲಾಲಾಸೆ ಎಷ್ಟಿದೆ ಎಂಬುದು ಗೊತ್ತಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಲೋಕಾಯುಕ್ತಕ್ಕೆ ಎಲ್ಲಾ ಪವರ್ ನೀಡಿದ್ದೇವೆ
ಇನ್ನು ಲೋಕಾಯುಕ್ತಕ್ಕೆ ನಾವು ಎಲ್ಲಾ ಪವರ್ ನೀಡಿದ್ದೇವೆ. ಅವರು ಸ್ವಾತಂತ್ರ್ಯವಾಗಿ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಬಹುದು. ಇನ್ನು ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆಯಲ್ಲಿ ವಿಧಾನಸಭೆಯ ಮಂತ್ರಿಗಳ ಕಛೇರಿಯಲ್ಲಿ 25 ಲಕ್ಷ ಹಣ ಸಿಕ್ಕಿತ್ತು. ಅದು ಪುಟ್ಟಲಿಂಗಶೆಟ್ಟಿ ಅವರಿಗೆ ಸೇರಿದ ಹಣವಾಗಿತ್ತು. ಅವತ್ತು ಸರಿಯಾದ ತನಿಖೆ ನಡೆಸಿದರಾ ಎಂದು ಪ್ರಶ್ನಿಸುವ ಮೂಲಕ ಹರಿಹಾಯ್ದರು.
ಕಾಂಗ್ರೆಸ್ ವಿರುದ್ದ ಸಿಎಂ ವಾಗ್ದಾಳಿ
ಆಗ ಸಿದ್ದರಾಮಯ್ಯನವರ ಸರ್ಕಾರ ಪ್ರಕರಣವನ್ನು ಮುಚ್ಚಿಹಾಕುವ ಕೆಲಸವನ್ನ ಮಾಡಿತ್ತು. ಅಂದು ಲೋಕಾಯುಕ್ತ ಇದ್ದಿದ್ದರೆ, ಅಂದೇ ಎಲ್ಲರ ಮೇಲೆ ಕೇಸ್ ಬೀಳುತ್ತಿತ್ತು. ಆದರೆ ಕಾಂಗ್ರೆಸ್ನವರು ಭ್ರಷ್ಟಾಚಾರವನ್ನು ರಕ್ಷಣೆ ಮಾಡಿ ಮುಚ್ವಿ ಹಾಕುವ ಕೆಲಸವನ್ನು ಮಾಡಿದ್ದರು. ಇಂದು ನಾವು ಲೋಕಾಯುಕ್ತಕ್ಕೆ ಎಲ್ಲಾ ಪವರ್ ನೀಡಿದ್ದೇವೆ. ನಮ್ಮ ಪಕ್ಷದವರೇ ತಪ್ಪು ಮಾಡಿದ್ದರೂ ಕ್ರಮ ಕೈಗೊಳ್ಳಲು ಮುಂದಾಗಿದ್ದೇವೆ. ಅದು ನಮ್ಮ ನೈತಿಕತೆ ಎಂದರು.

ಈ ಪ್ರಕರಣದ ಬಗ್ಗೆ ಮಾತಾನಾಡುವ ನೈತಿಕತೆ ಕಾಂಗ್ರೆಸ್ ನಾಯಕರಿಗಿಲ್ಲ ಎಂದರು. ಇನ್ನು ಇದೇ ವೇಳೆ ಸಂಸದೆ ಸಮಲತಾ ಬಿಜೆಪಿ ಸೇರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಸಮಲತಾ ಅವರು ಇನ್ನು ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ ಎಂದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications