ರಂಗೇನಹಳ್ಳಿ: ಯಾರ ಹೆಂಡ್ತಿ ಪತಿವ್ರತೆನೋ ಅವರೆಲ್ಲ ಬಿಜೆಪಿಗೆ ವೋಟ್ ಹಾಕಿ: ಸ್ಟೇಟಸ್ ಹಾಕಿದ್ದ ಬಜರಂಗದಳ ಕಾರ್ಯಕರ್ತನಿಗೆ ಗೂಸಾ
ಚಿಕ್ಕಮಗಳೂರು, ಮೇ, 11: ನಿನ್ನೆಯಷ್ಟೇ ರಾಜ್ಯ ವಿಧಾನಸಭೆ ಚುನಾವಣೆಯ ಮತದಾನ ನಡೆದಿದ್ದು, ಈ ವೇಳೆ ಹಲವು ಕ್ಷೇತ್ರಗಳ ಮತಗಟ್ಟೆಗಳ ಬಳಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಗಲಾಟೆಗಳು ನಡೆದವು. ಅದೇ ರೀತಿ ರಂಗೇನಹಳ್ಳಿಯಲ್ಲಿ ಮತದಾನ ಮಾಡಿದ ತಕ್ಷಣ ಬಜರಂಗದಳ ಕಾರ್ಯಕರ್ತನೊಬ್ಬ ಯಾರ ಹೆಂಡತಿ ಪತಿವ್ರತೆನೋ ಅವರೆಲ್ಲ ಬಿಜೆಪಿಗೆ ವೋಟ್ ಹಾಕಿ ಎಂದು ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದು, ಇದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.
ತರೀಕೆರೆ ತಾಲೂಕಿನ ರಂಗೇನಹಳ್ಳಿಯ ಗ್ರಾಮದ ನಿವಾಸಿಯಾದ ಹಾಗೂ ಭಜರಂಗದಳ ಕಾರ್ಯಕರ್ತ ಕಾರ್ತಿಕ್ ಎಂಬಾತ ತನ್ನ ವ್ಯಾಟ್ಸಪ್ ಸ್ಟೇಟಸ್ನಲ್ಲಿ ಯಾರ ಹೆಂಡತಿ ಪತಿವ್ರತೆನೋ ಅವರೆಲ್ಲ ಬಿಜೆಪಿಗೆ ವೋಟ್ ಹಾಕುತ್ತಾರೆ ಎಂದು ಬರೆದುಕೊಂಡಿದ್ದಾರೆ. ಇದೀಗ ಇದೇ ವ್ಯಾಟ್ಸಪ್ ಸ್ಟೇಟಸ್ ಕಾಂಗ್ರೆಸ್ಸಿಗರನ್ನು ನಿದ್ದೆಗೆಡುವಂತೆ ಮಾಡಿದೆ. ಅಲ್ಲದೆ ಜನಾಕ್ರೋಶಕ್ಕೂ ಕಾರಣವಾಗಿದೆ.

ಅಲ್ಲದೆ ಈ ಸ್ಟೇಟಸ್ ನೋಡಿ ರೊಚ್ಚಿಗೆದ್ದ ಸ್ಥಳೀಯರು ರಾತ್ರೋ ರಾತ್ರಿ ಲಕ್ಕವಳ್ಳಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆಯೂ ನಡೆದಿದೆ. ಮತ್ತೊಂದೆಡೆ ಈ ರೀತಿ ವಿವಾದಾತ್ಮಕ ವ್ಯಾಟ್ಸಪ್ ಸ್ಟೇಟಸ್ ಹಾಕೊಕೊಂಡ ಕಾರ್ತಿಕ್ ಬಂಧನಕ್ಕಾಗಿ ಮುಸ್ಲಿಂ ಸಂಘಟನೆಗಳು ಒತ್ತಾಯ ಮಾಡಿವೆ.
ಒಟ್ಟಿನಲ್ಲಿ ಹೇಳುವುದಾದರೆ ನಮ್ಮದು ಮೊದಲೇ ಪ್ರಜಾಪ್ರಭುತ್ವ ರಾಷ್ಟ್ರ ಆಗಿದೆ. ಅದರಲ್ಲೂ ಹೆಣ್ಣು ಮಕ್ಕಳನ್ನು ಅತೀ ಹೆಚ್ಚಾಗಿ ಗೌರವದಿಂದ ಕಾಣುವ ರಾಷ್ಟ್ರ ನಮ್ಮದು. ಆದರೆ ಇಂತಹ ಕೆಲ ಬುದ್ಧಿಗೇಡಿಗಳಿಂದ ಎಲ್ಲೋ ಒಂದು ಕಡೆ ಪ್ರಜಾಪ್ರಭುತ್ವದ ಕಗ್ಗೊಲೆ ಆಗುತ್ತಿದೆ. ಇಂತಹ ಘಟನೆಗಳು ಮುಂದಿನ ದಿನಗಳಲ್ಲಿ ಮರುಕಳಿಸಬಾರದೆಂದರೆ ಪೊಲೀಸರು ಇಂತಹ ತಿಳಿಗೇಡಿಗಳನ್ನು ಬಂಧಿಸಬೇಕು ಎಂಬುದು ಜನರ ಒತ್ತಾಯ ಆಗಿದೆ.
ಮತದಾನ ಬಹುಮುಖ್ಯ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವಾಗಿದೆ. ಒಂದು ವೇಳೆ ಈ ಬಗ್ಗೆ ಜಾಗೃತಿ ಮೂಡಿಸಬೇಕೆಂದರೆ ಸುಮಾರು ದಾರಿಗಳಿವೆ. ಆದರೆ ಒಂದು ಪಕ್ಷವನ್ನು ಇಟ್ಟುಕೊಂಡು ಅದೇ ಪಕ್ಷಕ್ಕೆ ವೋಟ್ ಹಾಕಬೇಕೆಂಬುದು ಯಾವ ರೀತಿಯ ಕಾನೂನು. ಹೀಗೆ ವ್ಯಾಟ್ಸಪ್ ಸ್ಟೇಟಸ್ಗಳಲ್ಲಿ ಒಂದು ಪಕ್ಷವನ್ನು ಬಿಂಬಿಸುವುದಲ್ಲದೆ, ವಿವಾದಾತ್ಮಕ ಬರಹಗಳನ್ನು ಬರೆಯುವವರಿಗೆ ತಕ್ಕ ಪಾಠ ಕಲಿಸುವುದು ಪೊಲೀಸರ ಕೈಯಲ್ಲಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications