ಕೆ.ಎಸ್.ಆರ್.ಪಿ ಪೇದೆಗಳಿಗೆ ಕೊರೊನಾ ವೈರಸ್: ಶೃಂಗೇರಿ ಪೊಲೀಸ್ ಠಾಣೆ ಸೀಲ್ ಡೌನ್
ಚಿಕ್ಕಮಗಳೂರು, ಆಗಸ್ಟ್ 03: ಮಹಾಮಾರಿ ಕೊರೊನಾ ವೈರಸ್ ಪ್ರಕರಣಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇಬ್ಬರು ಕೆ.ಎಸ್.ಆರ್.ಪಿ ಪೇದೆಗಳಿಗೆ ಕೊರೊನಾ ಸೋಂಕು ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಶೃಂಗೇರಿ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಹಾವೇರಿಯಿಂದ ಶೃಂಗೇರಿಗೆ ಬಂದಿದ್ದ 12 ಕೆ.ಎಸ್.ಆರ್.ಪಿ ಪೇದೆಗಳಲ್ಲಿ ಇಬ್ಬರಿಗೆ ಕೊರೊನಾ ವೈರಸ್ ಪಾಸಿಟಿವ್ ಇತ್ತು. ಪುನರಾವರ್ತಿತ ಕರ್ತವ್ಯದ ಹಿನ್ನೆಲೆಯಲ್ಲಿ ಕೆ.ಎಸ್.ಆರ್.ಪಿ. ತುಕಡಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಗೆ ಬಂದಿದ್ದರು.

ಇನ್ನುಳಿದ 10 ಕೆ.ಎಸ್.ಆರ್.ಪಿ ಸಿಬ್ಬಂದಿಗಳನ್ನು ಕ್ವಾರಂಟೈನ್ ಘಟಕಕ್ಕೆ ಶಿಫ್ಟ್ ಮಾಡಲಾಗಿದೆ. ಜೊತೆಗೆ ಶೃಂಗೇರಿ ಪೊಲೀಸ್ ಠಾಣೆಯ 29 ಪೊಲೀಸ್ ಪೇದೆಗಳಿಗೆ ಹೋಂ ಕ್ವಾರಂಟೈನ್ ನಲ್ಲಿರಲು ಸೂಚಿಸಲಾಗಿದೆ.












Click it and Unblock the Notifications