ಬೆಳಗಾವಿಯಲ್ಲಿ ಮತ್ತೆ ಶಿವಾಜಿ ಪ್ರತಿಮೆ ಲೋಕಾರ್ಪಣೆ: ಕಾಂಗ್ರೆಸ್ನವರಿಗೆ ನಾಚಿಕೆ ಆಗ್ಬೇಕು: ಸಿಎಂ ಆಕ್ರೋಶ
ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕರು ಮತ್ತೆ ಶಿವಾಜಿ ಪ್ರತಿಮೆಯನ್ನು ಲೋಕಾರ್ಪಣೆ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಬಸವರಾಜ ಬೊಮ್ಮಾಯಿ ಬಾಳೆಹೊನ್ನೂರಿನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು, ಮಾರ್ಚ್, 05: ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕರು ಮತ್ತೆ ಶಿವಾಜಿ ಪ್ರತಿಮೆಯನ್ನು ಲೋಕಾರ್ಪಣೆ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಬಾಳೆಹೊನ್ನೂರಿನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ಮಾತಾನಾಡಿದ ಅವರು, ನಿಜವಾಗಿಯೂ ಇದು ಹಾಸ್ಯಾಸ್ಪದ, ಅದು ಸರ್ಕಾರದಿಂದ ನಿರ್ಮಾಣಗೊಂಡಿರುವ ಶಿವಾಜಿ ಪ್ರತಿಮೆಯಾಗಿದೆ. ಸರ್ಕಾರ ಈ ಪ್ರತಿಮೆಯನ್ನು ಅಧಿಕೃತವಾಗಿ ಉದ್ಘಾಟಿಸಿದೆ. ಈಗ ಅಲ್ಲಿಗೆ ಭೇಟಿ ಕೊಡಬಹುದು, ಗೌರವ ಸಮರ್ಪಣೆ ಮಾಡಬಹುದು. ಆದರೆ ಮತ್ತೆ ಉದ್ಘಾಟನೆ ಮಾಡುತ್ತಿರುವುದನ್ನು ಎಲ್ಲೂ ಕೇಳಿರಲಿಲ್ಲ, ನೋಡಿರಲ್ಲಿಲ್ಲ. ಇದರಿಂದ ಅಧಿಕಾರ ಚಲಾವಣೆ ಮಾಡಬೇಕು ಎಂಬ ಲಾಲಾಸೆ ಎಷ್ಟಿದೆ ಎಂಬುದು ಗೊತ್ತಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಲೋಕಾಯುಕ್ತಕ್ಕೆ ಎಲ್ಲಾ ಪವರ್ ನೀಡಿದ್ದೇವೆ
ಇನ್ನು ಲೋಕಾಯುಕ್ತಕ್ಕೆ ನಾವು ಎಲ್ಲಾ ಪವರ್ ನೀಡಿದ್ದೇವೆ. ಅವರು ಸ್ವಾತಂತ್ರ್ಯವಾಗಿ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಬಹುದು. ಇನ್ನು ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆಯಲ್ಲಿ ವಿಧಾನಸಭೆಯ ಮಂತ್ರಿಗಳ ಕಛೇರಿಯಲ್ಲಿ 25 ಲಕ್ಷ ಹಣ ಸಿಕ್ಕಿತ್ತು. ಅದು ಪುಟ್ಟಲಿಂಗಶೆಟ್ಟಿ ಅವರಿಗೆ ಸೇರಿದ ಹಣವಾಗಿತ್ತು. ಅವತ್ತು ಸರಿಯಾದ ತನಿಖೆ ನಡೆಸಿದರಾ ಎಂದು ಪ್ರಶ್ನಿಸುವ ಮೂಲಕ ಹರಿಹಾಯ್ದರು.
ಕಾಂಗ್ರೆಸ್ ವಿರುದ್ದ ಸಿಎಂ ವಾಗ್ದಾಳಿ
ಆಗ ಸಿದ್ದರಾಮಯ್ಯನವರ ಸರ್ಕಾರ ಪ್ರಕರಣವನ್ನು ಮುಚ್ಚಿಹಾಕುವ ಕೆಲಸವನ್ನ ಮಾಡಿತ್ತು. ಅಂದು ಲೋಕಾಯುಕ್ತ ಇದ್ದಿದ್ದರೆ, ಅಂದೇ ಎಲ್ಲರ ಮೇಲೆ ಕೇಸ್ ಬೀಳುತ್ತಿತ್ತು. ಆದರೆ ಕಾಂಗ್ರೆಸ್ನವರು ಭ್ರಷ್ಟಾಚಾರವನ್ನು ರಕ್ಷಣೆ ಮಾಡಿ ಮುಚ್ವಿ ಹಾಕುವ ಕೆಲಸವನ್ನು ಮಾಡಿದ್ದರು. ಇಂದು ನಾವು ಲೋಕಾಯುಕ್ತಕ್ಕೆ ಎಲ್ಲಾ ಪವರ್ ನೀಡಿದ್ದೇವೆ. ನಮ್ಮ ಪಕ್ಷದವರೇ ತಪ್ಪು ಮಾಡಿದ್ದರೂ ಕ್ರಮ ಕೈಗೊಳ್ಳಲು ಮುಂದಾಗಿದ್ದೇವೆ. ಅದು ನಮ್ಮ ನೈತಿಕತೆ ಎಂದರು.

ಈ ಪ್ರಕರಣದ ಬಗ್ಗೆ ಮಾತಾನಾಡುವ ನೈತಿಕತೆ ಕಾಂಗ್ರೆಸ್ ನಾಯಕರಿಗಿಲ್ಲ ಎಂದರು. ಇನ್ನು ಇದೇ ವೇಳೆ ಸಂಸದೆ ಸಮಲತಾ ಬಿಜೆಪಿ ಸೇರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಸಮಲತಾ ಅವರು ಇನ್ನು ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ ಎಂದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications