ಚೆಕ್ ಬೌನ್ಸ್ ಪ್ರಕರಣ : ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ
ಚಿಕ್ಕಮಗಳೂರು, ಮಾರ್ಚ್ 30: ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದ್ದು, ಚೆಕ್ ಬೌನ್ಸ್ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಅಲ್ಲದೇ ಶಾಸಕರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಚಿಕ್ಕಮಗಳೂರು ಎಸ್ಪಿಗೆ ನೋಟಿಸ್ ನೀಡಿದೆ.
ಶಾಸಕ ಕುಮಾರಸ್ವಾಮಿ ವಿರುದ್ಧ ಚಿಕ್ಕಮಗಳೂರು ಮೂಲದ ಹೂವಪ್ಪಗೌಡ 8 ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು. ಸಾಲದ ರೂಪದಲ್ಲಿ ಹಣ ಪಡೆದು ವಂಚನೆ ಮಾಡಿರುವುದಾಗಿ ಹೂವಪ್ಪ ಗೌಡ ದೂರು ನೀಡಿದ್ದರು. ಕಳೆದ ಮೂರು ವರ್ಷದಿಂದ ಪ್ರಕರಣದ ವಿಚಾರಣೆ ನಡೆಯುತ್ತಿದೆ.

ಈ ಹಿಂದೆ ಚೆಕ್ ಬೌನ್ಸ್ ಪ್ರಕರಣದ ವಿಚಾರಣೆ ನಡೆಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಟ್ಟು ಎಂಟು ಪ್ರಕರಣಗಳಲ್ಲಿ 1 ಕೋಟಿ 38 ಲಕ್ಷದ 65 ಸಾವಿರ ರೂಪಾಯಿ ಪಾವತಿಸುವಂತೆ ಸೂಚಿಸಿತ್ತು. ಇಲ್ಲವಾದರೆ ತಲಾ 6 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಎಂದು ಆದೇಶದಲ್ಲಿ ತಿಳಿಸಿತ್ತು. ಆದರೆ 30 ದಿನದ ಒಳಗೆ ಹಣ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಕೋರ್ಟ್ ಅರೆಸ್ಟ್ ವಾರಂಟ್ ಜಾರಿ ಮಾಡಿದೆ.
ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ಗೆ ಬಿಜೆಪಿ ಶಾಸಕ ಕುಮಾರಸ್ವಾಮಿಯನ್ನು ಬಂಧಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೋಟಿಸ್ ನೀಡಿದೆ.
ನೀತಿ ಸಂಹಿತೆ ಉಲ್ಲಂಘಿಸಿದ ಎಂ.ಪಿ.ಕುಮಾರಸ್ವಾಮಿ
ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಒಂದಾದ ಮೇಲೆ ಒಂದು ಸಂಕಷ್ಟ ಎದುರಾಗುತ್ತಿದ್ದು, ಈ ಬಾರಿ ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಚಿಕ್ಕಮಗಳೂರು ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ಈ ಮಧ್ಯೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಶಾಸಕರ ವಿರುದ್ಧ ನಾನ್ ಬೇಲೇಬಲ್ ವಾರಂಟ್ ಜಾರಿಯಾಗಿದ್ದರೆ, ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿದೆ.
ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಈ ಹಿನ್ನೆಲೆ ಬುಧವಾರ (ಮಾರ್ಚ್ 29)ರಿಂದಲೇ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. ಆದರೂ ಕೂಡ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ತಮ್ಮ ಮನೆಯಲ್ಲೇ ಚೆಕ್ ವಿತರಣೆ ಮಾಡುವ ಮೂಲಕ ನೀತಿ ಸಂಹಿತೆಯನ್ನು ಉಲ್ಲಘನೆ ಮಾಡಿದ್ದಾರೆ ಎಂದು ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications